ಹೇಮಂತ್ ಸೊರೇನ್‌ ವಯಸ್ಸೆಷ್ಟು..? 5 ವರ್ಷದಲ್ಲಿ ಜಾರ್ಖಂಡ್ ಸಿಎಂಗೆ 7 ವರ್ಷ ವಯಸ್ಸಾಗಿದ್ದು ಹೇಗೆ..? ಬಿಜೆಪಿ ಪ್ರಶ್ನೆ

ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಹೇಮಂತ ಸೊರೇನ್ ಬರ್ಹೈತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಆದಾಗ್ಯೂ, ಅವರ ಅಫಿಡವಿಟ್, ಈಗ ಅವರ ವಯಸ್ಸಿನ ಬಗ್ಗೆ ವಿವಾದಕ್ಕೆ ಕಾರಣವಾಗಿದೆ. ಹೇಮಂತ ಸೋರೆನ್ ಅವರ 2019 ರ ನಾಮಪತ್ರದಲ್ಲಿ ಅವರಿಗೆ 42 ವರ್ಷ ಎಂದು ಹೇಳಿತ್ತು, ಆದರೆ ಈ ವರ್ಷದ ಅಫಿಡವಿಟ್ ಅವರ ವಯಸ್ಸು 49 ಎಂದು ಹೇಳಿದೆ. ಈ … Continued

ಜೆಎಂಎಂ ಪಕ್ಷಕ್ಕೆ ಮಾಜಿ ಸಿಎಂ ಚಂಪೈ ಸೊರೇನ್ ರಾಜೀನಾಮೆ

ನವದೆಹಲಿ: ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬುಧವಾರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜಾರ್ಖಂಡದ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು, ಹಿಂದುಳಿದವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ. ಪಕ್ಷದ ಈಗಿನ ಕಾರ್ಯವೈಖರಿ ಮತ್ತು ನೀತಿಗಳಿಂದ ನೊಂದಿರುವ ಕಾರಣ ನಾನು ಅಂತಹ ಕ್ರಮಕ್ಕೆ ಮುಂದಾಗಬೇಕಾಯಿತು … Continued

ಮೂರು ಆಯ್ಕೆಗಳಿವೆ…: ಬಿಜೆಪಿ ಸೇರ್ಪಡೆಯಾಗುವ ವದಂತಿ ಮಧ್ಯೆ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್‌ ಮಾರ್ಮಿಕ ಹೇಳಿಕೆ

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್‌ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳ ನಡುವೆ ತಾನು ಸಂಪೂರ್ಣ ಜೀವನವನ್ನು ಸಮರ್ಪಿಸಿಕೊಂಡ ಪಕ್ಷದಲ್ಲಿ ನನಗೆ ಅಸ್ತಿತ್ವವಿಲ್ಲ ಎಂಬ ಭಾವನೆ ಬರುವಂತಾಗಿದೆ ಹಾಗೂ ತನಗೆ ಪರ್ಯಾಯ ಮಾರ್ಗಹುಡುಕುವ ಅನಿವಾರ್ಯತೆ ಸೃಷ್ಟಿಸಲಾಗಿದೆ ಎಂದು ಹೇಳಿದ್ದಾರೆ. ಜಾರ್ಖಂಡ್ ವಿಧಾನಸಭೆ ಚುನಾವಣೆಗೂ ಮುನ್ನ … Continued

ಮತ್ತೆ ಜಾರ್ಖಂಡ್ ಸಿಎಂ ಆಗಿ ಹೇಮಂತ ಸೊರೇನ್‌ ಪ್ರಮಾಣವಚನ

ರಾಂಚಿ: ಐದು ತಿಂಗಳ ನಂತರ ಮತ್ತೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ (JMM) ಕಾರ್ಯಕಾರಿ ಅಧ್ಯಕ್ಷ ಹೇಮಂತ ಸೊರೇನ್ ಅವರು ಗುರುವಾರ ಸಂಜೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಮಾಣ ವಚನ ಬೋಧಿಸಿದರು. ಬಹುಕೋಟಿ ಮೌಲ್ಯದ ಭೂ ಹಗರಣ ