ʼಇಂಡಿಯನ್‌ ಸ್ಟೇಟ್‌ ವಿರುದ್ಧ ಹೋರಾಟʼದ ಹೇಳಿಕೆ ; ರಾಹುಲ್‌ ಗಾಂಧಿ ವಿರುದ್ಧ ಎಫ್‌ ಐಆರ್ ದಾಖಲು

ಗುವಾಹತಿ: “ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ ಮತ್ತು ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತ ಸರ್ಕಾರ(Indian State)ದ ವಿರುದ್ಧವೇ ಹೋರಾಡುತ್ತಿದ್ದೇವೆ” ಎಂದು ಹೇಳಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಗುವಾಹತಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೊಂಜಿತ್ ಚೇಟಿಯಾ ಎಂಬವರು ಪನ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ವಿಪಕ್ಷದ ನಾಯಕನ ಸ್ಥಾನದಲ್ಲಿರುವ … Continued

ಮಹಾದೇವ ಬೆಟ್ಟಿಂಗ್ ಅಪ್ಲಿಕೇಶನ್‌ ಪ್ರಕರಣ : ನಟಿ ತಮನ್ನಾ ಭಾಟಿಯಾ ಪ್ರಶ್ನಿಸಿದ ಇ.ಡಿ.

ಗುವಾಹತಿ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಸಂಬಂಧಿಸಿದ ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳನ್ನು ಉತ್ತೇಜಿಸುವಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ನಟಿ ತಮನ್ನಾ ಭಾಟಿಯಾ ಗುರುವಾರ ಗುವಾಹತಿಯಲ್ಲಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಹಾಜರಾಗಿದ್ದರು. ಅಕ್ರಮ ಬೆಟ್ಟಿಂಗ್ ಕಾರ್ಯಾಚರಣೆಗಳಿಗಾಗಿ ತನಿಖಾ ಸಂಸ್ಥೆಗಳಿಂದ ಪರಿಶೀಲನೆಗೆ ಒಳಪಟ್ಟಿರುವ ಮಹದೇವ ಆನ್‌ಲೈನ್ ಗೇಮಿಂಗ್‌ನ ಅಂಗಸಂಸ್ಥೆ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ವೀಕ್ಷಣೆಯನ್ನು … Continued

ವೀಡಿಯೊ….| ರಾಹುಲ್ ಗಾಂಧಿ ಯಾತ್ರೆಗೆ ನಗರದೊಳಕ್ಕೆ ಪ್ರವೇಶ ನಿರಾಕರಣೆ : ಗುವಾಹತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು-ಪೊಲೀಸರ ಘರ್ಷಣೆ

ಗುವಾಹತಿ : ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ರಾಜಧಾನಿ ಗುವಾಹತಿ ಪ್ರಮುಖ ಮಾರ್ಗಗಳ ಮೂಲಕ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಮಂಗಳವಾರ ಗುವಾಹಟಿತಿಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಉದ್ವಿಗ್ನತೆ ಉಂಟಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಯಾತ್ರೆಯನ್ನು ನಗರದಿಂದ ದೂರವಿರಿಸಲು ಮತ್ತು … Continued