ಶಿರಾಡಿ ಘಾಟಿಯಲ್ಲಿ ಭೂಕುಸಿತ ; ಮಣ್ಣಿನಲ್ಲಿ ಸಿಲುಕಿದ ವಾಹನಗಳು : ಸಂಚಾರ ಬಂದ್

ಹಾಸನ: ಕೇರಳದ ವಯನಾಡಿನ ಬೆನ್ನಲ್ಲೇ ಕರ್ನಾಟಕದ ಹಾಸನದ ಶಿರಾಡಿ ಘಾಟ್ ರಸ್ತೆಯಲ್ಲೂ ಮಂಗಳವಾರ ಅಪರಾಹ್ನ ಭಾರೀ ಭೂಕುಸಿತ ಸಂಭವಿಸಿದ್ದು ಹಲವು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ ಎಂದು ವರದಿಯಾಗಿವೆ. ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಮತ್ತೆ ಬೃಹತ್‌ ಭೂಕುಸಿತವಾಗಿದೆ. ಎರಡು ಕಾರು, ಒಂದು ಟ್ಯಾಂಕರ್ … Continued

ಉತ್ತರ ಕನ್ನಡ ಜಿಲ್ಲೆ ; ಇಂದು (ಜುಲೈ 19)ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್‌ ಅಲರ್ಟ್‌ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜುಲೈ 19) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ, ಹಳಿಯಾಳ, … Continued

ಉತ್ತರ ಕನ್ನಡ ಜಿಲ್ಲೆ 10 ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ಇಂದು (ಜು.18) ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಹತ್ತು ತಾಲೂಕುಗಳ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಹಳಿಯಾಳ ಹಾಗೂ ಮುಂಡಗೋಡ ತಾಲೂಕು ಹೊರತುಪಡಿಸಿ ಭಟ್ಕಳ, ಹೊನ್ನಾವರ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ … Continued

ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ವಿಪರೀತ ಮಳೆ; ಜುಲೈ 16 ರಂದು ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದ್ದು ಕೆಲವು ಜಿಲ್ಲೆಗಳಲ್ಲಿ ಮಂಗಳವಾರ (ಜುಲೈ ೧೬)ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಅನುದಾನಿತ … Continued

ವಿಪರೀತ ಮಳೆ : ನಾಳೆ (ಜುಲೈ 16) ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ (ಜುಲೈ 16)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಡುಗೋಡ ಹಾಗೂ ಹಳಿಯಾಳ ತಾಲೂಕು ಹೊರತುಪಡಿಸಿ ಜಿಲ್ಲೆಯ ಹತ್ತು ತಾಲೂಕುಗಳು, ಅಂದರೆ ಕಾರವಾರ ಅಂಕೋಲಾ, ಹೊನ್ನಾವರ, … Continued

ಭಾರಿ ಮಳೆ: ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15ಕ್ಕೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 15)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾರವಾರ ಅಂಕೋಲ, ಹೊನ್ನಾವರ, ಕುಮಟಾ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ … Continued

ಮುಂಬೈನಲ್ಲಿ 6 ತಾಸಿನಲ್ಲಿ 30 ಸೆಂ.ಮೀ.ಗೂ ಅಧಿಕ ಮಳೆ : ರೈಲು ಸೇವೆಗಳಿಗೆ ತೊಂದರೆ, ಶಾಲಾ- ಕಾಲೇಜುಗಳು ಬಂದ್‌, 65 ಜನರ ರಕ್ಷಣೆ

ಮುಂಬೈ: ಕಳೆದ 24 ಗಂಟೆಗಳಲ್ಲಿ ಮುಂಬೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ವ್ಯಾಪಕವಾದ ಪ್ರದೇಶ ಜಲಾವೃತವಾಗಿದ್ದು, ಉಪನಗರ ರೈಲು ಸಂಚಾರಕ್ಕೆ ತೊಂದರೆಯಾಗಿದೆ ಸೋಮವಾರ ನಸುಕಿನ 1 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗಿನ ಆರು ಗಂಟೆಗಳ ಅವಧಿಯಲ್ಲಿ ಮುಂಬೈ ನಗರದ ಕೆಲವು ಪ್ರದೇಶಗಳಲ್ಲಿ 30 ಸೆಂ.ಮೀ.ಗೂ ಅಧಿಕ ಮಳೆ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ಜುಲೈ 8 ರಂದು ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಕರಾವಳಿಯ ಐದು ತಾಲೂಕುಗಳಿಗೆ ಸೋಮವಾರ (ಜುಲೈ 8) ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು … Continued

ಭಾರೀ ಮಳೆಗೆ ಶಿರಸಿ- ಕುಮಟಾ ಹೆದ್ದಾರಿ ಬಂದ್‌

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಲವೆಡೆ ಸಂಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದಾಗಿ ಈಗ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ- ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಚಂಡಿಕಾ ಹೊಳೆಯಲ್ಲಿ ಪ್ರವಾಹ ಬಂದಿದ್ದು,  ಕುಮಟಾ ತಾಲೂಕಿನ ಕತಗಾಲ ಸಮೀಪ ಅಳಕೋಡ ಬಳಿ  ರಸ್ತೆ ಮೇಲೆ ನಾಲ್ಕೈದು ಅಡಿಗಳಷ್ಟು ನೀರು ಹರಿಯುತ್ತಿರುವುದರಿಂದ ರಸ್ತೆ ಬಂದ್ ಮಾಡಲಾಗಿದೆ. ಹೀಗಾಗಿ ರಸ್ತೆ … Continued

ಪ್ರವಾಸಿಗರಿಗೆ ಮಾಹಿತಿ: ಭಾರೀ ಮಳೆ, ಯಲ್ಲಾಪುರ ಸಾತೊಡ್ಡಿ ಜಲಪಾತ ವೀಕ್ಷಣೆಗೆ ನಿಷೇಧ

ಯಲ್ಲಾಪುರ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಈಗ ಪ್ರವೇಶ ನಿಷೇಧಿಸಲಾಗಿದೆ. ಭಾರೀ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಪ್ರವಾಸಿಗರಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಜಲಪಾತ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಈ ಕುರಿತು ಪ್ರವೇಶ ನಿರ್ಬಂಧದ ನಾಮಫಲಕ ಹಾಕಲಾಗಿದೆ. ಸಹಜವಾಗಿಯೇ … Continued