ವಿಡಿಯೊಗಳು…: ಭೀಕರ ಬಿಸಿಗಾಳಿಗೆ ಕರಗಿದ ರಸ್ತೆಗಳು, ಬಾಗಿದ ರೈಲು ಹಳಿಗಳು ; ನೂರಾರು ಸಾವು : ತತ್ತರಿಸಿದ ಯುರೋಪ್

ಲಂಡನ್: ಯುರೋಪ್ ಖಂಡವು ತನ್ನ ಇತಿಹಾಸದಲ್ಲೇ ಅತ್ಯಂತ ಕಠಿಣ ಮತ್ತು ಭೀಕರವಾದ ಬಿಸಿಗಾಳಿಗೆ (Heatwave ತತ್ತರಿಸಿದೆ. ಸೂರ್ಯನ ಪ್ರಖರ ಶಾಖಕ್ಕೆ ರಸ್ತೆಗಳು ಕರಗುತ್ತಿದ್ದು, ಟ್ರ್ಯಾಮ್ ರೈಲುಗಳ ಹಳಿಗಳು ಬಾಗುತ್ತಿವೆ. ವಿಪರೀತ ಶಾಖದ ಹಿನ್ನೆಲೆಯಲ್ಲಿ ಸಾವಿರಾರು ಜನ ಆಸ್ಪತ್ರೆ ಸೇರುತ್ತಿದ್ದಾರೆ. ಇತಿಹಾಸದ ಎಲ್ಲಾ ದಾಖಲೆಗಳನ್ನು ಮುರಿಯುತ್ತಿರುವ ತಾಪಮಾನವು ಹಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈಗಾಗಲೇ 40°C ಗಡಿಯನ್ನು ದಾಟಿದೆ. … Continued

ವಿಡಿಯೋ | ಭೀಕರ ಬೇಸಿಗೆಗೆ ತತ್ತರಿಸಿದ ವನ್ಯಜೀವಿಗಳು : ನೀರಿಗಾಗಿ ಸಾರಿಗೆ ಬಸ್ಸನ್ನೇ ತಡೆದು ನಿಲ್ಲಿಸಿದ ಕೋತಿಗಳ ಹಿಂಡು !

ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆದ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು, ತೀವ್ರ ಬೇಸಿಗೆಯ ಶಾಖವು ವನ್ಯಜೀವಿಗಳ ಮೇಲೆ ಬೀರುತ್ತಿರುವ ಭೀಕರ ಪರಿಣಾಮವನ್ನು ಕಣ್ಣಿಗೆ ಕಟ್ಟುವಂತೆ ಮಾಡಿದೆ. ಯವತ್ಮಾಲ್ ಜಿಲ್ಲೆಯ ಪುಸಾದ್ ಬಳಿಯ ಖಂಡಾಲಾ ಘಾಟ್‌ನಲ್ಲಿ, ಬಾಯಾರಿಕೆಯಿಂದ ತತ್ತರಿಸಿದ್ದ ಮಂಗಗಳು ನೀರಿಗಾಗಿ ಚಲಿಸುತ್ತಿದ್ದ ರಾಜ್ಯ ಸಾರಿಗೆ ಬಸ್ಸನ್ನು ತಡೆದು ನಿಲ್ಲಿಸಿದ ಘಟನೆ ಪ್ರಯಾಣಿಕರನ್ನು ಭಾವುಕರನ್ನಾಗಿಸಿದೆ. ಬುಧವಾರ ಮಧ್ಯಾಹ್ನ ಸುಮಾರು … Continued

