ಭಟ್ಕಳ: ಭಾರೀ ಮಳೆಗೆ ಮುಟ್ಟಳ್ಳಿಯಲ್ಲಿ ಮನೆ ಮೇಲೆ ಕುಸಿದ ಗುಡ್ಡ, ನಾಲ್ವರು ಸಿಲುಕಿರುವ ಶಂಕೆ, ಹಲವು ಗ್ರಾಮಗಳ ಸಂಪರ್ಕ ಕಡಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದಿದೆ. ಈವರೆಗೆ ಮನೆಯವರ ಸ್ಥಿತಿಗತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ಮತ್ತು ತುರ್ತುಸೇವೆಗಳು, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿದೆ. ಆದರೆ ಮಳೆನೀರು … Continued

ಭಾರೀ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ

ಬೆಳಗಾವಿ :ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ವ್ಯಾಪಕ ಮಳೆಯಾಗುತ್ತಿರುವುದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ, ಸೇತುವೆಗಳ ಮೇಲೆ ನೀರು ಹರಿಯುತ್ತಿವೆ. ಹೀಗಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ … Continued

ಮಳೆ ಅಬ್ಬರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಭಾರಿ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ, ಅಂಗನವಾಡಿಗಳಿಗೆ ನಾಳೆ ಜುಲೈ 6ರಂದು ಸಹ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದಂತೆ ಇಂದು, ಮಂಗಳವಾರ ರಜೆ ಘೋಷಣೆ ಮಾಡಲಾಗಿತ್ತು. ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರೆಯುತ್ತಿರುವುದರಿಂದ ನಾಳೆ ಬುಧವಾರ ಸಹ ಅಂಗನವಾಡಿ, … Continued

ಭಾರೀ ಮಳೆ: ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ/ಉಡುಪಿ: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖಾ ಮುನ್ಸೂಚನೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು … Continued

ಭಾರಿ ಮಳೆ ಹಿನ್ನೆಲೆ : ನಾಳೆಯೂ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜುಲೈ 1ರ ಶುಕ್ರವಾರ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಶುಕ್ರವಾರದ ಬೆಳಗ್ಗೆ 8:30ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಆದರೆ ನಾಳೆಯೂ ಧಾರಾಕಾರ ಮಳೆ … Continued

ಧಾರಾಕಾರ ಮಳೆಗೆ ಇಬ್ಭಾಗವಾದ ರಸ್ತೆ: ತಲೆಕೆಳಗಾಗಿ ಸಿಲುಕಿಕೊಂಡ ಕಾರು..!

ಕೆಆರ್ ಪೇಟೆ: ರಾತ್ರಿ ಸುರಿದ ಭಾರೀ ಮಳೆಯಿಂದ ಪ್ರವಾಹಕ್ಕೆ ಕೆ. ಆರ್. ಪೇಟೆ ತಾಲೂಕು ಶೀಳನೆರೆ ಹೋಬಳಿ ಹುಣಸನಹಳ್ಳಿ ಹೆಚ್ ಬಳ್ಳೇಕೆರೆ ಗ್ರಾಮಕ್ಕೆ ಹಾದು ಹೋಗುವ ರಸ್ತೆ ಕೊಚ್ಚಿಕೊಂಡು ಹೋಗಿದೆ. ಇದೇ ಸಮಯದಲ್ಲಿ ಕಾರೊಂದು ಈ ರಸ್ತೆಯ ಕೊಚ್ಚಿಹೋದ ಭಾಗದಲ್ಲಿ ತಲೆಕೆಳಗಾಗಿ ಬಿದ್ದು ಸಿಲುಕಿಕೊಂಡಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ ಎಂದು ಆದೋಲನ.ಇನ್‌ ವರದಿ ಮಾಡಿದೆ. ಮಳೆಯ … Continued

ಕರ್ನಾಟಕದಲ್ಲಿ ಸೆಪ್ಟೆಂಬರ್ 15ರ ವರೆಗೂ ಮಳೆ ಜೋರು: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 15ರ ವರೆಗೂ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು,ಈ ಏಳು … Continued

ಮಳೆ ಅಬ್ಬರ: ಬಸವಸಾಗರದಿಂದ 3 ಲಕ್ಷ ಕ್ಯೂಸೆಕ್‌ ನೀರು ಬಿಡುವ ಸಾಧ್ಯತೆ..!

ಯಾದಗಿರಿ: ಕೃಷ್ಣಾ ನದಿಗೆ ಪ್ರಸಕ್ತ 2.30 ಲಕ್ಷ ಕ್ಯೂಸೆಕ ನೀರು ಬಿಡಲಾಗಿದ್ದು, ಇನ್ನೂ ಕೆಲವು ಗಂಟೆಗಳಲ್ಲಿ 3 ಲಕ್ಷ ಕ್ಯೂಸೆಕ್‌  ನೀರು ಬಿಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ತಿಳಿಸಿದ್ದಾರೆ. ಪ್ರಸ್ತುತ ಕೃಷ್ಣಾ ನದಿಯಿಂದ 2,30,680 ಕ್ಯೂಸೆಕ್‌ ಹಾಗೂ ಭೀಮಾ ನದಿಯಿಂದ 13,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದೆ. ಶುಕ್ರವಾರ ನಾರಾಯಣಪುರ … Continued

ನೀರಿನಲ್ಲಿ ಕೊಚ್ಚಿಹೋದ ದಂಪತಿ

ಹುಬ್ಬಳ್ಳಿ: ಕರಾವಳಿ ಕೆಲವು ಭಾಗಗಳು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಬಳ್ಳಾರಿ, ವಿಜಯನಗರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ದಂಪತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಗರಿಬೊಮ್ಮಹಳ್ಳಿ ತಾಲೂಕಿನ ತಂಬ್ರಹಳ್ಳಿ-ಮುತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55 ) ಹಾಗೂ ಸುಮಂಗಲಾ(48 ) ನೀರಿನಲ್ಲಿ ಕೊಚ್ಚಿಹೋದ ದಂಪತಿ. ಹೂವಿನಹಡಗಲಿ ತಾಲೂಕಿನ ಕಾಲ್ವಿ ಗ್ರಾಮದಲ್ಲಿ … Continued

ಹಿನ್ನೀರು ಪ್ರದೇಶದಲ್ಲಿ ಭಾರೀ ಮಳೆ : ಕದ್ರಾ ಅಣೆಕಟ್ಟಿನಿಂದ ಒಟ್ಟು  26,916 ಕ್ಯೂಸೆಕ್ ನೀರು ಹೊರಕ್ಕೆ

ಕಾರವಾರ: ತಾಲೂಕಿನ ಕದ್ರಾ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಅಣೆಕಟ್ಟಿನ ಗರಿಷ್ಠ ಮಟ್ಟವು ಶೀಘ್ರವೇ ತಲುಪುವು ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ಕ್ರಸ್ಟ್ ಗೇಟ್‍ಗಳನ್ನು ತೆರೆದು ನೀರು ಬಿಡುಗಡೆ ಮಾಡಲಾಗಿದೆ. ಕದ್ರಾ ಜಲಾಶಯದ ಗರಿಷ್ಠ ಮಟ್ಟವು 34.50 ಮೀ. ಗಳಾಗಿದ್ದು ಸದ್ಯ 31.42 ಮೀ. ತಲುಪಿದೆ. ಇನ್ನು ಒಳ ಹರಿವಿನ ಪ್ರಮಾಣ ಶನಿವಾರ … Continued