ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (heart attack) ಮೃತಪಟ್ಟ ಘಟನೆ ನಡೆದಿದೆ ಎಂದುವರದಿಯಾಗಿದೆ. ಬಾಲಕ ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ.  ಕೊಡನವಳ್ಳಿ ಗ್ರಾಮದ ಗೌತಮ ಜೈನ್ ಹಾಗೂ ಶಿಲ್ಪಾ ದಂಪತಿ ಪುತ್ರ ತ್ರಿಲೋ (6) ಮೃತ ಬಾಲಕ … Continued

ಬೆಂಗಳೂರು : ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತದಿಂದ ಆಟಗಾರ ನಿಧನ

ಬೆಂಗಳೂರು : ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ ಅವರು ಭಾನುವಾರ ಕ್ರಿಕೆಟ್ ಪಂದ್ಯವನ್ನಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. 2014-15ರ ಋತುವಿನಲ್ಲಿ ರಣಜಿ ಟ್ರೋಫಿ ಮುಕುಟ ಮುಡಿಗೇರಿಸಿಕೊಂಡ ಕರ್ನಾಟಕ ತಂಡದ ಸದಸ್ಯರಾಗಿದ್ದ ಅಕ್ಷಯ ಅವರು, ಈ ದುರದೃಷ್ಟಕರ ಘಟನೆ ನಡೆದಾಗ ಕೆಎಸ್‌ಸಿಎ (KSCA) ಮೂರನೇ ಡಿವಿಷನ್ … Continued

ಕನ್ನಡ ಸಿನೆಮಾ-ಕಿರುತೆರೆಯ ಖ್ಯಾತ ನಟ ದಿಲೀಪ ರಾಜ ನಿಧನ

ಬೆಂಗಳೂರು : ಕನ್ನಡ ಸಿನೆಮಾ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ, ಕಂಠದಾನ ಕಲಾವಿದ ದಿಲೀಪ ರಾಜ (48) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಯಕ ನಟ, ಪೋಷಕ ನಟ, ನಿರ್ಮಾಪಕ ಹೀಗೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸಿನೆಮಾ ಹಾಗೂ ಕಿರುತೆರೆ ಎರಡರಲ್ಲೂ ತೊಡಗಿಸಿಕೊಂಡಿದ್ದರು. ರಾತ್ರಿ ಮಲಗಿದ್ದ ದಿಲೀಪರಾಜ ((Dilip Raj) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ … Continued

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ ; ಆಸ್ಪತ್ರೆಗೆ ದಾಖಲು

ಮುಂಬೈ : ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಶನಿವಾರ (ಏಪ್ರಿಲ್ 11) ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಸದ್ಯ ಅವರು ಆಸ್ಪತ್ರೆಯ ತುರ್ತು ವೈದ್ಯಕೀಯ ಸೇವೆಗಳ (EMS) ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಅವರ ಕುಟುಂಬ ಸದಸ್ಯರಿಂದಾಗಲಿ ಅಥವಾ ಆಸ್ಪತ್ರೆಯ … Continued

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಮೊದಲು ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಬೆಳಗಾವಿ : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮೃತ ವಿದ್ಯಾರ್ಥಿನಿಯನ್ನು ಭೂಮಿಕಾ  (17) ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆಯಲು ತೆರಳುವ ಸಲುವಾಗಿ ಸ್ನಾನ ಮುಗಿಸಿಕೊಂಡು ಹೊರಬರುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು … Continued

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ (84 ವರ್ಷ) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಎಚ್‌.ವಿ ಅನಂತ ಸುಬ್ಬರಾವ್ ಬುಧವಾರ (ಜ.28) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ … Continued

ನಡು ರಸ್ತೆಯಲ್ಲೇ ವ್ಯಕ್ತಿಗೆ ಹೃದಯಾಘಾತ ; ಪತ್ನಿ ಅಂಗಲಾಚಿ ಬೇಡಿಕೊಂಡರೂ ನೆರವಿಗೆ ಬಾರದ ಜನ…!