ವಿಶ್ವದಲ್ಲೇ ಅತ್ಯಂತ ಬಿಸಿ ನಗರ ಎಂಬ ಕುಖ್ಯಾತಿಗೆ ಪಾತ್ರವಾದ ಭಾರತದ ʼಬಂಡಾʼ ನಗರ

ಉತ್ತರ ಪ್ರದೇಶದ ಬುಂದೇಲಖಂಡ ಜಿಲ್ಲೆಯ ‘ಬಂಡಾ’  ಪ್ರದೇಶವು  ಜಗತ್ತಿನಲ್ಲೇ ಅತ್ಯಂತ ಹೆಚ್ಚು ಉಷ್ಣಾಂಶ ದಾಖಲಾಗುವ ಭೀಕರ ಪ್ರದೇಶವಾಗಿ ಪದೇ ಪದೇ ಹೊರಹೊಮ್ಮುತ್ತಿದೆ. ಇತ್ತೀಚೆಗೆ ಇಲ್ಲಿ ಬರೋಬ್ಬರಿ 48.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಮೂಲಕ ದೇಶದಲ್ಲೇ ಅತಿ ಹೆಚ್ಚು ಮತ್ತು ಜಗತ್ತಿನಲ್ಲೇ ಅತ್ಯಂತ ಗರಿಷ್ಠ ಉಷ್ಣಾಂಶ ಹೊಂದಿದ ನಗರಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಇದಕ್ಕೂ ಎರಡು ದಿನ … Continued

ಕುದಿಯುತ್ತಿದೆ ಭಾರತ : ಜಗತ್ತಿನ ಅತಿ ಹೆಚ್ಚು ತಾಪಮಾನವಿರುವ 100 ನಗರಗಳಲ್ಲಿ ಭಾರತದಲ್ಲೇ ಇವೆ 95 ನಗರಗಳು..!

ನವದೆಹಲಿ: ಪ್ರಸ್ತುತ ಭಾರತದಾದ್ಯಂತ ಹಲವು ಪ್ರದೇಶಗಳಲ್ಲಿ ತೀವ್ರವಾದ ಬಿಸಿಗಾಳಿ (Heatwave) ಆವರಿಸಿದೆ. ರಿಯಲ್-ಟೈಮ್ ಜಾಗತಿಕ ತಾಪಮಾನ ಶ್ರೇಯಾಂಕದ ಪ್ರಕಾರ, ಭಾರತವು ಪ್ರಸ್ತುತ ಜಾಗತಿಕ ತಾಪಮಾನ ಏರಿಕೆಯ ಕೇಂದ್ರಬಿಂದುವಾಗಿದೆ. ವಿಶ್ವದ 100 ಅತ್ಯಂತ ಹೆಚ್ಚು ತಾಪಮಾನ ಇರುವ ನಗರಗಳ ಪಟ್ಟಿಯಲ್ಲಿ ಬರೋಬ್ಬರಿ 95 ನಗರಗಳು ಭಾರತದ್ದೇ ಆಗಿವೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ನಗರ ಮತ್ತು … Continued

ಏಪ್ರಿಲ್‌ ನಿಂದ ಜೂನ್‌ ಅವಧಿಯಲ್ಲಿ ಕರ್ನಾಟಕ ಸೇರಿ ದೇಶಾದ್ಯಂತ ತಾಪಮಾನ ಇನ್ನಷ್ಟು ಹೆಚ್ಚಳ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ನವದೆಹಲಿ: ಭಾರತವು ಏಪ್ರಿಲ್‌ನಿಂದ ಜೂನ್‌ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ, ಮಧ್ಯ ಮತ್ತು ಪೂರ್ವ ಭಾರತ ಮತ್ತು ವಾಯುವ್ಯ ಬಯಲು ಪ್ರದೇಶಗಳಲ್ಲಿ ಹೆಚ್ಚಿನ ಶಾಖದ ದಿನಗಳು ಇರುತ್ತವೆ ಎಂದು ಐಎಂಡಿ (IMD) ಸೋಮವಾರ (ಮಾರ್ಚ್ 31) ತಿಳಿಸಿದೆ. ದೇಶಾದ್ಯಂತ ಬಿಸಿಲ ಬೇಗೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪ್ರಖರತೆ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಭಾರತೀಯ … Continued

ಹಜ್ ಯಾತ್ರೆ ವೇಳೆ ಶಾಖದ ಅಲೆಯಿಂದಾಗಿ 68 ಭಾರತೀಯರು ಸೇರಿ 1000ಕ್ಕೂ ಹೆಚ್ಚು ಸಾವು ; ವರದಿ

ರಿಯಾದ್‌ : ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪದ ನಡುವೆ ಮೃತಪಟ್ಟವರ ಸಂಖ್ಯೆ 1,000 ಮೀರಿದೆ ಎಂದು ಎಎಫ್‌ಪಿ (AFP) ಗುರುವಾರ (ಜೂನ್ 20) ವರದಿ ಮಾಡಿದೆ. ಇವರಲ್ಲಿ 68 ಭಾರತೀಯರು ಸಾವಿಗೀಡಾದ್ದಾರೆ ಎಂದು ಹೇಳಲಾಗಿದೆ. ವರದಿಯಾದ ಸಾವುಗಳಲ್ಲಿ, ಅರ್ಧದಷ್ಟು ಜನರು ನೋಂದಾಯಿಸದ ಯಾತ್ರಿಗಳಾಗಿದ್ದಾರೆ. ಅವರು ಪವಿತ್ರ ನಗರವಾದ … Continued

