ಎರಡನೇ ಮದುವೆಯಾಗಲು ವಿರೋಧಿಸಿದ್ದಕ್ಕೆ ತನ್ನ ಮಗನನ್ನು ಗುಂಡು ಹಾರಿಸಿ ಕೊಂದ ತಂದೆ….!

ರಾಜಕೋಟ್: ಗುಜರಾತಿನ ರಾಜಕೋಟದಲ್ಲಿ ಆಘಾತಕಾರಿ ಘಟನೆಯೊಂದು ಬಹಿರಂಗವಾಗಿದ್ದು, 76 ವರ್ಷದ ವ್ಯಕ್ತಿಯೊಬ್ಬರು ಎರಡನೇ ಬಾರಿಗೆ ಮದುವೆಯಾಗಲು ವಿರೋಧಿಸಿದ ಕಾರಣಕ್ಕೆ ತನ್ನ 52 ವರ್ಷದ ಮಗನನ್ನೇ ಗುಂಡಿಕ್ಕಿ ಕೊಂದಿದ್ದಾರೆ. ವರದಿಗಳ ಪ್ರಕಾರ, ಆರೋಪಿ ರಾಮಭಾಯ್ ಅಲಿಯಾಸ್ ರಾಮಕುಭಾಯಿ ಬೋರಿಚಾ, ಮಾರ್ಚ್ 9 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ತನ್ನ ಮಗ ಪ್ರತಾಪ ಬೊರಿಚಾ ಅವರ ಜೊತೆ … Continued

ಮಂಡ್ಯ…| ಆಟದ ಗನ್ ಎಂದು ಭಾವಿಸಿ ಮಕ್ಕಳು ಆಟವಾಡುತ್ತಿದ್ದಾಗ ಅಸಲಿ ಗನ್‌ ನಿಂದ ಹಾರಿದ ಗುಂಡು; 3 ವರ್ಷದ ಬಾಲಕ ಸಾವು

ಮಂಡ್ಯ: ಅಣ್ಣ ತಮ್ಮ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು (Firing) 3 ವರ್ಷದ ಮಗು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಂದೆಮಾದಿಹಳ್ಳಿಯ ಕೋಳಿ ಫಾರಂ ಒಂದರಲ್ಲಿ ಭಾನುವಾರ (ಫೆ. 16) ನಡೆದಿದೆ ಎಂದು ವರದಿಯಾಗಿದೆ. ಮಕ್ಕಳು ಅದು ನಿಜವಾದ ಬಂದೂಕು ಎಂದು ತಿಳಿಯದೆ ಆಟವಾಡುವ ಬಂದೂಕು ಎಂದು ತಿಳದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು … Continued

ಪರಸ್ಪರರ ಕಚೇರಿ ಮೇಲೆ ಗುಂಡಿನ ದಾಳಿ, ಕಲ್ಲು ಎಸೆತ : ಹಿಂಸಾಚಾರಕ್ಕೆ ತಿರುಗಿದ ಬಿಜೆಪಿ ನಾಯಕ-ಶಾಸಕರ ನಡುವಿನ ರಾಜಕೀಯ ವೈಷಮ್ಯ; ಬಂಧನ

ಉತ್ತರಾಖಂಡದ ರೂರ್ಕಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಕುನ್ವರ್ ಪ್ರಣವ ಸಿಂಗ್ ಚಾಂಪಿಯನ್ ಮತ್ತು ಪಕ್ಷೇತರ ಶಾಸಕ ಉಮೇಶಕುಮಾರ ನಡುವಿನ ವೈಷಮ್ಯ ಭಾನುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಸ್ಪರರ ಕಚೇರಿಗೆ ಗುಂಡು ಹಾರಿಸಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೀಡಿಯೋದಲ್ಲಿ ಚಾಂಪಿಯನ್ ತನ್ನ ಬೆಂಬಲಿಗರೊಂದಿಗೆ ಉಮೇಶಕುಮಾರ ಅವರ ಕಚೇರಿಯ ಮೇಲೆ ಹಲವಾರು ಗುಂಡುಗಳನ್ನು ಹಾರಿಸುವುದನ್ನು ತೋರಿಸುತ್ತದೆ. … Continued

ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್ ಶೂಟರ್‌ಗಳು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನವರು: ಮೂಲಗಳು

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಶಂಕಿತರು ತಾವು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಹತ್ಯೆಯ ಹೊಣೆಗಾರಿಕೆಯನ್ನು ಇನ್ನೂ ಒಪ್ಪಿಕೊಳ್ಳದಿರುವಾಗ ಪೊಲೀಸರು ಈ ಬಗ್ಗೆ ಪರಿಶೀಲಿಸಿಲ್ಲ. ಈ ಘಟನೆ ಮಹಾರಾಷ್ಟ್ರ ರಾಜ್ಯ ಚುನಾವಣೆಗೆ ಮುನ್ನ ಭದ್ರತಾ … Continued

