ಕಾಂಗ್ರೆಸ್‌ 7 ಮಂತ್ರಿ ಸ್ಥಾನ ಕೊಟ್ಟಿದೆ, ಇನ್ನೆಷ್ಟು ಸ್ಥಾನ ಬೇಕು?: ಶಾಮನೂರಗೆ ವಿಶ್ವನಾಥ ತಿರುಗೇಟು

ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆಗೆ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್ ಪ್ರತಿಕ್ರಿಯಿಸಿದ್ದು, ನಿಮಗೆ ಕಾಂಗ್ರೆಸ್‌ನಲ್ಲಿ ಏಳು ಮಂತ್ರಿ ಸ್ಥಾನ ಸಿಕ್ಕಿದೆ, ಇನ್ನೆಷ್ಟು ಸ್ಥಾನ ಬೇಕಿತ್ತು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಜಾತ್ಯತೀತ ಕಾಂಗ್ರೆಸ್‌ ಪಕ್ಷದ ಪ್ರತಿನಿಧಿಯಾಗಿರುವ ಶಾಮನೂರು ಶಿವಶಂಕರಪ್ಪ ಅವರು ಜಾತಿ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿದ್ದಾರೆ. ಇದು … Continued

ಹಿಜಾಬ್-ಕೇಸರಿ ಶಾಲು ಶಾಲಾ-ಕಾಲೇಜುಗಳಿಗೆ ತರುವುದು ಬೇಡ, ಅದಕ್ಕಿಂತ ಶಿಕ್ಷಣ ದೊಡ್ಡದು ಎಂದ ಮಾಜಿ ಸಚಿವ ವಿಶ್ವನಾಥ

ಮೈಸೂರು: ಹಿಜಾಬ್-ಕೇಸರಿ ಶಾಲು ಧರಿಸುವ ವಿಚಾರದಲ್ಲಿ ಕಲ್ಲು ತೂರಿ ಗಲಾಟೆ ಮಾಡಿದವರನ್ನು ಪತ್ತೆ ಹಚ್ಚಿ ಬಂಧಿಸುವುದನ್ನು ಬಿಟ್ಟು ಶಾಲಾ-ಕಾಲೇಜುಗಳಿಗೆ ರಜೆ ಕೊಟ್ಟಿದ್ದು ತಪ್ಪು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಡಳಿತ ಮತ್ತು ವಿರೋಧ ಪಕ್ಷಗಳಿಂದ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. … Continued

ಭೂ ಒತ್ತುವರಿ ಆರೋಪ; ಕಳಂಕಿತರ ರಕ್ಷಿಸುವ ಕೆಲಸ ನಡೆಯುತ್ತಿದೆ

ಮೈಸೂರು: ಶಾಸಕ ಸಾ.ರಾ.ಮಹೇಶ್ ವಿರುದ್ಧ ಭೂ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಕಳಂಕಿತರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ನಡೆದದ್ದು ಹೈಡ್ರಾಮಾ. ಶಾಸಕರು ಪ್ರತಿಭಟನೆ ಮಾಡಿದಂತೆ, ಆರ್.ಸಿ. ಮನವಿ ಸ್ವೀಕರಿಸಿದಂತೆ, ತನಿಖೆ ಮಾಡುವುದಾಗಿ ಭರವಸೆ ನೀಡಿದ ನಾಟಕ … Continued