ಸಕಲೇಶಪುರ : ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ; ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ

ಹಾಸನ: ಸಕಲೇಶಪುರ ತಾಲ್ಲೂಕಿನ ಯಡಕುಮರಿ ಮತ್ತು ಶಿರಿವಾಗಿಲು ರೈಲು ನಿಲ್ದಾಣಗಳ ನಡುವಿನ ರೈಲ್ವೆ ಹಳಿಯ ಮೇಲೆ ಶನಿವಾರ ರಾತ್ರಿ 8:45ರ ಸುಮಾರಿಗೆ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಆ ಮಾರ್ಗದ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಘಟನೆ ಕುರಿತು ಮಾಹಿತಿ ನೀಡಿರುವ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ, “ಭೂಕುಸಿತ ಸಂಭವಿಸಿದ … Continued

ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

ಹಾಸನ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಗ್ರಾಮದ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಪಕ್ಷಾತೀತವಾಗಿ ಹಿರಿಯ ನಾಯಕರು ಅಂತಿಮ ನಮನ ಸಲ್ಲಿಸಲು ಮಾವಿನಕೆರೆಯಲ್ಲಿ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಚೆನ್ನಮ್ಮ ಅವರ ಕಿರಿಯ ಪುತ್ರ ಎಚ್‌.ಡಿ.ರಮೇಶ್‌ ಅಂತಿಮ … Continued

ವೀಡಿಯೊ | ಸಕಲೇಶಪುರ : ಚಪ್ಪಲಿ ಧರಿಸಿ ದೇವಸ್ಥಾನದಲ್ಲಿ ಪ್ರಿ-ವೆಡ್ಡಿಂಗ್ ಶೂಟಿಂಗ್ ಮಾಡಿದ ಆರೋಪ ; ಹೊಡೆದಾಟ

ಹಾಸನ : ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ನಡೆದ ಪ್ರಿ-ವೆಡ್ಡಿಂಗ್ ಫೋಟೋಶೂಟ್ ವೇಳೆ ಸ್ಥಳೀಯರು ಮತ್ತು ಫೋಟೋಗ್ರಾಫರ್‌ಗಳ ನಡುವೆ ಜಗಳ ಉಂಟಾಗಿದ್ದು, ಅದು ಮಾರಾಮಾರಿಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ತಾಲ್ಲೂಕಿನ ಬೆಟ್ಟದ ಸಾಲಿನಲ್ಲಿರುವ ಈ ದೇವಸ್ಥಾನವು ಪ್ರಿ-ವೆಡ್ಡಿಂಗ್ ಫೋಟೋಶೂಟ್‌ಗಳಿಗೆ ಅತ್ಯಂತ ಜನಪ್ರಿಯ ತಾಣವಾಗಿದೆ. ವರದಿಯ ಪ್ರಕಾರ, … Continued

ದೇಶದಲ್ಲಿ ಮೇಘ ಸ್ಫೋಟ, ಊಹಿಸಲಾಗದ ದುಃಖ, ಸಕ್ರಾಂತಿ ನಂತರ ರಾಜಕೀಯ ಬದಲಾವಣೆ : ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ: ರಾಜ್ಯ, ದೇಶ, ವಿದೇಶಗಳಲ್ಲಿ ಸಂಭವಿಸಬಹುದಾದ ವಿದ್ಯಮಾನಗಳ ಬಗ್ಗೆ ಕೋಡಿಮಠದ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ. ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಮಠದ ಶ್ರೀಗಳು, ದೇಶದಲ್ಲಿ ಮೇಘಸ್ಪೋಟವಾಗಲಿದೆ. ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಊಹಿಸಲಾಗದ ನೋವು ಭಾರತಕ್ಕೆ ಕಾಡಲಿದೆ ಎಂದು ಹೇಳಿದ್ದಾರೆ. … Continued

ವೀಡಿಯೊ…| ಹಾಸನ : ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಟ್ಟಿಸಿಕೊಂಡು ಬಂದ ಕೋಪಗೊಂಡ ಕಾಡಾನೆ ; ಸ್ವಲ್ಪದರಲ್ಲೇ ಪಾರು…