52 ಡಿಗ್ರಿ ಸೆಲ್ಸಿಯಸ್‌ ಸಮೀಪ ತಲುಪಿದ ತಾಪಮಾನ ; ಹಜ್​ ಯಾತ್ರೆಗೆ ತೆರಳಿದ್ದ 550 ಯಾತ್ರಿಕರು ಸಾವು

ಈ ವರ್ಷ ಹಜ್ ಸಮಯದಲ್ಲಿ ಕನಿಷ್ಠ 550 ಯಾತ್ರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏಕೆಂದರೆ ಮೆಕ್ಕಾದಲ್ಲಿ ಸುಡುವ ತಾಪಮಾನವು 50 ಸೆಂಟಿಗ್ರೇಡ್‌ಗಿಂತ ಹೆಚ್ಚಾಗಿದೆ. ಸೋಮವಾರ ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ (125 ಫ್ಯಾರನ್‌ಹೀಟ್) ತಲುಪಿದೆ ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ. ಮೃತಪಟ್ಟವರಲ್ಲಿ ಕನಿಷ್ಠ 323 ಮಂದಿ ಈಜಿಪ್ಟಿನವರು, ಅವರಲ್ಲಿ … Continued

ಬಿಸಿಗಾಳಿಗೆ ಬಿಹಾರ ತತ್ತರ..: 24 ತಾಸಿನಲ್ಲಿ 19 ಮಂದಿ ಸಾವು

ಪಾಟ್ನಾ : ಕಳೆದ 24 ಗಂಟೆಗಳಲ್ಲಿ ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಬಿಸಿಗಾಳಿಗೆ ಕನಿಷ್ಠ 19 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಕ್ಸಾರ್‌ನಲ್ಲಿ ಸಿಕ್ರೌಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆಬದಿಯಲ್ಲಿ ಪತ್ತೆಯಾದ ಯುವಕ ಸೇರಿದಂತೆ ಮೂವರು ಬಿಸಿಲಿನ ತಾಪದಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಳಂದಾದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ ಓರ್ವ ಶಿಕ್ಷಕ, ಓರ್ವ … Continued

ವೀಡಿಯೊ..| ರಾಜಸ್ಥಾನದಲ್ಲಿ ತಾಪಮಾನ ಈಗ ನಿಗಿನಿಗಿ ಕೆಂಡ : ಬಿಕಾನೇರ್‌ ಮರಳಿನಲ್ಲಿ ಹಪ್ಪಳ ಹುರಿದ ಬಿಎಸ್​ಎಫ್​ ಯೋಧ…!

ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 47 ಡಿಗ್ರಿ ಸೆಲ್ಸಿಯಸ್ ದಾಟಿ ಶಾಖದ ಅಲೆಗೆ ಕಾರಣವಾಗುತ್ತಿದ್ದು, ದೆಹಲಿ, ಪಂಜಾಬ್, ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳ ವಾಯುವ್ಯ ಬಯಲು ಪ್ರದೇಶಗಳಿಗೆ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ನೀಡಿದೆ. ಹವಾಮಾನ ಇಲಾಖೆಯು ಮೇ 25 ರವರೆಗೆ ಈ … Continued

ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಭಾರತಕ್ಕೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ್ದು, ವಿಶೇಷವಾಗಿ ದೆಹಲಿ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಗುರುವಾರ ಹೇಳಿದೆ. ಇದಕ್ಕೆ ವ್ಯತಿರಿಕ್ತವಾಗಿ, ದಕ್ಷಿಣ ಭಾರತದಲ್ಲಿ ಮೇ 22 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದಲ್ಲಿ ಮುಂದಿನ ಏಳು ದಿನಗಳ … Continued