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನಿಗೆ ನಡುರಸ್ತೆಯಲ್ಲೇ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಂತೆ ಆತನ ಪತ್ನಿ ಎಷ್ಟೇ ಅಂಗಲಾಚಿದರೂ ಯಾರೂ ನೆರವಿಗೆ ಬಾರದ ಅಮಾನವೀಯ ಘಟನೆ ನಡೆದಿದೆ ಎಂದು ವರದಿಯಾಗಿದೆ. ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಬೈಕ್ ಮೇಲೆ ಆಸ್ಪತ್ರೆಗಳಿಂದ ಆಸ್ಪತ್ರೆಗೆ ಅಲೆದಾಡಿದರೂ, ಸಕಾಲಕ್ಕೆ ಚಿಕಿತ್ಸೆ ಸಿಗದೆ ಯುವಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ದಕ್ಷಿಣ ಬೆಂಗಳೂರಿನ ಬಾಲಾಜಿ … Continued

ಹೃದಯಾಘಾತಕ್ಕೊಳಗಾದ ಉದ್ಯಮಿಗೆ ಸಿಪಿಆರ್ ನೀಡಿ ಜೀವ ಉಳಿಸಿದ ಚಿನ್ನದಂಗಡಿ ಮಾಲೀಕನ ಮಗ; ವೀಡಿಯೊ ವೈರಲ್

ಕೋಟಾ: ರಾಜಸ್ಥಾನದ ಕೋಟಾ ನಗರದಲ್ಲಿರುವ ವರ್ಧಮಾನ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ಗುರುವಾರ (ಡಿಸೆಂಬರ್ 11) ಮಧ್ಯಾಹ್ನ ಸುಮಾರು 1:58 ರ ಸುಮಾರಿಗೆ ಹೃದಯ ಕಲಕುವ ಘಟನೆಯೊಂದು ನಡೆದಿದೆ. ಜೈಪುರ ಮೂಲದ ರತ್ನ ವ್ಯಾಪಾರಿ ರಾಜಕುಮಾರ ಸೋನಿ (60) ಅವರು ರಾಂಪುರ ಬಜಾರ್‌ನಲ್ಲಿರುವ ಈ ಆಭರಣ ಮಳಿಗೆಯಲ್ಲಿ ವಹಿವಾಟು ನಡೆಸುವಾಗ ಆಕಸ್ಮಿಕವಾಗಿ ಹೃದಯಾಘಾತಕ್ಕೊಳಗಾಗಿದ್ದಾರೆ. ಕೌಂಟರ್‌ ಬಳಿ ಕುಳಿತು ವ್ಯವಹಾರದ … Continued

ಹೃದಯಾಘಾತ, ಪಾರ್ಶ್ವವಾಯುವಿನ ಅಪಾಯ ಕಡಿಮೆ ಮಾಡುವ ಮಾತ್ರೆಗೆ ಎಫ್‌ಡಿಎ ಅನುಮೋದನೆ

ಅಮೆರಿಕಾದ ಆಹಾರ ಮತ್ತು ಔಷಧ ಆಡಳಿತ (US FDA), ಬಾಯಿಯ ಮೂಲಕ ತೆಗೆದುಕೊಳ್ಳುವ GLP-1 ರಿಸೆಪ್ಟರ್ ಆಗೋನಿಸ್ಟ್ ಔಷಧವಾದ ರೈಬೆಲ್ಸಸ್ (ಸೆಮಾಗ್ಲುಟೈಡ್) ಗೆ ಅನುಮೋದನೆ ನೀಡಿದೆ. ಟೈಪ್ 2 ಮಧುಮೇಹ ಮತ್ತು ಹೆಚ್ಚಿನ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವಿರುವ ವಯಸ್ಕರಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯು ತಡೆಯಲು ಈ ಔಷಧಿಯನ್ನು ಬಳಸಬಹುದಾಗಿದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು … Continued

ಖ್ಯಾತ ಹಾಸ್ಯ ನಟ-ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ

ಧಾರವಾಡ : ಖ್ಯಾತ ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಅವರು ಇಂದು, ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಶೈನ್ ಶೆಟ್ಟಿ ಅಭಿನಯದ ಹೊಸ‌ ಚಿತ್ರದಲ್ಲಿ ನಟಿಸುತ್ತಿರುವ ಅವರು, ಕಳೆದ ಎರಡು‌‌ ದಿನಗಳಿಂದ ಉಡುಪಿ ಜಿಲ್ಲೆಯ ಹೆಬ್ರಿ ಬಳಿ  ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಭಾನುವಾರ ರಾತ್ರಿ 12 ಗಂಟೆ ಹೊತ್ತಿಗೆ ರಾಜು ತಾಳಿಕೋಟೆ … Continued