ಶಿವಮೊಗ್ಗ : ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ ; ಬಿಜೆಪಿ ನಾಯಕ ಭಾನುಪ್ರಕಾಶ ನಿಧನ

ಶಿವಮೊಗ್ಗ: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ ಅವರು ತೀವ್ರವಾಗಿ ಅಸ್ವಸ್ಥಗೊಂಡು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಗೋಪಿ ಸರ್ಕಲ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಪ್ರತಿಭಟನೆ ಕಾರ್ಯಕ್ರಮದ ನಂತರ ಭಾನುಪ್ರಕಾಶ ಅವರಿಗೆ ಹೃದಯಾಘಾತವಾಗಿದೆ. ಅವರು ಅಲ್ಲಿಯೇ … Continued

ವೀಡಿಯೊ..| ಸಿಕ್ಸರ್‌ ಬಾರಿಸಿದ ಕೆಲವೇ ಸೆಕೆಂಡುಗಳಲ್ಲಿ ಕುಸಿದುಬಿದ್ದು ಮೈದಾನದಲ್ಲೇ ಪ್ರಾಣಬಿಟ್ಟ ಕ್ರಿಕೆಟ್‌ ಆಟಗಾರ

ಥಾಣೆ: ಆಟದ ವೇಳೆ ಕ್ರೀಸ್‌ ಬಿಟ್ಟು ಮುನ್ನುಗ್ಗಿ ಸಿಕ್ಸರ್‌ ಬಾರಿಸಿದ ಕೆಲವೇ ಸೆಕೆಂಡುಗಳಲ್ಲೇ ಹೃದಯಾಘಾತ (Heart Attack) ಸಂಭವಿಸಿ ಕ್ರಿಕೆಟ್‌ ಆಟಗಾರನೊಬ್ಬ (Cricketer) ಮೈದಾನದಲ್ಲೇ ಪ್ರಾಣಬಿಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅವರು ಕ್ರೀಸ್‌ನಿಂದ ಒಂದು ಅಡಿ ಮುಂದೆ ಬಂದು ಪಾರ್ಕ್‌ನಿಂದ ಚೆಂಡನ್ನು ಸಿಕ್ಸರ್‌ಗೆ ಹೊಡೆದರು. ನಂತರ ಕುಸಿದು ಬಿದ್ದು ಸಾವಿಗೀಡಾದ್ದಾರೆ. ಮಹಾರಾಷ್ಟ್ರದ ಥಾಣೆಯ ಮೀರಾ ರೋಡ್ … Continued

ವೀಡಿಯೊ..| ಯೋಗ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಬೀಸುತ್ತ ಡ್ಯಾನ್ಸ್ ಮಾಡುವಾಗ ಪ್ರಾಣಬಿಟ್ಟ ನಿವೃತ್ತ ಸೈನಿಕ ; ಯೋಗ ಮಾಡುತ್ತಿದ್ದಾನೆಂದು ತಿಳಿದು ಚಪ್ಪಾಳೆ ತಟ್ಟಿದ ಜನ

ಮಧ್ಯಪ್ರದೇಶದ ಇಂದೋರ್ (Indore) ಯೋಗ ಕೇಂದ್ರದಲ್ಲಿ ಆಸ್ತ ಯೋಗ ಕ್ರಾಂತಿ ಅಭಿಯಾನದ ವತಿಯಿಂದ ನಡೆದ ಯೋಗ ಕಾರ್ಯಕ್ರಮದಲ್ಲಿ ನಗು ಮತ್ತು ತೂಕ ಇಳಿಸುವ ಯೋಗಕ್ಕೆ ಹೆಸರಾದ ಬಲ್ವಿಂದರ್ ಸಿಂಗ್ ಛಾಬ್ರಾ (Balwinder Singh Chhabra) ಎಂಬ ನಿವೃತ್ತ ಸೈನಿಕ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ವೇದಿಕೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಯೋಗ … Continued

ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ಮತಗಟ್ಟೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಮಹಿಳೆಯೊಬ್ಬರ ಜೀವ ಉಳಿದಿದೆ. ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಾಗ ಹೃದಯಾಘಾತದಿಂದ ಕುಸಿದುಬಿದ್ದ ಮಹಿಳೆಗೆ ತ್ವರಿತಗತಿಯಲ್ಲಿ ವೈದ್ಯರು ಸ್ಪಂದಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಮಹಿಳೆ ಆಗಮಿಸಿದ್ದರು. ವೈದ್ಯರು … Continued

ನಟ-ಮಾಜಿ ಐಎಎಸ್​ ಅಧಿಕಾರಿ ಕೆ. ಶಿವರಾಮಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ಕನ್ನಡದ ನಟ ಕೆ. ಶಿವರಾಮ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, 71 ವರ್ಷ ವಯಸ್ಸಿನ ಕೆ ಶಿವರಾಮ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಕೆಲದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿತ್ತು … Continued

ವೀಡಿಯೊ….| ರಾಮಲೀಲಾ ನಾಟಕದಲ್ಲಿ ʼಹನುಮಂತʼನ ಪಾತ್ರಧಾರಿ ವೇದಿಕೆಯಲ್ಲೇ ಕುಸಿದುಬಿದ್ದು ಸಾವು

ಹರಿಯಾಣದ ಭಿವಾನಿಯಲ್ಲಿ ಸೋಮವಾರ ‘ರಾಮಲೀಲಾ’ ನಾಟಕದಲ್ಲಿ ಹನುಮಂತನ ಪಾತ್ರವನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಕುದಿಬಿದ್ದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹರೀಶ ಮೆಹ್ತಾ ಎಂದು ಗುರುತಿಸಲಾದ ಹುನುಮಂತನ ಪಾತ್ರಧಾರಿ ತನ್ನ ಪ್ರದರ್ಶನದ ಸಮಯದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಿವಾನಿಯ ಜವಾಹರ ಚೌಕ್ ಪ್ರದೇಶದಲ್ಲಿ ಭಗವಾನ್ ರಾಮನ ಗೌರವಾರ್ಥ “ರಾಜ ತಿಲಕ” ಎಂಬ ಕಾರ್ಯಕ್ರಮದಲ್ಲಿ ಈ ಘಟನೆ … Continued

ಬಾಲಿವುಡ್‌ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ

ಮುಂಬೈ:  ಖ್ಯಾತ ನಟ ಶ್ರೇಯಸ್ ತಲ್ಪಾಡೆ (47) ಅವರು ಗುರುವಾರ ಸಂಜೆ ಮುಂಬೈನಲ್ಲಿ ತಮ್ಮ ಚಿತ್ರೀಕರಣ ಮುಗಿಸಿದ ನಂತರ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ಹಾಗೂ ಅವರನ್ನು ತಕ್ಷಣವೇ ಅಂಧೇರಿ ಪಶ್ಚಿಮದಲ್ಲಿರುವ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ವರದಿಯಾಗಿದೆ. ಹಿಂದೂಸ್ತಾನ್‌ಟೈಮ್ಸ್‌ ವರದಿಯ ಪ್ರಕಾರ ತಲ್ಪಾಡೆ ಅವರು ಏನೋ ತೊಂದರೆಯಾಗುತ್ತಿದೆ ಎಂದು ಹೇಳಿದರು ಹಾಗೂ ಮನೆಗೆ … Continued

ಆಘಾತಕಾರಿ….: ಗುಜರಾತಿನಲ್ಲಿ 6 ತಿಂಗಳಲ್ಲಿ ಹೃದಯಾಘಾತದಿಂದ ಸಾವಿಗೀಡಾದವರಲ್ಲಿ 80% ರಷ್ಟು ಮಂದಿ 11-25 ವರ್ಷದವರು…!

ಅಹಮದಾಬಾದ್: ಕಳೆದ ಆರು ತಿಂಗಳಲ್ಲಿ ಗುಜರಾತಿನಲ್ಲಿ ಒಟ್ಟು 1,052 ಜನರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರಲ್ಲಿ 80% ರಷ್ಟು ಜನ 11-25 ವಯಸ್ಸಿನವರು ಎಂದು ರಾಜ್ಯ ಶಿಕ್ಷಣ ಸಚಿವ ಕುಬೇರ ದಿಂಡೋರ್ ಶುಕ್ರವಾರ ಹೇಳಿದ್ದಾರೆ. ಹೆಚ್ಚುತ್ತಿರುವ ಹೃದಯಾಘಾತಗಳನ್ನು ಗಮನದಲ್ಲಿಟ್ಟುಕೊಂಡು, ಸುಮಾರು ಎರಡು ಲಕ್ಷ ಶಾಲಾ ಶಿಕ್ಷಕರು ಮತ್ತು ಕಾಲೇಜು ಪ್ರಾಧ್ಯಾಪಕರಿಗೆ ಕಾರ್ಡಿಯೋಪಲ್ಮನರಿ ಪುನರುಜ್ಜೀವನ (ಸಿಪಿಆರ್) ಮಾಡುವಲ್ಲಿ ತರಬೇತಿ … Continued

ಹೃದಯಾಘಾತದ ನಂತರ 1 ತಾಸು ಕಾಲ ಹೃದಯದ ಬಡಿತ ನಿಂತು ಹೋಗಿತ್ತು… ಆದರೂ ಬದುಕುಳಿದ ಈ ವ್ಯಕ್ತಿ…! ಈ ಪವಾಡ ಹೇಗಾಯ್ತು..?

ನಾಗಪುರ : ಮಹಾರಾಷ್ಟ್ರದ ನಾಗಪುರದ ವ್ಯಕ್ತಿಯೊಬ್ಬರಿಗೆ ಸುಮಾರು ಒಂದು ಗಂಟೆಗಳ ಕಾಲ ಹೃದಯ ಬಡಿತ ನಿಂತು ಹೋಗಿದ್ದರೂ ಅವರು ಜೀವಂತವಾಗಿ ಬದುಕುಳಿದಿದ್ದಾರೆ….! ಈ ಪವಾಡ ಸದೃಶ ಘಟನೆಗೆ ವೈದ್ಯರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, 32 ವರ್ಷದ ರೋಗಿಯು ಆಗಸ್ಟ್ 25 ರಂದು ಹೃದಯಾಘಾತಕ್ಕೊಳಗಾದ ನಂತರ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರು … Continued

ವೀಡಿಯೊ..| ಔಷಧಿ ಖರೀದಿಗೆಂದು ಔಷಧದ ಅಂಗಡಿಗೆ ಬಂದಾಗಲೇ ಹೃದಯಘಾತದಿಂದ ಸಾವು

ಮೈಸೂರು: ಈ ಹೃದಯ ಯಾವ ಕ್ಷಣದಲ್ಲಿ ಆಘಾತಕ್ಕೆ (Heart Attack) ಒಳಗಾಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಕುಳಿತಲ್ಲೇ ಕುಸಿಯುವುದು, ಮಾತನಾಡುತ್ತಿರುವಾಗಲೇ ಸ್ತಬ್ದವಾಗುವುದು, ನೃತ್ಯ ಮಾಡುತ್ತಲೇ ಬೀಳುವುದು.. ಹೀಗೆ ಸಾವಿನ ಹತ್ತಾರು ಸನ್ನಿವೇಶಗಳು ಕಂಡುಬರುತ್ತಿವೆ. ಮೈಸೂರಿನಲ್ಲಿ ಔಷಧದ ಅಂಗಡಿಯೊಂದಕ್ಕೆ (Medical Stores) ಔಷಧ ತೆಗೆದುಕೊಳ್ಳಲೆಂದು ಬಂದ ವ್ಯಕ್ತಿ ಅಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆಯೊಂದು ವರದಿಯಾಗಿದೆ. ಘಟನೆಯ ದೃಶ್ಯಗಳು … Continued