ವಿಡಿಯೋ | ಅಹಮದಾಬಾದ್ : ವಿಮಾನದ ಸ್ಪೀಕರ್ ಬಾಕ್ಸ್‌ನಲ್ಲಿ ಬಚ್ಚಿಟ್ಟಿದ್ದ ₹4.26 ಕೋಟಿ ಮೌಲ್ಯದ ಚಿನ್ನದ ಬಿಸ್ಕತ್‌ ಪತ್ತೆ

ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದುಬೈನಿಂದ ಬಂದ ಇಂಡಿಗೋ ವಿಮಾನದಲ್ಲಿ ಸ್ಪೀಕರ್ ಬಾಕ್ಸ್‌ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.26 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಆಗಮಿಸಿದ ಇಂಡಿಗೋ ಸಂಸ್ಥೆಯ ‘6E-1478’ ವಿಮಾನದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮತ್ತು ವಿಮಾನದ … Continued

ಅಕ್ರಮ ಚಿನ್ನ ಸಾಗಣೆ ಪ್ರಕರಣ : ನಟಿ ರನ್ಯಾ ರಾವ​ಗೆ 102.55 ಕೋಟಿ ರೂ. ದಂಡ

ಬೆಂಗಳೂರು : ಹೈ ಪ್ರೊಫೈಲ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಮತ್ತು ಇತರ ಮೂವರಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ನೂರಾರು ಕೋಟಿ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ. ಮಾರ್ಚ್ 3 ರಂದು, ಸಂಸ್ಥೆ 127.3 ಕೆಜಿ ಕಳ್ಳಸಾಗಣೆ ಚಿನ್ನವನ್ನು ವಶಪಡಿಸಿಕೊಂಡ ನಂತರ ರನ್ಯಾ ಅವರನ್ನು ಬಂಧಿಸಿದೆ. … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ವಿರುದ್ಧ ಕೋಫೆಪೋಸಾ ಪ್ರಕರಣ

ಬೆಂಗಳೂರು: ಚಿನ್ನಾಭರಣ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (Ranya Rao) ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (COFEPOSA ACT) 1974 ಅನ್ವಯ ದೂರು ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ … Continued

4 ತಿಂಗಳಲ್ಲಿ 49 ಕೆಜಿ ಕಳ್ಳ ಸಾಗಾಣೆ ಮಾಡಿದ್ದ ನಟಿ ರನ್ಯಾ ರಾವ್‌ ; 38 ಕೋಟಿ ರೂ. ಹವಾಲಾ ವರ್ಗಾವಣೆಗೆ ಸಹ ಆರೋಪಿಗಳ ಸಹಾಯ…

ಬೆಂಗಳೂರು: ದುಬೈಯಿಂದ ಚಿನ್ನ ಅಕ್ರಮ ಕಳ್ಳ ಸಾಗಣೆ (Gold Smuggling Case) ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಕನ್ನಡ ನಟಿ ರನ್ಯಾ ರಾವ್ (Ranya Rao) ಕುರಿತಾದ ಮತ್ತಷ್ಟು ಸಂಗತಿಗಳು ಹೊರಬಿದ್ದಿವೆ. ಈ ಪ್ರಕರಣದ 3ನೇ ಆರೋಪಿ ಸಾಹಿಲ್ ಜೈನ್ ಎಂಬಾತ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ತನಿಖಾಧಿಕಾರಿಗಳ ಮುಂದೆ ಅನೇಕ ಸಂಗತಿ ಬಾಯ್ಬಿಟ್ಟಿದ್ದಾನೆ ಎಂದು ಮೂಲಗಳು … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್‌ಗೆ ಬೆಂಗಳೂರಿನ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ನಿರಾಕರಿಸಿದೆ. ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ರನ್ಯಾ ಜಾಮೀನು ಅರ್ಜಿ ಆದೇಶವನ್ನು ಮಂಗಳವಾರ ಕಾಯ್ದಿರಿಸಿತ್ತು. ಕಾಯ್ದಿರಿಸಿದ್ದ ಜಾಮೀನು ಆದೇಶವನ್ನು ಬೆಂಗಳೂರಿನ 64ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶ ಈರಪ್ಪಣ್ಣ ಪವಡಿ … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ, 10-15 ಬಾರಿ ಕಪಾಳಮೋಕ್ಷ ; ರನ್ಯಾ ರಾವ್ ಆರೋಪ

ಬೆಂಗಳೂರು: ತನಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಮತ್ತು ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ನಟಿ ರನ್ಯಾ ರಾವ್ ಹೇಳಿದ್ದಾರೆ. ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಯ ಹೆಚ್ಚುವರಿ ಮಹಾನಿರ್ದೇಶಕರಿಗೆ (ಎಡಿಜಿ) ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ರನ್ಯಾ ರಾವ್ ಅವರು, ಅಧಿಕೃತವಾಗಿ ಹೇಳಿದಂತೆ ವಿಮಾನ ನಿಲ್ದಾಣದ ಟರ್ಮಿನಲ್‌ನಿಂದ ಅಲ್ಲ, ವಿಮಾನದಿಂದ ನೇರವಾಗಿ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಶುಕ್ರವಾರ ಪ್ರಕಟಿಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಕಿರಣ ಜವಳಿ ಅವರು “ಕಸ್ಟಮ್ಸ್‌ … Continued

ಚಿನ್ನದ ಕಳ್ಳಸಾಗಣೆ ಹಗರಣ | ‘ಯೂ ಟ್ಯೂಬ್‌ ನೋಡಿ ಚಿನ್ನ ಅಡಗಿಸಿಟ್ಟುಕೊಳ್ಳುವುದು ಕಲಿತೆ ಎಂದು ಬಾಯ್ಬಿಟ್ಟ ನಟಿ ರನ್ಯಾ ರಾವ್‌ : ವರದಿ

ಬೆಂಗಳೂರು: ₹ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್, ಚಿನ್ನ ಕಳ್ಳಸಾಗಣೆಯಲ್ಲಿ ಇದೇ ತನ್ನ ಮೊದಲ ಪ್ರಯತ್ನ ಎಂದು ಹೇಳಿಕೊಂಡಿದ್ದಾಳೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಬ್ಯಾಂಡೇಜ್‌ ಒಳಗೆ ಅಡಗಿಸಿಟ್ಟುಕೊಂಡು ಬಂದಿಳಿದ ಆಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ. ಕರ್ನಾಟಕ ಡಿಜಿಪಿ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಆದೇಶ ಮಾರ್ಚ್‌ 14ಕ್ಕೆ ಪ್ರಕಟ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್‌ 14ಕ್ಕೆ ಪ್ರಕಟಿಸುವುದಾಗಿ ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಬುಧವಾರ ಹೇಳಿದೆ. ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಅವರು ನಡೆಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ರನ್ಯಾ ರಾವ್‌ ಗೆ ಮಾರ್ಚ್‌ 24ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು : ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಅಲಿಯಾಸ್‌ ಹರ್ಷವರ್ದಿನಿ ರನ್ಯಾ ಅವರನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಸೋಮವಾರ 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಮೂರು ದಿನಗಳ ಕಸ್ಟಡಿ ಅವಧಿಯು ಸೋಮವಾರ ಮುಗಿದ ಹಿನ್ನೆಲೆಯಲ್ಲಿ ಆಕೆಯನ್ನು … Continued