ಗುಜರಾತ್ ಗಲಭೆ: ಸಾಕ್ಷ್ಯ ತಿರುಚಿದ ಪ್ರಕರಣದಲ್ಲಿ ತೀಸ್ತಾ ಸೆತಲ್ವಾಡ್, ಇತರ ಇಬ್ಬರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಎಸ್‌ಐಟಿ

ಅಹಮದಾಬಾದ್‌: ವಿಶೇಷ ತನಿಖಾ ತಂಡವು (SIT) 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಆರ್.ಬಿ.ಶ್ರೀಕುಮಾರ್ ಮತ್ತು ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್ ಭಟ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಅಹಮದಾಬಾದ್‌ನ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ … Continued