ಮಸೂದೆಗಳನ್ನು ತಡೆಹಿಡಿಯಲು ರಾಜ್ಯಪಾಲರಿಗೆ ವಿಟೋ ಅಧಿಕಾರವಿಲ್ಲ : ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್‌ ತರಾಟೆ

ಬೆಂಗಳೂರು : ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಗಳನ್ನು ತಡೆಹಿಡಿದು ಕೂಡ್ರಲು ಇರುವುದಕ್ಕೆ ರಾಜ್ಯಪಾಲರಿಗೆ ಯಾವುದೇ ರೀತಿಯ ವಿಟೋ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ತಮಿಳುನಾಡು ಶಾಸಕಾಂಗವು ಮಂಡಿಸಿದ 10 ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರಗಳು ಕಾನೂನುಬಾಹಿರ ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್.ಮಹಾದೇವನ್ ಅವರ ಪೀಠ ಹೇಳಿತು. … Continued

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ; ಕಾಲಮಿತಿಯಲ್ಲಿ 34,863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಇಲಾಖೆಗಳಲ್ಲಿನ 34,863 ಖಾಲಿ ಹುದ್ದೆಗಳನ್ನು (Government Jobs) ಕಾಲಮಿತಿಯೊಳಗೆ ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ … Continued

ಕಾರ್ಮಿಕರ ಕನಿಷ್ಠ ವೇತನ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇರಿಯಬಲ್ ಡಿಯರ್ನೆಸ್ ಭತ್ಯೆ (ವಿಡಿಎ)ಯನ್ನು ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ ದರ ಹೆಚ್ಚಿಸಿದೆ. ಇದು ಕಾರ್ಮಿಕರು ಹೆಚ್ಚುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಟ್ಟಡ ನಿರ್ಮಾಣ, ಲೋಡಿಂಗ್ ಮತ್ತು ಅನ್‌ಲೋಡಿಂಗ್, … Continued

ಅನುದಾನಿತ ಶಿಕ್ಷಣ ಸಂಸ್ಥೆ ಸಿಬ್ಬಂದಿಗೂ 7ನೇ ವೇತನ ಸೌಲಭ್ಯ ವಿಸ್ತರಣೆ

ಬೆಂಗಳೂರು : 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೂ ರಾಜ್ಯ ವೇತನ ಸೌಲಭ್ಯಗಳನ್ನು ವಿಸ್ತರಿಸಲಾಗಿದೆ. ಸರ್ಕಾರದ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಆದೇಶಿಸಿದ್ದು, ಅನ್ವಯಿಸುವ ಬದಲಾವಣೆಯೊಂದಿಗೆ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು … Continued

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಅವರು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಸೋಮವಾರ (ಆಗಸ್ಟ್‌ 12) ಆದೇಶ ಹೊರಡಿಸಿದ್ದಾರೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ … Continued

ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ ಪಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮಕ್ಕಳನ್ನು ಎಲ್‌ಕೆಜಿ (LKG), ಯುಕೆಜಿ (UKG) ಹಾಗೂ ಒಂದನೇ ತರಗತಿಗೆ ದಾಖಲಿಸಲು ರಾಜ್ಯ ಸರ್ಕಾರವು ಈಗಾಗಲೇ ಕನಿಷ್ಠ ವಯೋಮಿತಿ ನಿಗದಿಪಡಿಸಿದ್ದ ರಾಜ್ಯ ಸರ್ಕಾರ ಈಗ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಮಕ್ಕಳನ್ನು ಎಲ್‌ಕೆಜಿಗೆ ಸೇರಿಸಲು 4 ವರ್ಷ ಕನಿಷ್ಠ ವಯೋಮಿತಿಯಾದರೆ, ಗರಿಷ್ಠ ವಯೋಮಿತಿ 6 ವರ್ಷ ಯುಕೆಜಿಗೆ  5 ವರ್ಷ ಕನಿಷ್ಠ ವಯೋಮಿತಿಯಾದರೆ, 7 ವರ್ಷ … Continued

