ಭಾರೀ ಮಳೆಯಿಂದಾಗಿ ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ : ಸಂಕಷ್ಟದಲ್ಲಿ ಸಿಲುಕಿರುವ 80 ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ

ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ ಸುಮಾರು 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ. ತಮ್ಮನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಊರಿಗೆ ತೆರಳಲು ವ್ಯವಸ್ಥೆ ಮಾಡುವಂತೆ ವೀಡಿಯೊ ಮೂಲಕ ಪ್ರಧಾನಿ ಮೋದಿಗೆ ಅವರು ಮನವಿ ಮಾಡಿದ್ದಾರೆ. ಗದಗ ಜಿಲ್ಲೆಯ ವಿವಿಧ ಗ್ರಾಮಗಳು ಸೇರಿದಂತೆ ಕಾರ್ನಟಕದ … Continued

ಭಾರೀ ಮಳೆ..: ಜುಲೈ 6 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ವ್ಯಾಪಕ ಮಳೆಯಾಗುತ್ತಿದ್ದು ಇದಕ್ಕಾಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 … Continued

ಭಾರೀ ಮಳೆ: ಇಂದು ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ಕರಾವಳಿ ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ ಜುಲೈ 5 ರಂದು ರಜೆ ಘೋಷಿಸಲಾಗಿದೆ. ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ  ಜುಲೈ 5 ರಂದು ಬೆಳಿಗ್ಗೆ 8:30 ಗಂಟೆ ವರೆಗೆ ಭಾರಿ ಮಳೆ ಬೀಳುವ ಮಾಹಿತಿ … Continued

ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆ ಐದು ತಾಲೂಕುಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 4ರ ಮಂಗಳವಾರ ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆ ಸುರಿಯುತ್ತಿರುವುದರಿಂದ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. ಉಳಿದ ತಾಲೂಕಿನಲ್ಲಿ ಮಳೆ … Continued

ಭಾರೀ ಮಳೆಗೆ ಮನೆಗೋಡೆ ಕುಸಿದು 12 ಜನರ ಸಾವು

ಲಕ್ನೋ: ಭಾರೀ ಮಳೆಯಿಂದ ಹಾನಿಗೊಳಗಾದ ನಂತರ ಲಕ್ನೋದಲ್ಲಿ ಒಂಬತ್ತು ಮತ್ತು ಉನ್ನಾವೊದಲ್ಲಿ ಮೂವರು ಸೇರಿದಂತೆ ಉತ್ತರ ಪ್ರದೇಶದಲ್ಲಿ ಪ್ರತ್ಯೇಕ ಗೋಡೆ ಕುಸಿತದ ಘಟನೆಗಳಲ್ಲಿ 12 ಜನರು ಸಾವಿಗೀಡಾಗಿದ್ದಾರೆ. ಶುಕ್ರವಾರ ಲಕ್ನೋದ ದಿಲ್ಕುಶಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ … Continued

ಭಾರೀ ಮಳೆಗೆ ನದಿಗಳಾಗಿ ಮಾರ್ಪಟ್ಟ ಬೆಂಗಳೂರಿನ ರಸ್ತೆಗಳು | ವೀಕ್ಷಿಸಿ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಲವೆಡೆ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ಧರೆಗುರುಳಿದೆ.ರಸ್ತೆಗಳು ನದಿಯಾಗಿ ಮಾರ್ಪಟ್ಟಿವೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಲಾವೃತವಾಗಿರುವ ರಸ್ತೆಯಲ್ಲಿ ವಾಹನಗಳು ಸಿಲುಕಿಕೊಂಡಿದ್ದು, ಪಾದಚಾರಿಗಳು ನಡೆಯಲು ಪ್ರಯಾಸಪಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕೆಲವು ಪ್ರದೇಶಗಳಲ್ಲಿ ಸಿಕ್ಕಿಬಿದ್ದ ನಾಗರಿಕರನ್ನು ದೋಣಿಗಳ ಸಹಾಯದಿಂದ ಸ್ಥಳಾಂತರಿಸಲಾಯಿತು. ಇಕೋಸ್ಪೇಸ್ ಟೆಕ್ ಪಾರ್ಕ್‌ನಲ್ಲಿ ಜಲಾವೃತಗೊಂಡ ರಸ್ತೆ ಮತ್ತು ಅದರ ಮೂಲಕ … Continued

ಮಳೆಯಿಂದಾಗಿ ಎರಡು ತಿಂಗಳಲ್ಲಿ 64 ಜನರು ಸಾವು : ಸಚಿವ ಅಶೋಕ್ ಮಾಹಿತಿ

ಮಂಡ್ಯ: ರಾಜ್ಯದಲ್ಲಿ ಕಳೆದೆರಡು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 64 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 14 ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಂದಾಯ ಸಚಿವ ಆರ್‍. ಅಶೋಕ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮಳೆ ಅವಾಂತರ ಹಿನ್ನೆಲೆಯಲ್ಲಿ ಕೆ.ಆರ್‍. ಪೇಟೆಗೆ ಭೇಟಿ ನೀಡಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 1ರಿಂದ ಆಗಸ್ಟ್ 4ರ … Continued

ಭಟ್ಕಳ: ಭಾರೀ ಮಳೆಗೆ ಮುಟ್ಟಳ್ಳಿಯಲ್ಲಿ ಮನೆ ಮೇಲೆ ಕುಸಿದ ಗುಡ್ಡ, ನಾಲ್ವರು ಸಿಲುಕಿರುವ ಶಂಕೆ, ಹಲವು ಗ್ರಾಮಗಳ ಸಂಪರ್ಕ ಕಡಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದಿದೆ. ಈವರೆಗೆ ಮನೆಯವರ ಸ್ಥಿತಿಗತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ಮತ್ತು ತುರ್ತುಸೇವೆಗಳು, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿದೆ. ಆದರೆ ಮಳೆನೀರು … Continued

ಭಾರೀ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ

ಬೆಳಗಾವಿ :ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ವ್ಯಾಪಕ ಮಳೆಯಾಗುತ್ತಿರುವುದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ, ಸೇತುವೆಗಳ ಮೇಲೆ ನೀರು ಹರಿಯುತ್ತಿವೆ. ಹೀಗಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ … Continued

ಮಳೆ ಅಬ್ಬರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಭಾರಿ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ, ಅಂಗನವಾಡಿಗಳಿಗೆ ನಾಳೆ ಜುಲೈ 6ರಂದು ಸಹ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದಂತೆ ಇಂದು, ಮಂಗಳವಾರ ರಜೆ ಘೋಷಣೆ ಮಾಡಲಾಗಿತ್ತು. ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರೆಯುತ್ತಿರುವುದರಿಂದ ನಾಳೆ ಬುಧವಾರ ಸಹ ಅಂಗನವಾಡಿ, … Continued