ಹಳಿಯಾಳ: ಹೆಂಡತಿ ಕೊಂದು ಬ್ಯಾರಲ್‌ನಲ್ಲಿ ಮುಚ್ಚಿಟ್ಟಿದ್ದ ಪತಿರಾಯ…!

ಹಳಿಯಾಳ: ಹೆಂಡತಿಯನ್ನ ಕೊಲೆ ಮಾಡಿ ನೀರಿನ ಖಾಲಿ ಬ್ಯಾರಲ್‌ನಲ್ಲಿ ಬಚ್ಚಿಟ್ಟಿದ್ದ ಗಂಡನನ್ನ ಹಳಿಯಾಳ ಹಾಗೂ ರಾಮನಗರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ತೆರಗಾಂವ ಗ್ರಾಮದ ತುಕಾರಾಮ ಮಡಿವಾಳ ತನ್ನ ಹೆಂಡತಿ ಶಾಂತಕುಮಾರಿ ಮಡಿವಾಳ (38) ಎಂಬವರನ್ನು ಕತ್ತುಹಿಸುಕಿ ಕೊಂದಿದ್ದಾನೆ. ಬೇರೆ ಹೆಣ್ಣು ಮಕ್ಕಳೊಂದಿಗೆ ಮಾತನಾಡುತ್ತಾನೆಂದು ಶಾಂತಕುಮಾರಿ … Continued

ಹಳಿಯಾಳ: ಮನೆ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು

ಕಾರವಾರ: ನಿರಂತರ ಮಳೆಯ ಪರಿಣಾಮ ಮನೆಯ ಮಣ್ಣಿನ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಎಂದು ಗುರುತಿಸಲಾಗಿದೆ. ಮನೆ ಗೋಡೆ ಕುಸಿದು, ಮನೆ ಗೋಡೆ ಪಕ್ಕದಲ್ಲಿ ಮಲಗಿದ್ದ ತಾಯಿ … Continued

ವಿಜಯ ಸಂದೇಶ ವಾರ ಪತ್ರಿಕೆಯ ಗೌರವ ಸಂಪಾದಕ ಚಂದ್ರಕಾಂತ ಅಂಗಡಿ ನಿಧನ

ಹಳಿಯಾಳ: ಸರಳ ವ್ಯಕ್ತಿತ್ವ ಹಾಗೂ ಸರ್ವ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ತಾಲೂಕಾ ಬಸವ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ, ಅಂಗಡಿ ಸರ್ವಿಸ್ ಮಾಲೀಕ ಹಾಗೂ ವಿಜಯ ಸಂದೇಶ ವಾರ ಪತ್ರಿಕೆಯ ಗೌರವ ಸಂಪಾದಕ ಚಂದ್ರಕಾಂತ ಅಂಗಡಿ (62) ಶುಕ್ರವಾರ ನಸುಕಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ , ಓರ್ವ ಪುತ್ರ, ಮೂವರು ಸಹೋದರರು … Continued