ವೇದಿಕೆಯಲ್ಲಿ ಭಾಗವತಿಕೆ ಮಾಡುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಕುಕ್ಕೆಹಳ್ಳಿ ವಿಠ್ಠಲ ಪ್ರಭು

ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಕಲಾವಿದರೋರ್ವರು ಸಾವಿಗೀಡಾದ ಘಟನೆ ಮುಂಬೈಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ತೀವ್ರ ಹೃದಯಾಘಾತದಿಂದ ನಿಧನರಾದ ಕಲಾವಿದರಾಗಿದ್ದಾರೆ. . ಶನಿವಾರ ಕುಕ್ಕೆಹಳ್ಳಿ ವಿಠ್ಠಲ ಪ್ರಭು ಅವರ ನಿರ್ದೇಶನದಲ್ಲಿ ಮುಂಬೈಯಲ್ಲಿ ಯಕ್ಷಗಾನ ನಡೆಯುತ್ತಿತ್ತು. ಭಾಗವತಿಕೆ ನಡೆಸುತ್ತಿದ್ದ ವೇಳೆ ಅವರಿಗೆ ತೀವ್ರವಾದ ಎದೆ ನೋವು ಬಂದ ಕಾರಣ … Continued

ವೀಡಿಯೊ…| ಬೆಂಗಳೂರು : ಬಸ್‌ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಸಾವು : ಬಸ್ಸಿನಲ್ಲಿದ್ದವರ ಪ್ರಾಣ ಉಳಿಸಿದ ಕಂಡಕ್ಟರ್…

ಬೆಂಗಳೂರು: ಬೆಂಗಳೂರು ಮಹಾನಗರದ ನೆಲಮಂಗಲದಿಂದ ದಾಸನಪುರಕ್ಕೆ ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗ 40 ವರ್ಷದ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಸ್ ನೆಲಮಂಗಲದಿಂದ ದಾಸನಪುರಕ್ಕೆ ತೆರಳುತ್ತಿದ್ದಾಗ ಚಾಲನೆ ಮಾಡುತ್ತಿರುವಾಗಲೇ ಚಾಲಕ ಕಿರಣಕುಮಾರ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದು, ಬುಧವಾರ ಬೆಳಗ್ಗೆ 11 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅವರು ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದರು … Continued

ವಾಲಿಬಾಲ್ ತರಬೇತಿ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಶಿಕ್ಷಕ ಸಾವು

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಜಾನನ ಹಿರೇಮಠ (46) ಎಂಬವರು ಮೃತ ಶಿಕ್ಷಕರಾಗಿದ್ದಾರೆ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ … Continued

ಮೊದಲನೇ ಅಲೆ ಕೋವಿಡ್-19 ಸೋಂಕುಗಳಿಂದ ಹೃದಯಾಘಾತ, ಪಾರ್ಶ್ವವಾಯು ಅಪಾಯ ಹೆಚ್ಚಳ ; ಹೊಸ ಅಧ್ಯಯನ

ಸಾಂಕ್ರಾಮಿಕ ರೋಗದ ಆರಂಭಿಕ ಅಲೆಯಲ್ಲಿ ತೀವ್ರವಾದ ಕೋವಿಡ್ -19 ಸೋಂಕಿಗೆ ಒಳಗಾದ ವ್ಯಕ್ತಿಗಳು ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ತುತ್ತಾಗುವ ಎರಡು ಪಟ್ಟು ಅಪಾಯ ಎದುರಿಸಬೇಕಾಗುತ್ತದೆ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಆರ್ಟೆರಿಯೊಸ್ಕ್ಲೆರೋಸಿಸ್, ಥ್ರಂಬೋಸಿಸ್ ಮತ್ತು ನಾಳೀಯ ಜೀವಶಾಸ್ತ್ರದ ಜರ್ನಲ್‌ನಲ್ಲಿ ಈ ವಾರ ಪ್ರಕಟವಾದ ಅಮೆರಿಕದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್‌ನಿಂದ ಬೆಂಬಲಿತವಾದ ಸಂಶೋಧನೆಯು ಹೆಚ್ಚಿದ ಅಪಾಯವು … Continued

