ಮುಂದುವರೆದ ಭಾರೀ ಮಳೆ: ಜುಲೈ 25ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು/ಉಡುಪಿ : ಮಂಗಳವಾರ (ಜುಲೈ 25) ಹವಾಮಾನ ಇಲಾಖೆಯ ಭಾರೀ ಮಳೆ ಮುನ್ಸೂಚನೆ ನೀಡಿ ರೆಡ್‌ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜು.25ರಂದು ರಜೆ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 25ರಂದು ರಜೆ ಘೋಷಣೆ … Continued

ಕಾರವಾರ : ಬೈತ್‌ಕೋಲದಲ್ಲಿ ಗುಡ್ಡ ಕುಸಿತ, ಮನೆಗಳಿಗೆ ನುಗ್ಗಿದ ನೀರು | ವೀಡಿಯೊ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆ ಪರಿಣಾಮ ಕಾರವಾರದ ಬೈತ್‌ಕೋಲದಲ್ಲಿ ಗುಡ್ಡ ಕುಸಿದು ಮನೆಗಳಿಗೆ ಮಳೆ (Rain) ನೀರು ನುಗ್ಗಿದೆ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಮಳೆ ನೀರು ಮನೆಗಳಿಗೆ ನುಗ್ಗಿದೆ. ಗುಡ್ಡ ಕೊರೆದು ನೌಕಾಪಡೆ ರಸ್ತೆ ನಿರ್ಮಿಸುತ್ತಿದ್ದುದರಿಂದ ಹೀಗಾಗಿದೆ ಎನ್ನಲಾಗಿದೆ. ಗುಡ್ಡ ಕುಸಿದು ಮಣ್ಣುಗಳು ರಸ್ತೆಮೇಲೆ ಬಿದ್ದಿದೆ. … Continued

ಮೈಸೂರು: ಮಹಾರಾಣಿ ಕಾಲೇಜಿನ ಕಟ್ಟಡದ ಒಂದು ಭಾಗ ಕುಸಿತ; ಸ್ವಲ್ಪದರಲ್ಲೇ ತಪ್ಪಿದ ಅನಾಹುತ | ವೀಕ್ಷಿಸಿ

ಮೈಸೂರು:ಮೈಸೂರು: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮೈಸೂರಿನ ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ರಸ್ತೆಯಲ್ಲಿರುವ ಶತಮಾನದಷ್ಟು ಹಳೆಯದಾದ ಮಹಾರಾಣಿ ವಿಜ್ಞಾನ ಕಾಲೇಜಿನ ಒಂದು ಭಾಗವು ಶುಕ್ರವಾರ(ಅಕ್ಟೋಬರ್ 21) ಬೆಳಿಗ್ಗೆ ಕುಸಿದಿದೆ. ಕಟ್ಟದ ಭಾಗ ಕುಸಿದ ಪರಿಣಾಮ ರಸಾಯನಶಾಸ್ತ್ರ, ಜೈವಿಕ ತಂತ್ರಜ್ಞಾನ ಮತ್ತು ಸಸ್ಯಶಾಸ್ತ್ರ ವಿಭಾಗಗಳ ಮೂರು ಪ್ರಯೋಗಾಲಯಗಳು ಅವಶೇಷಗಳಾದವು. ಮಹಾರಾಣಿ ಕಲಾ ಕಾಲೇಜಿನ ಛಾವಣಿ ಹಾಗೂ ಮೊದಲ … Continued