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಇಬ್ಬರು ಅರಣ್ಯಾಧಿಕಾರಿಗಳನ್ನು ಕಾಡು ಆನೆಯೊಂದು ಅಟ್ಟಿಸಿಕೊಂಡು ಹೋದ ಆಘಾತಕಾರಿ ಘಟನೆ ನಡೆದಿದ್ದು, ಇಬ್ಬರು ಅರಣ್ಯಾಧಿಕಾರಿಗಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಆನೆ ತನ್ನತ್ತ ಧಾವಿಸಿ ಬರುತ್ತಿದ್ದರೂ ಕ್ಯಾಮರಾಮನ್ ಪ್ರಾಣಕ್ಕೂ ಲೆಕ್ಕ ಕೊಡದೆ ಧೈರ್ಯವಾಗಿ ನಿಂತು ಘಟನೆಯನ್ನು ಚಿತ್ರೀಕರಿಸಿದ್ದಾರೆ. ಹಾಸನದ ಬೇಲೂರು ತಾಲೂಕಿನ ಗ್ರಾಮದಲ್ಲಿ ಕಾಡು ಆನೆಯೊಂದು ದಾರಿ ತಪ್ಪಿ ಕೃಷಿ ಭೂಮಿಗೆ ನುಗ್ಗಿದೆ. ಅರಣ್ಯ … Continued

ಹಾಸನ : ಕಾಡಾನೆ ದಾಳಿಗೆ ವೃದ್ಧ ಸಾವು; ಕೊಂದ ನಂತರ ಶವ ಮುಚ್ಚಿಟ್ಟು ಹೋದ ಆನೆ…!

ಹಾಸನ: ಕಾಡಾನೆಯೊಂದು (Elephant) ವೃದ್ಧನ ಮೇಲೆ ಏಕಾಏಕಿ ದಾಳಿ ನಡೆಸಿ ಕೊಂದು, ಶವದ ಮೇಲೆ ಕಾಫಿ ಗಿಡ ಮುಚ್ಚಿದ ಘಟನೆ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ … Continued

ಅಧಿಕಾರ ವಹಿಸಿಕೊಳ್ಳಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು

ಬೆಂಗಳೂರು: ಇತ್ತೀಚೆಗಷ್ಟೇ ತರಬೇತಿ ಮುಗಿಸಿದ್ದ ಕರ್ನಾಟಕದ ಯುವ ಐಪಿಎಸ್ ಅಧಿಕಾರಿಯೊಬ್ಬರು ಭಾನುವಾರ ಹಾಸನ ಜಿಲ್ಲೆಯಲ್ಲಿ ಮೊದಲ ಪೋಸ್ಟಿಂಗ್‌ಗೆ ತೆರಳುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ 9:30ರ … Continued

ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ ಸಿದ್ದರಾಮಯ್ಯ

ಹಾಸನ : ಹಾಸನದ ಅಧಿದೇವತೆಯಾದ ಹಾಸನಾಂಬೆಯ ದರ್ಶನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ. ತಾಯಿ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಅರ್ಚನೆ ಮಾಡಿಸಿದ್ದಾರೆ ಎಂದು ವರದಿಯಾಗಿದೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆಯಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು. ಖಡ್ಗಮಾಲಾ ಸ್ತೋತ್ರ ಶಕ್ತಿ ದೇವಿಯ ಅತ್ಯಂತ … Continued

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ; ಆಸ್ಪತ್ರೆಗೆ ದಾಖಲು

ಹಾಸನ: ದೇವಸ್ಥಾನಕ್ಕೆ ಹೋದಾಗ ಕಾಲು ಜಾರಿ ಬಿದ್ದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದ ಹೊಳೆನರಸೀಪುರ ಶಾಸಕ ಎಚ್‌.ಡಿ.ರೇವಣ್ಣ ಅವರು ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿದ್ದರು. ಹರದನಹಳ್ಳಿಯಲ್ಲಿ ಪೂಜೆಯ ಬಳಿಕ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ … Continued

ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. ಪ್ರಜ್ವಲ್‌ ರೇವಣ್ಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಮಂಗಳವಾರ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಬುಧವಾರ ಪ್ರಕಟಿಸಿದ್ದಾರೆ. ಪ್ರಜ್ವಲ್‌ … Continued