ವೀಡಿಯೊ..| ಮದುವೆ ಸಮಾರಂಭಕ್ಕೆ ಅನಿರೀಕ್ಷಿತವಾಗಿ ಬಂದ ಬೃಹತ್‌ ಖಡ್ಗಮೃಗ ; ಜನರಿಗೆ ಅಚ್ಚರಿ-ಗಾಬರಿ…!

ನೇಪಾಳದಲ್ಲಿ ನಡೆದ ಅಚ್ಚರಿಯ ವಿದ್ಯಮಾನವೊಂದರಲ್ಲಿ ಖಡ್ಗಮೃಗವೊಂದು ಮದುವೆ ಕಾರ್ಯಕ್ರಮಕ್ಕೆ ಅನಿರೀಕ್ಷಿತ ಅತಿಥಿಯಾಗಿ ಆಗಮಿಸುವ ಮೂಲಕ ಎಲ್ಲರಿಗೂ ಅಚ್ಚರಿ ಹಾಗೂ ಗಾಬರಿ ಎರಡನ್ನೂ ಉಂಟು ಮಾಡಿದೆ. ಈ ಘಟನೆ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಚಿಟ್ವಾನ್ ರಾಷ್ಟ್ರೀಯ ಉದ್ಯಾನವನದ ಹೊಂದಿಕೊಂಡಿರುವ ಹಳ್ಳಿಯಲ್ಲಿ ಸಂಭವಿಸಿದೆ, ಈ ವಿಶ್ವ ಪರಂಪರೆ ತಾಣವು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ ಮತ್ತು 600 ಕ್ಕೂ … Continued

ಮದುವೆಗೆ 10 ದಿನಗಳ ಮೊದಲು ತನ್ನ ಮಗಳ ಜೊತೆಗೆ ಮದುವೆ ನಿಶ್ಚಿತಾರ್ಥವಾದ ವರನೊಂದಿಗೆ ಪರಾರಿಯಾದ ವಧುವಿನ ತಾಯಿ…!

ಅಲಿಗಢದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಮದ್ರಾಕ್ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದ ಮಹಿಳೆಯೊಬ್ಬರು ಮದುವೆಗೆ ಕೇವಲ ಒಂಬತ್ತು ದಿನಗಳ ಮೊದಲು ತನ್ನ ಮಗಳ ಜೊತೆ ಮದುವೆ ನಿಶ್ಚಯವಾಗಿದ್ದ ಹುಡುಗನೊಂದಿಗೆ ಪರಾರಿಯಾದ ಘಟನೆ ವರದಿಯಾಗಿದೆ. ವರನ ಪ್ರೇಮಪಾಶದಲ್ಲಿ ಸಿಲುಕಿದ್ದ ವಧುವಿನ ತಾಯಿ ಹಾಗೂ ತನ್ನ ಭಾವಿ ಅತ್ತೆಯ ಪ್ರೇಮಪಾಶದಲ್ಲಿ ಸಿಲುಕಿದ ವರ ಇಬ್ಬರೂ ಓಡಿಹೋಗಲು ಯೋಜನೆ ರೂಪಿಸಿದರು. … Continued

ಮದುವೆ ಆಮಂತ್ರಣ ಕಾರ್ಡ್‌ ನಲ್ಲಿ ವಧು-ವರರ ಜನ್ಮ ದಿನಾಂಕ ಮುದ್ರಿಸುವುದನ್ನು ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ…! ಯಾಕೆಂದರೆ…

ಜೈಪುರ: ಬಾಲ್ಯವಿವಾಹಗಳನ್ನು ತಡೆಗಟ್ಟುವ ಸಲುವಾಗಿ ರಾಜಸ್ಥಾನ ಸರ್ಕಾರವು ವಧು-ವರರ ವಯಸ್ಸಿನ ಪುರಾವೆಗಳನ್ನು ಸಂಬಂಧಪಟ್ಟ ಕುಟುಂಬಗಳಿಂದ ಪಡೆಯುವಂತೆ ಮತ್ತು ಆಮಂತ್ರಣ ಪತ್ರಿಕೆಯಲ್ಲಿ ವಧು-ವರ ಇಬ್ಬರ ಜನ್ಮದಿನಾಂಕವನ್ನು ಮುದ್ರಿಸುವಂತೆ ಮುದ್ರಣಾಲಯಗಳಿಗೆ ಸೂಚಿಸಿದೆ. ಅಲ್ಲದೆ, ಬಾಲ್ಯ ವಿವಾಹಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಪ್ರಚಲಿತ ಕಾನೂನಿನ ವಿರುದ್ಧ ಜಾಗೃತಿ ಮೂಡಿಸಲು ಹಲ್ವಾಯಿಗಳು, ಪಂಡಿತರು, ಟೆಂಟ್ ಹೌಸ್‌ಗಳು, ಬ್ಯಾಂಡ್ ಟ್ರೂಪ್‌ಗಳು, … Continued