‘ಹೆಲ್ತ್ ಡ್ರಿಂಕ್ಸ್‌’ ಪಟ್ಟಿಯಿಂದ ಬೋರ್ನ್‌ವಿಟಾ ತೆಗೆದುಹಾಕುವಂತೆ ಇ-ಕಾಮರ್ಸ್‌ ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಬೋರ್ನ್‌ವಿಟಾ ಸೇರಿದಂತೆ ಹಲವು ಪಾನೀಯಗಳನ್ನು ‘ಆರೋಗ್ಯ ಪಾನೀಯʼಗಳ (healthy drinks) ವರ್ಗದಿಂದ ತೆಗೆದುಹಾಕುವಂತೆ ಎಲ್ಲಾ ಇ-ಕಾಮರ್ಸ್ ಕಂಪನಿಗಳಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಏಪ್ರಿಲ್ 10 ರಂದು ಸೂಚನೆ ನೀಡಿದೆ. ಇದು ಯಾವುದೇ ‘ಆರೋಗ್ಯ ಪಾನೀಯ’ ವರ್ಗಕ್ಕೆ ಸೇರುವುದಿಲ್ಲ ಎಂದು ತಿಳಿಸಿದೆ. ಬೋರ್ನ್‌ವೀಟಾ ಸೇರಿದಂತೆ ಇತರ ಕೆಲ ಪಾನೀಯಗಳ ಕುರಿತು ಅಧ್ಯಯನ ನಡೆಸಿರುವ ಮಕ್ಕಳ … Continued

ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳು, ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಉಳಿಸಿಕೊಳ್ಳಲು ಅವಕಾಶ : ಕೇಂದ್ರ ಶಿಕ್ಷಣ ಸಚಿವಾಲಯ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದೆ. ನೂತನ ನೀತಿಯ ಅನ್ವಯ ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಪ್ರಕಾರ ಹೊಸ ಪಠ್ಯಕ್ರಮ ಚೌಕಟ್ಟು ಸಿದ್ಧವಾಗಿದೆ ಮತ್ತು 2024ರ ಶೈಕ್ಷಣಿಕ ಅವಧಿಗೆ ಪಠ್ಯಪುಸ್ತಕಗಳನ್ನು … Continued

ಐಡಿಬಿಐ ಬ್ಯಾಂಕ್‌ನ 60.72% ಷೇರು ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ-ಎಲ್‌ಐಸಿ

ಮುಂಬೈ: ಸರಕಾರಿ ಸ್ವಾಮ್ಯದ ಐಡಿಬಿಐ ಬ್ಯಾಂಕ್‌ನ (IDBI Bank) ಶೇಕಡ 60.72ರಷ್ಟು ಪಾಲನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಆಸಕ್ತರಿಂದ ಬಿಡ್‌ ಸಲ್ಲಿಕೆಗೆ ಆಹ್ವಾನಿಸಿರುವುದಾಗಿ ಶುಕ್ರವಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಸಹ ತನ್ನ ಪಾಲಿನ ಷೇರುಗಳನ್ನು ವಿಕ್ರಯಗೊಳಿಸಲಿದೆ ಸರ್ಕಾರ ಮತ್ತು ಜೀವ ವಿಮಾ ನಿಗಮ (ಎಲ್‌ಐಸಿ) … Continued

ಸರ್ಕಾರದ ಅನುಮತಿ ಇಲ್ಲದೆ ಎಸ್‌ಸಿ-ಎಸ್‌ಟಿ ಭೂಮಿ ಪರಿವರ್ತನೆ ಮಾಡುವಂತಿಲ್ಲ

ಬೆಂಗಳೂರು: ಸರ್ಕಾರದಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಮೀನನ್ನು ಭೂ ಪರಿವರ್ತನೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ಕೆಲವು ಭೂಮಿಗಳ ಪರಭಾಷೆ ನಿಷೇಧ) ಅನಿಯಮ 1978ರ ಪ್ರಕಾರ ಸರ್ಕಾರದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆದ ನಂತರವಷ್ಟೇ ಭೂ ಪರಿವರ್ತನೆ ಮಾಡಬೇಕು ಎಂದು ಸೂಚಿಸಲಾಗಿದೆ. … Continued