ಬೆಳಗಾವಿ ; ವಕೀಲೆ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ: ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ ಅವರ ಮನೆಯ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಕಳೆದ 18 ವರ್ಷಗಳಿಂದ ಹೈ-ಪ್ರೊಫೈಲ್ ಕೇಸ್‌ಗಳ ಪರ ವಾದ ಮಂಡಿಸುತ್ತಿರುವ ಪೂಜಾ ಕಾಕತಕರ ಅವರ ನಿವಾಸವನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಮಧ್ಯರಾತ್ರಿ ವೇಳೆ ಕಿಡಿಗೇಡಿಗಳು ಮನೆಯ ಮೊದಲ ಮಹಡಿಗೆ ಗುಂಡು ಹಾರಿಸಿದ್ದಾರೆ. … Continued

ಸೋಫಾದಿಂದ ಏಳುವಾಗ ಸೊಂಟದಲ್ಲಿದ್ದ ಪಿಸ್ತೂಲ್ ಸಿಡಿದು ಅನಿವಾಸಿ ಭಾರತೀಯ ಸಾವು

ಫಿರೋಜಪುರ: ಸೋಫಾದಿಂದ ಎದ್ದೇಳುವಾಗ ಸೊಂಟದ ಪಟ್ಟಿಯಲ್ಲಿದ್ದ ಲೋಡ್ ಆಗಿದ್ದ ಪಿಸ್ತೂಲ್ ಆಕಸ್ಮಿಕವಾಗಿ ಸಿಡಿದ ಪರಿಣಾಮ ಅನಿವಾಸಿ ಭಾರತೀಯರೊಬ್ಬರು (NRI) ಮೃತಪಟ್ಟ ದಾರುಣ ಘಟನೆ ಪಂಜಾಬಿನ ಫಿರೋಜ್‌ಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ಧನಿ ಸುಚಾ ಸಿಂಗ್ ಗ್ರಾಮದ ನಿವಾಸಿ ಹರ್ಪಿಂದರ ಸಿಂಗ್ ಅಲಿಯಾಸ್ ಸೋನು ಎಂದು ಗುರುತಿಸಲಾಗಿದೆ. ಹರ್ಪಿಂದರ ಅವರು ಇತ್ತೀಚೆಗಷ್ಟೇ ವಿದೇಶದಿಂದ ಮರಳಿ ಗ್ರಾಮದಲ್ಲಿ … Continued

ಕಬಡ್ಡಿ ಪಂದ್ಯ ನಡೆಯುವಾಗಲೇ ಆಟಗಾರನ ಗುಂಡಿಕ್ಕಿ ಹತ್ಯೆ ; ಸೆಲ್ಫಿ ನೆಪದಲ್ಲಿ ಬಂದು ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು

ಮೊಹಾಲಿ: ಪಂಜಾಬ್‌ನ ಮೊಹಾಲಿಯಲ್ಲಿ ಸೋಮವಾರ ನಡೆಯುತ್ತಿದ್ದ ಕಬಡ್ಡಿ ಪಂದ್ಯಾವಳಿಯೊಂದರಲ್ಲಿ ಭಾಗವಹಿಸಿದ್ದ ಕಬಡ್ಡಿ ಆಟಗಾರನೊಬ್ಬನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.  ದಾಳಿಕೋರರು ಮೋಟಾರ್‌ಸೈಕಲ್‌ನಲ್ಲಿ ಬಂದು, ಮೊದಲು ಕಬಡ್ಡಿ ಆಟಗಾರ ರಾಣಾ ಬಾಲಚೌರಿಯಾ ಅವರ ಬಳಿ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಸಮೀಪಿಸಿದ್ದಾರೆ. ನಂತರ ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು … Continued

ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಗುಂಡು

ಮಂಗಳೂರು : ಅಕ್ರಮ ಗೋವು ಸಾಗಣೆಯಲ್ಲಿ ಭಾಗಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬೆನ್ನಟ್ಟಿ, ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು … Continued

ವರದಕ್ಷಿಣೆಗಾಗಿ ಪತ್ನಿಯನ್ನು ಸುಟ್ಟುಹಾಕಿದ ಆರೋಪಿ ಪತಿ ಪೊಲೀಸ್‌ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡೇಟು

ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ ವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ ನಂತರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ನಡೆದ ಎನ್‌ಕೌಂಟರ್‌ನಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಯಿತು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರೋಪಿ ಪತಿಯನ್ನು ವಿಪಿನ್ ಭಾಟಿ ಎಂದು ಗುರುತಿಸಲಾಗಿದ್ದು, ಗುರುವಾರ 36 ಲಕ್ಷ ರೂಪಾಯಿ ವರದಕ್ಷಿಣೆಗಾಗಿ 28 ​​ವರ್ಷದ … Continued