ವೀಡಿಯೊ…| ಮದುವೆ ಮೆರವಣಿಗೆ ವೇಳೆ ಕುದುರೆ ಮೇಲೆ ಬರುತ್ತಿದ್ದ ಮದುಮಗ ಹೃದಯಾಘಾತದಿಂದ ಸಾವು

ಭೋಪಾಲ್: ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ 27 ವರ್ಷದ ಮದುಮಗ ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಮೇಲೆ ಬರುತ್ತಿರುವಾಗಲೇ ಅಲ್ಲಿಯೇ ಕುಸಿದು ಮೃತಪಟ್ಟಿದ್ದಾನೆ. ಶುಕ್ರವಾರ ರಾತ್ರಿ ಪ್ರದೀಪ ಜಾಟ್ ಎಂಬ ಮದುಮಗ ಜಾಟ್ ಹಾಸ್ಟೆಲಿನಲ್ಲಿ ಆಯೋಜಿಸಿದ್ದ ಮದುವೆಯ ಸ್ಥಳಕ್ಕೆ ಕುದುರೆ ಮೇಲೆ ಮೆರವಣಿಗೆಯಲ್ಲಿ ಬರುತ್ತಿರುವಾಗ ಈ ಘಟನೆ ನಡೆದಿದೆ. ಮದುವೆಯ ಸ್ಥಳಕ್ಕೆ ಕುದುರೆ ಸವಾರಿ ಮಾಡುವ ಮೊದಲು … Continued

ತನ್ನ ಮದುವೆಯಲ್ಲಿ ತಾನೇ ಪುರೋಹಿತನಾಗಿ ವೇದಮಂತ್ರ ಹೇಳಿ ವಿವಾಹದ ವಿಧಿವಿಧಾನ ನೆರವೇರಿಸಿದ ಮದುಮಗ..! ವೀಡಿಯೊ ವೈರಲ್‌

ಹರಿದ್ವಾರದ ಕುಂಜಾ ಬಹದ್ದೂರಪುರದಲ್ಲಿ ಇತ್ತೀಚೆಗೆ ನಡೆದ ಮದುವೆಯೊಂದರಲ್ಲಿ ಸಹರಾನಪುರದ ರಾಂಪುರ ಮಣಿಹರನ್‌ ಪ್ರದೇಶದ ಮದುಮಗ ತನ್ನದೇ ವಿವಾಹದಲ್ಲಿ ವಿಧಿವಿಧಾನ ನೆರವೇರಿಸುವಾಗ ವೈದಿಕ ಮಂತ್ರಗಳನ್ನು ತಾನೇ ಪಠಿಸಿದ್ದು ಅತಿಥಿಗಳನ್ನು ವಿಸ್ಮಯಗೊಳಿಸಿದೆ. ಈ ವಿಶಿಷ್ಟ ಮತ್ತು ಸ್ಮರಣೀಯ ಕಾರ್ಯವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾಂಪುರ ಮಣಿಹರನ್‌ನ ವಿವೇಕಕುಮಾರ ಎಂಭವರ ಮದುವೆಯ ಮೆರವಣಿಗೆ ಹರಿದ್ವಾರವನ್ನು ತಲುಪಿದ ನಂತರ ವರನಾದ … Continued

ವೀಡಿಯೊ..| ಕುದುರೆ ಮೇಲೆ ಮೆರವಣಿಗೆಯಲ್ಲಿ ಹೊರಟಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರ ಕದ್ದೊಯ್ದ ಮಿನಿಟ್ರಕ್‌ ಚಾಲಕ ; ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಮದುಮಗ..!

ಸಿನೆಮಾದಲ್ಲಿ ಮಾತ್ರ ಕಾಣಬಹುದಾದ ದೃಶ್ಯದಂತೆ  ಉತ್ತರ ಪ್ರದೇಶದ ಮೀರತ್‌ನಿಂದ ವರದಿಯಾದ ಘಟನೆಯೊಂದರಲ್ಲಿ ಕುದುರೆ ಮೇಲೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನೊಬ್ಬನಿಗೆ ಹಾಕಿದ್ದ ನೋಟುಗಳ ಮಾಲೆಯನ್ನು ದೋಚಿರುವ ಘಟನೆ ವರದಿಯಾಗಿದ್ದು, ನಂತರ ಮಿನಿಟ್ರಕ್‌ನಲ್ಲಿ ಸಾಗುತ್ತಿದ್ದ ಕಳ್ಳನನ್ನು ವರನೇ ಬೆನ್ನಟ್ಟಿ ಹಿಡಿದಿದ್ದಾನೆ…! ಇದರಿಂದ ಮದುವೆ ಮೆರವಣಿಗೆಯಲ್ಲಿ ಕೆಲ ಕಾಲ ಗೊಂದಲ ಉಂಟಾಗಿತ್ತು. ಉತ್ತರ ಪ್ರದೇಶದ ಮೀರತ್‌ನಲ್ಲಿ ವರನಿಗೆ ಹಾಕಿದ್ದ ನೋಟುಗಳ … Continued

ಮದುವೆಯಾದ ಕೆಲವೇ ಹೊತ್ತಿನಲ್ಲಿ ನವದಂಪತಿ ನಡುವೆ ಹೊಡೆದಾಟ ; ವಧು ಸಾವು, ವರನ ಸ್ಥಿತಿ ಗಂಭೀರ…!

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಮಧ್ಯೆ ಜಗಳವಾಗಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡ ನಂತರ ತೀವ್ರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಕೆಜಿಎಫ್ (KGF)​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವರ ನವೀನ್ … Continued