ವೀಡಿಯೊ ..| ʼರಾಮಲೀಲಾʼ ಪ್ರದರ್ಶನದ ವೇಳೆ ಅಭಿನಯಿಸುತ್ತಿದ್ದಾಗಲೇ ಹೃದಯಾಘಾತದಿಂದ ರಾಮನ ಪಾತ್ರಧಾರಿ ಸಾವು

ನವದೆಹಲಿ : ರಾಮಲೀಲಾದಲ್ಲಿ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ದೆಹಲಿಯ ಶಹದಾರದಲ್ಲಿರುವ ಜೈ ಶ್ರೀ ರಾಮಲೀಲಾ ವಿಶ್ವಕರ್ಮ ನಗರದಲ್ಲಿ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಪೂರ್ವ ದೆಹಲಿಯ ನಿವಾಸಿ ಸುಶೀಲ ಕೌಶಿಕ (45) ಅವರು ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಚಿನ್ನ ಮತ್ತು ಬೆಳ್ಳಿ ಆಭರಣಗಳಂತೆ … Continued

ಶಾಕಿಂಗ್‌ …| ನಿಮ್ಮ ಮಗಳು ಸೆಕ್ಸ್‌ ಜಾಲದಲ್ಲಿ ಸಿಲುಕಿದ್ದಾಳೆಂದು ಪೊಲೀಸರ ವೇಷದಲ್ಲಿ ವಂಚಕರಿಂದ ಫೋನ್‌ ಕಾಲ್‌ : ಶಿಕ್ಷಕಿ ಹೃದಯಘಾತದಿಂದ ಸಾವು…!

ಆಗ್ರಾ : ಮೊಬೈಲ್‌ ಕರೆ ವಂಚನೆಗಳು ಹಲವಾರು ಜನರು ಆರ್ಥಿಕ ನಷ್ಟವನ್ನು ಅನುಭವಿಸಲು ಕಾರಣವಾಗಿವೆ, ಆದರೆ ಅಂತಹ ಒಂದು ವಂಚನೆ ಕಾಲ್‌ ಮಹಿಳೆಯೊಬ್ಬರ ಜೀವವನ್ನೇ ಆಹುತಿ ತೆಗೆದುಕೊಂಡ ಘಟನೆ ವರದಿಯಾಗಿದೆ. ಆಗ್ರಾದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಮಾಲ್ತಿ ವರ್ಮಾ (58) ಅವರು ಪೊಲೀಸ್ ಅಧಿಕಾರಿ ಫೋಟೋ ಪೋಸಿನಲ್ಲಿದ್ದ ವ್ಯಕ್ತಿಯಿಂದ ವಾಟ್ಸಾಪ್ ಕರೆ ಸ್ವೀಕರಿಸಿದ್ದಾರೆ. ತನ್ನ ಕಾಲೇಜಿಗೆ … Continued

ವೀಡಿಯೊ..| ಹೃದಯಾಘಾತದಿಂದ ರೈಲಿನಲ್ಲಿ ಪ್ರಜ್ಞೆ ಕಳೆದುಕೊಂಡ ವಯಸ್ಸಾದ ವ್ಯಕ್ತಿ ; ಸಿಪಿಆರ್‌ ಮಾಡಿ ಜೀವ ಉಳಿಸಿದ ಟಿಕೆಟ್ ಪರೀಕ್ಷಕ…!

