ಏಪ್ರಿಲ್ 15-16 : ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಸಚಿವ ಅಶೋಕ್ ಗ್ರಾಮ ವಾಸ್ತವ್ಯ, ಹೊಲನಗದ್ದೆ, ಹಿಲ್ಲೂರಿಗೂ ಭೇಟಿ

ಬೆಂಗಳೂರು: ಏಪ್ರಿಲ್ 15 ಮತ್ತು 16ರಂದು ಕಂದಾಯ ಸಚಿವ ಆರ್. ಅಶೋಕ ಅವರು ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಸರ್ಕಾರವೇ ಜನರ ಬಳಿಗೆ ಬಂದು ಸಮಸ್ಯೆ ಆಲಿಸಬೇಕು ಎಂಬ ಉದ್ದೇಶ ಹೊಂದಿರುವ “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಇದು … Continued

ಗ್ರಾಮ ವಾಸ್ತವ್ಯದಿಂದ ಜನಸಾಮಾನ್ಯರು- ಅಧಿಕಾರಿಗಳ ನಡುವಿನ ಕಂದಕ ದೂರ

ಹುಬ್ಬಳ್ಳಿ; ಜನಪ್ರತಿನಿಧಿಗಳು, ಅಧಿಕಾರಿಗಳು ಮೇಲಿನಿಂದ ಧರೆಗೆ ಇಳಿದು ಬಂದವರಲ್ಲ. ಜನರು ಮಂತ್ರಿಗಳು,ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ಬಳಿ ತಮ್ಮ ಅಹವಾಲು ಹೇಳಿಕೊಳ್ಳಲು ಮುಜುಗರ ಪಟ್ಟುಕೊಳ್ಳುತ್ತಾರೆ. ಜನಸಾಮಾನ್ಯರ ನಡುವಿನ ಕಂದಕ ಮುಚ್ಚಿ, ಸೇತುವೆ ನಿರ್ಮಿಸುವಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಛಭ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಸಚಿವರು … Continued

ಗ್ರಾಮ ವಾಸ್ತವ್ಯದಲ್ಲಿ ಜನರ ಮನೆ ಬಾಗಿಲಿಗೆ ಬಂದ ಸರ್ಕಾರದಿಂದ ಸಮಸ್ಯೆಗಳಿಗೆ ಪರಿಹಾರ: ಸಚಿವ ಅಶೋಕ

ಹುಬ್ಬಳ್ಳಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಅರ್ಜಿಗಳನ್ನು ದಾಖಲಿಸುವ ಮತ್ತು ಇತ್ಯರ್ಥಪಡಿಸಿದ ಕುರಿತು ಮಾಹಿತಿ ದಾಖಲಿಸುವ ಧಾರವಾಡ ಜಿಲ್ಲಾಡಳಿತದ ಕ್ರಮ ಮಾದರಿಯಾಗಿದ್ದು, ಇದನ್ನು ಇತರ ಜಿಲ್ಲೆಗಳಿಗೆ ಜಾರಿಗೊಳಿಸಿ ಜಿಲ್ಲಾ ಆಡಳಿತದ ಈ ಕಾರ್ಯವನ್ನು ರಾಜ್ಯ ಆಡಳಿತದೊಂದಿಗೆ ಜೋಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಅವರು ಶನಿವಾರ ಮಧ್ಯಾಹ್ನ ಧಾರವಾಡ ಜಿಲ್ಲೆಯ … Continued

ಗ್ರಾಮ ವಾಸ್ತವ್ಯ: ಲಘು ಆಹಾರ ಸೇವಿಸಿ ಪವಡಿಸಿದ ಸಚಿವ ಅಶೋಕ

ಹುಬ್ಬಳ್ಳಿ: ಛಬ್ಬಿ ಗ್ರಾಮದಲ್ಲಿ ಬೆಳಿಗ್ಗೆನಿಂದ ಅಧಿಕಾರಿಗಳ ದಂಡು ಕಟ್ಟಿಕೊಂಡು ಗ್ರಾಮದ ಬೀದಿ ಸುತ್ತಿ ಜನರ ಅಹವಾಲುಗಳನ್ನು ಸ್ವೀಕರಿಸಿ ಪರಿಷ್ಕರಣೆ ಮಾರ್ಗ ತೋರಿದ ಕಂದಾಯ ಸಚಿವ ಆರ್.ಅಶೋಕ್ ಸರ್ಕಾರಿ ಶಾಲೆ ಕೊಠಡಿಯಲ್ಲಿ ವಾಸ್ತವ್ಯ ಹೂಡಿದರು. ಮಧ್ಯಾಹ್ನ ಉತ್ತರ ಕರ್ನಾಟಕದ ರೊಟ್ಟಿ ಊಟ ಸವಿದ ಸಚಿವರಿಗೆ ತುಸು ಖಾರ ಎನಿಸಿತು. ರಾತ್ರಿ ಲಘು ಆಹಾರವಾಗಿ ಮೊಸರನ್ನ ಸೇವಿಸಿದರು. ಸರ್ಕಾರ … Continued