ತನ್ನ ಮದುವೆ ವಾರ್ಷಿಕೋತ್ಸವದ ದಿನ ತನ್ನದೇ ಗ್ಯಾಂಗ್‌ನವರ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಗ್ಯಾಂಗ್‌ಸ್ಟರ್ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

40 ವರ್ಷದ ಗ್ಯಾಂಗ್‌ಸ್ಟರ್ ಶರದ್ ಮೊಹೋಲ್‌‌ ಎಂಬಾತನನ್ನು ಶುಕ್ರವಾರ ಮಧ್ಯಾಹ್ನ ಪುಣೆಯ ಕೊತ್ರುಡ್‌ನಲ್ಲಿ ಆತನ ಗ್ಯಾಂಗ್‌ನ ಕೆಲವು ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲೊಸದೆ ಸಾವಿಗೀಡಾಗಿದ್ದಾನೆ ಎಂದು ಅವರು ಹೇಳಿದ್ದಾರೆ. ಕುಖ್ಯಾತ ಗ್ಯಾಂಗ್‌ಸ್ಟರ್ ನನ್ನು ಮದುವೆಯ ವಾರ್ಷಿಕೋತ್ಸವದ ದಿನವೇ ಕೊಲ್ಲಲಾಯಿತು. “ಮಧ್ಯಾಹ್ನ 1:30 ರ ಸುಮಾರಿಗೆ … Continued

ವೀಡಿಯೊ….| ಮನೆ ಹೊರಗೆ ನಿಂತಿದ್ದವನ ಮೇಲೆ ಗುಂಡಿನ ದಾಳಿ : ಪೊರಕೆ ಕೋಲು ಹಿಡಿದು ಶೂಟರ್‌ ಗಳನ್ನು ಓಡಿಸಿದ ಧೈರ್ಯಶಾಲಿ ಮಹಿಳೆ

ಭಿವಾನಿ (ಹರಿಯಾಣ) : ಹರಿಯಾಣದ ಭಿವಾನಿಯಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮನೆಯ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯ ಸಮಯದಲ್ಲಿ, ಪೊರಕೆ ಹಿಡಿದ ಮಹಿಳೆಯೊಬ್ಬರು ದಾಳಿಕೋರರನ್ನು ಧೈರ್ಯದಿಂದ ಎದುರಿಸಿ ದಾಳಿಕೋರರು ಸ್ಥಳದಿಂದ ಓಡಿಹೋಗುವಂತೆ ಮಾಡಿದ್ದು, ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಸಿಸಿಟಿವಿ ಕ್ಯಾಮೆರಾದಲ್ಲಿ … Continued

ಗುಂಡಿನ ದಾಳಿಯಲ್ಲಿ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಗಾಯ: ಬೆಂಗಾವಲು ಪಡೆ ಮೇಲೆ ದಾಳಿಕೋರರು ಗುಂಡು ಹಾರಿಸಿದ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಗುರುವಾರ ನಡೆದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗಾಯಗೊಂಡ ನಂತರ, ಶಂಕಿತ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ಆತ ಗುಜ್ರಾನ್‌ವಾಲಾದಲ್ಲಿ ಅಲ್ಲಾವಾಲಾ ಚೌಕ್ ಬಳಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸ್ವಾಗತ ಶಿಬಿರದ ಬಳಿ ಗುಂಡಿನ ದಾಳಿ ನಡೆಸುತ್ತಿರುವ ಚಿತ್ರಗಳು ಹೊರಬಂದಿವೆ. ಮಾಧ್ಯಮ ವರದಿಗಳ ಪ್ರಕಾರ, … Continued

ಕೇಂದ್ರ ಸಚಿವರಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ: ಕೋವಿಡ್‌ ನಿಯಮ ಗಾಳಿಗೆ ತೂರಿದ ಬಿಜೆಪಿ ..!

ಯಾದಗಿರಿ: ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರ ಸ್ವಾಗತಕ್ಕೆ ಮುಗಿಬಿದ್ದಿದ್ದಲ್ಲದೆ ಅವರ ಸ್ವಾಗತಕ್ಕೆ ಬಂದೂಕಿನಿಂದ ಗುಂಡು ಹಾರಿಸಿ ಅತಿರೇಕದ ವರ್ತನೆ ತೋರಿದ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಸಚಿವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿರುವ ಕಾರಣ ಇದೀಗ ಎಫ್​ಐಆರ್ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Continued