ವೀಡಿಯೊ..| ಹತ್ರಾಸ್‌ ಕಾಲ್ತುಳಿತದ ಘಟನೆ ನಂತರ ಭೋಲೆ ಬಾಬಾ ಬೆಂಗಾವಲು ಜೊತೆ ಗ್ರಾಮ ತೊರೆದ ವೀಡಿಯೊ ವೈರಲ್‌

ಲಕ್ನೋ : ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದ ದುರ್ಘಟನೆಗೆ ಸಂಬಂಧಿಸಿದಂತೆ ಗುರುವಾರ ಆರು ಜರನ್ನು ಬಂಧಿಸಲಾಗಿದೆ. ಇದರ ಮಧ್ಯೆಯೇ ಸತ್ಸಂಗ ನಡೆಸಿದ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ (Bhole Baba) ಘಟನೆ ಬಳಿಕ ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ವಾಹನದಲ್ಲಿ ಪರಾರಿಯಾಗಿರುವ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ … Continued

ಹತ್ರಾಸ್ ಕಾಲ್ತುಳಿತದ ಘಟನೆ : 6 ಮಂದಿ ಬಂಧನ, ಪ್ರಮುಖ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಲಕ್ನೋ : ಹತ್ರಾಸ್‌ನಲ್ಲಿ ಸತ್ಸಂಗದ ನಂತರ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಅವರೆಲ್ಲರೂ ಸತ್ಸಂಗವನ್ನು ನಡೆಸುವ ಸಂಘಟನಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಹತ್ರಾಸ್‌ನಲ್ಲಿ ನಾರಾಯಣ ಸಾಕರ್ ಹರಿ ಅಥವಾ ‘ಭೋಲೆ ಬಾಬಾ’ ನಡೆಸಿದ ಸತ್ಸಂಗದ ನಂತರ ನಡೆದ ಕಾಲ್ತುಳಿತದಲ್ಲಿ ಒಟ್ಟು … Continued

ಉತ್ತರ ಪ್ರದೇಶ ಕಾಲ್ತುಳಿತದ ಘಟನೆ : ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಮೃತಪಟ್ಟ ಪೊಲೀಸ್‌ ಸಿಬ್ಬಂದಿ

ಲಕ್ನೋ : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 116 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಈ ವೇಳೆ ರಜನೀಶ್ ಎಂಬ ಪೋಲೀಸ್ ಪೇದೆಯೊಬ್ಬರು ಎಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ದುರಂತ ದೃಶ್ಯವನ್ನು ನೋಡಿದ ನಂತರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೂ ನಡೆದಿದೆ ಎಂದು … Continued

ಉತ್ತರ ಪ್ರದೇಶದ ಸತ್ಸಂಗದಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ)ದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 116ಕ್ಕೆ ಏರಿದೆ. ರಾಜ್ಯ ಸರ್ಕಾರ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ಮೂವರು ಸಚಿವರನ್ನು ಪರಿಹಾರ ಕಾರ್ಯಗಳ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ಕಳುಹಿಸಿದೆ. ಈವರೆಗೆ 116 ಮಂದಿ ಸಾವಿಗೀಡಾಗಿದ್ದಾರೆ ಎಂದು ಇನ್ಸ್‌ಪೆಕ್ಟರ್ ಜನರಲ್ … Continued

ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮಕ್ಕಳು ಸೇರಿದಂತೆ 87 ಮಂದಿ ಸಾವು

ಲಕ್ನೋ:   ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ರಾಸ್‌ನ ಸಿಕಂದರಾ ರಾವ್ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಸಾವಿರಾರು ಮಂದಿ ಸೇರಿದ್ದ ‘ಸತ್ಸಂಗ’ದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ … Continued