ಪೆರೋಲ್ ಮೇಲೆ ಆಸ್ಪತ್ರೆ ಐಸಿಯುಗೆ ದಾಖಲಾಗಿದ್ದ ಕುಖ್ಯಾತ ಆರೋಪಿಗೆ ಗುಂಡಿಕ್ಕಿ ಹತ್ಯೆ ಮಾಡಿ ಪರಾರಿ : ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಪಾಟ್ನಾ: ಐವರು ಶಸ್ತ್ರಸಜ್ಜಿತ ವ್ಯಕ್ತಿಗಳು ಆಸ್ಪತ್ರೆಗೆ ನುಗ್ಗಿ, ರೋಗಿಯೊಬ್ಬರ ಕೋಣೆಗೆ ನಡೆದುಕೊಂಡು ಹೋಗಿ ಕುಖ್ಯಾತ ಆರೋಪಿಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಇದು ಸಿನಿಮಾ ಅಲ್ಲ. ಇದು ಬಿಹಾರದ ಭಯಾನಕ ವಾಸ್ತವ. ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಐವರು ಶೂಟರ್‌ಗಳು ಆಸ್ಪತ್ರೆಯ ಕಾರಿಡಾರ್‌ನಲ್ಲಿ ತಮ್ಮ ಬಂದೂಕುಗಳನ್ನು ಹೊರತೆಗೆದು, ಕ್ಯಾಬಿನ್‌ನ ಬಾಗಿಲು ತೆರೆದು ಒಳಹೊಕ್ಕಿರುವುದು ಹಾಗೂ ನಂತರ ಪರಾರಿಯಾಗಿರುವುದು … Continued

ವೀಡಿಯೊ…| ‘ಪೂರ್ವಯೋಜಿತ ದಾಳಿ’ಯಲ್ಲಿ ಹೋಟೆಲ್ ಹೊರಗೆ ಗುಂಡು ಹಾರಿಸಿ ಯುನೈಟೆಡ್ ಹೆಲ್ತ್‌ಕೇರ್ ಕಂಪನಿಯ ಸಿಇಒ ಹತ್ಯೆ…

ನವದೆಹಲಿ : ಅಮೆರಿಕ ಮೂಲದ ಯುನೈಟೆಡ್ ಹೆಲ್ತ್‌ಕೇರ್‌ನ ಸಿಇಒ ಬ್ರಿಯಾನ್ ಥಾಂಪ್ಸನ್ ಅವರನ್ನು ಬುಧವಾರ ನ್ಯೂಯಾರ್ಕ್ ಹೋಟೆಲ್‌ನ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬ್ರಿಯಾನ್‌ ಥಾಂಪ್ಸನ್ (50) ಅವರು, ನ್ಯೂಯಾರ್ಕ್ ಹಿಲ್ಟನ್ ಮಿಡ್‌ಟೌನ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹಿಂದಿನಿಂದ ಗುಂಡಿನ ದಾಳಿ ನಡೆಸಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಬ್ರಿಯಾನ್‌ ಥಾಂಪ್ಸನ್ ಹೂಡಿಕೆದಾರರ ಸಮ್ಮೇಳನದಲ್ಲಿ ಪ್ರಮುಖ … Continued

ವೀಡಿಯೊ…| ರ್‍ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್‌ ಮೇಲೆ ಗುಂಡಿನ ದಾಳಿ

ಅಮೆರಿಕದ ಮಾಜಿ ಅಧ್ಯಕ್ಷ ಮತ್ತು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಮೇಲೆ ಶನಿವಾರ (ಸ್ಥಳೀಯ ಕಾಲಮಾನ) ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಅವರ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದ ನಂತರ ಗಾಯಗೊಂಡಿದ್ದಾರೆ. ಘಟನೆಯ ನಂತರ ಭದ್ರತಾ ಸಿಬ್ಬಂದಿ ಅವರನ್ನು ವೇದಿಕೆಯಿಂದ ಹೊರಗೆ ಕರೆದೊಯ್ಯುವಾಗ ಅವರ ಮುಖದ ಮೇಲೆ ರಕ್ತ ಕಂಡುಬಂದಿದೆ. ಟ್ರಂಪ್‌ ಅವರು “ಉತ್ತಮ” … Continued

ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

ಇಂಫಾಲ್ : 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿದ್ದಾರೆ. ಬಿಷ್ಣುಪುರ ಜಿಲ್ಲೆಯ ಥಮನ್‌ಪೋಕ್ಪಿ ಮತದಾನ ಕೇಂದ್ರದಲ್ಲಿ ಕೇಂದ್ರದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದ ವೇಳೆ ಮತಗಟ್ಟೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದೆ. … Continued

ಬೆಂಗಳೂರು: ಹಾಡಹಗಲೇ ಚಿನ್ನಾಭರಣ ಅಂಗಡಿಗೆ ನುಗ್ಗಿ ಗುಂಡಿನ ದಾಳಿ, ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ಚಿನ್ನಾಭರಣ ಮಳಿಗೆಯೊಂದರ ದರೋಡೆ ಮಾಡುವ ಯತ್ನ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರು ನಗರದ ಕೊಡಿಗೇ ಹಳ್ಳಿಯಲ್ಲಿರುವ ಜ್ಯುವೆಲ್ಲರಿ ಮಳಿಗೆಗೆ ಗುರುವಾರ ಮಧ್ಯಾಹ್ನ ನುಗ್ಗಿದ ದರೋಡೆಕೋರರು ಗುಂಡು ಹಾರಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಆತಂಕ ಸೃಷ್ಟಿಸಿದರು. ಮಧ್ಯಾಹ್ನದ ಹೊತ್ತಲ್ಲಿ ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರು ಮಳಿಗೆಯ ಮಾಲೀಕರು ಹಾಗೂ ನೌಕರರನ್ನು ಬೆದರಿಸಿ … Continued