ಜ್ಞಾನವಾಪಿ ಪ್ರಕರಣ : ಹಿಂದೂ ಧರ್ಮಕ್ಕೆ ಸಂಬಂಧಿಸಿದ ವಸ್ತುಗಳನ್ನು ಒಪ್ಪಿಸಿ ; ಸಮೀಕ್ಷಾ ತಂಡಕ್ಕೆ ನ್ಯಾಯಾಲಯ ಸೂಚನೆ

ವಾರಾಣಸಿ : ಜ್ಞಾನವಾಪಿ ಮಸೀದಿ ಆವರಣದ ವೀಡಿಯೊಗ್ರಫಿ ನಡೆಸುತ್ತಿರುವ ಸಮೀಕ್ಷಾ ತಂಡದವರಿಗೆ ಸಮೀಕ್ಷೆಯ ವೇಳೆ ಪತ್ತೆಯಾಗಿರುವ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಸಂರಕ್ಷಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸುವಂತೆ ವಾರಾಣಸಿ ಜಿಲ್ಲಾ ನ್ಯಾಯಾಲಯವು ಸೂಚಿಸಿದೆ. ಎಎಸ್ಐ ಸಮೀಕ್ಷೆಯ ಸಮಯದಲ್ಲಿ ಕಂಡುಬರುವ ಹಿಂದೂ ಧರ್ಮಕ್ಕೆ ಮತ್ತು ಆರಾಧಾನ ಪದ್ಧತಿಗೆ ಅಥವಾ ಐತಿಹಾಸಿಕ ಅಥವಾ ಪುರಾತತ್ವದ ಹಿನ್ನೆಲೆಯಿಂದ ಈ … Continued

ಜ್ಞಾನವಾಪಿ ಪ್ರಕರಣ : ಮಸೀದಿ ಸಮಿತಿ ಅರ್ಜಿ ವಜಾಗೊಳಿಸಿದ ಅಲಹಾಬಾದ್‌ ಹೈಕೋರ್ಟ್‌

ವಾರಾಣಸಿ: ವಾರಾಣಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಪ್ರಮುಖ ಪ್ರಕರಣವೊಂದರಲ್ಲಿ ಮಸೀದಿ ಸಮಿತಿಗೆ ಹಿನ್ನಡೆಯಾಗಿದ್ದು, ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುತ್ತಿರುವ ಸಿವಿಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪ್ರಾರ್ಥನೆ ಮಾಡುವ ಹಕ್ಕನ್ನು ಕೋರಿ ಹಿಂದೂ ಮಹಿಳಾ ಆರಾಧಕರ ಗುಂಪು ಸಲ್ಲಿಸಿದ ಮೊಕದ್ದಮೆ ಮಾನ್ಯವಾಗಿದೆ, ಅಲಹಾಬಾದ್‌ ಹೈಕೋರ್ಟ್‌ … Continued

ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಆದೇಶ ಕಾಯ್ದಿರಿಸಿದ ಕೋರ್ಟ್‌

ಲಕ್ನೋ: ಈ ವರ್ಷದ ಮೇ ತಿಂಗಳ ಸಮೀಕ್ಷೆಯ ವೇಳೆ ಜ್ಞಾನವಾಪಿ ಮಸೀದಿಯ ವಝುಖಾನಾದಲ್ಲಿ ಪತ್ತೆಯಾದ ಶಿವಲಿಂಗದಂತಹ ರಚನೆಯ ಕಾರ್ಬನ್ ಡೇಟಿಂಗ್ ಕೋರಿ ಹಿಂದೂ ವಾದಿಗಳು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ. ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಹಿಂದೂ ಪಕ್ಷಗಳು ಮತ್ತು ಅಂಜುಮನ್ ಇಂತೇಜಾಮಿಯಾ ಮಸಾಜಿದ್ (ಎಐಎಂ) — … Continued

ಜ್ಞಾನವಾಪಿ ಪ್ರಕರಣ: ಶಿವಲಿಂಗದ ಕಾರ್ಬನ್-ಡೇಟಿಂಗ್ ಅರ್ಜಿ ಪರಿಗಣಿಸಿದ ಕೋರ್ಟ್‌, ಆಕ್ಷೇಪಣೆ ಸಲ್ಲಿಸಲು ಮಸೀದಿ ಆಡಳಿತಕ್ಕೆ ಕೋರ್ಟ್ ಸೂಚನೆ

ವಾರಾಣಸಿ : ಇಲ್ಲಿನ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾಗಿದೆ ಎಂದು ಹೇಳಲಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಗುರುವಾರ ಪರಿಗಣಿಸಿದೆ ಮತ್ತು ಮುಂದಿನ ವಿಚಾರಣೆಯ ದಿನಾಂಕದೊಳಗೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಮಸೀದಿ ಆಡಳಿತಕ್ಕೆ ಸೂಚಿಸಿದೆ. ಜ್ಞಾನವಾಪಿ ಮಸೀದಿ-ಶೃಂಗಾರ್ ಗೌರಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 29 ಎಂದು ನ್ಯಾಯಾಧೀಶ … Continued

ಜ್ಞಾನವಾಪಿ ಕೇಸ್‌ ಹಿಂಪಡೆಯದಿದ್ರೆ ಕನ್ಹಯ್ಯಲಾಲ್‌ಗೆ ಮಾಡಿದಂತೆ ತಲೆ ಕಡಿಯ್ತೇವೆ: ಫಿರ್ಯಾದಿ ಪತಿಗೆ ಪಾಕಿಸ್ತಾನದಿಂದ ಕೊಲೆ ಬೆದರಿಕೆ

ವಾರಾಣಸಿ: ಪಾಕಿಸ್ತಾನದ ನಂಬರ್‌ ಮೂಲಕ ಕರೆ ಮಾಡಿದ ಅಪರಿಚಿತರು ತಲೆ ಕಡಿಯುವುದಾಗಿ ನಮಗೆ ಬೆದರಿಕೆಯೊಡ್ಡಿದ್ದಾರೆ ಎಂದು ಶೃಂಗಾರ ಗೌರಿ-ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾದಿಯಾಗಿರುವ ಮಹಿಳೆಯ ಪತಿ ವಾರಣಾಸಿ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಶೃಂಗಾರ್ ಗೌರಿ-ಜ್ಞಾನವಾಪಿ ಪ್ರಕರಣದ ವಿಚಾರಣೆ ಗುರುವಾರದಿಂದ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಪುನರಾರಂಭವಾಗಿದೆ. ಸೋಹನ್ ಲಾಲ್ ಆರ್ಯ ಅವರಿಂದ … Continued