ರೈಲು ಪ್ರಯಾಣದ ವೇಳೆ ಪ್ರಯಾಣಿಕ ಹೃದಯಾಘಾತಕ್ಕೆ ಒಳಗಾದ ನಂತರ ಟಿಕೆಟ್ ಪರೀಕ್ಷಕರೊಬ್ಬರು ಸುಮಾರು 15 ನಿಮಿಷಗಳ ಕಾಲ ವಯಸ್ಸಾದ ವ್ಯಕ್ತಿಗೆ ಸಿಪಿಆರ್ ಮಾಡಿ ಆತನ ಜೀವ ಉಳಿಸಿದ್ದಾರೆ. ಬಿ.ಪಿ. ಕರ್ಣ ಮತ್ತು ಅವರ ಸಹೋದರ ಬಿಹಾರದ ದರ್ಬಂಗಾದಿಂದ ಉತ್ತರ ಪ್ರದೇಶದ ವಾರಣಾಸಿಗೆ ಪವನ್ ಎಕ್ಸ್‌ಪ್ರೆಸ್‌ನ ಪ್ರಥಮ ದರ್ಜೆ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಕರ್ಣ ಅವರಿಗೆ ಎದೆನೋವು ಕಾಣಿಸಿಕೊಂಡು … Continued

ಒಂದೇ ದಿನ 23 ಹಲ್ಲು ಕಿತ್ತುಹಾಕಿ, 12 ಹಲ್ಲು ಅಳವಡಿಸಿದ ದಂತ ವೈದ್ಯ ; ನಂತ್ರ ರೋಗಿ ಸಾವು….

ಇತ್ತೀಚಿನ ಪ್ರಕರಣವೊಂದರಲ್ಲಿ ಪೂರ್ವ ಚೀನಾದಲ್ಲಿ ನಡೆದ ಘಟನೆಯೊಂದು ಹಲ್ಲು ತೆಗೆಯುವಾಗಿನ ಕಾರ್ಯವಿಧಾನದ ಸುರಕ್ಷತೆಯ ಬಗ್ಗೆ ಆತಂಕ ಮೂಡುವಂತೆ ಮಾಡಿದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಹುವಾಂಗ್ ಎಂಬ ಅಡ್ಡಹೆಸರಿನ ವ್ಯಕ್ತಿ, ಆಗಸ್ಟ್ 14 ರಂದು ಝೆಜಿಯಾಂಗ್ ಪ್ರಾಂತ್ಯದ ಜಿನ್ಹುವಾದಲ್ಲಿರುವ ಯೋಂಗ್ಕಾಂಗ್ ಡೆವೇ ಡೆಂಟಲ್ ಆಸ್ಪತ್ರೆಯಲ್ಲಿ ವ್ಯಾಪಕವಾದ ಹಲ್ಲಿನ ಶಸ್ತ್ರಚಿಕಿತ್ಸೆಗೆ ಒಳಗಾಗದರು. “ಹಲ್ಲಿನ ತಕ್ಷಣ ಅಳವಡಿಕೆ” … Continued

ಕಲಬುರಗಿ: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ದರಾಮ ಸ್ವಾಮೀಜಿ ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ಕಲಬುರಗಿಯ ಕಾಳಗಿ ತಾಲೂಕಿನ ವಿರಕ್ತ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ (35) ವಿಧಿವಶರಾಗಿದ್ದಾರೆ. ಆದರಿಂದು ನಸುಕಿನ ಜಾವ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು, ಸೋಮವಾರ ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಸ್ವಾಮೀಜಿಗೆ ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿದೆ … Continued

ಉತ್ತರ ಪ್ರದೇಶ ಕಾಲ್ತುಳಿತದ ಘಟನೆ : ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಮೃತಪಟ್ಟ ಪೊಲೀಸ್‌ ಸಿಬ್ಬಂದಿ

ಲಕ್ನೋ : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 116 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಈ ವೇಳೆ ರಜನೀಶ್ ಎಂಬ ಪೋಲೀಸ್ ಪೇದೆಯೊಬ್ಬರು ಎಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ದುರಂತ ದೃಶ್ಯವನ್ನು ನೋಡಿದ ನಂತರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೂ ನಡೆದಿದೆ ಎಂದು … Continued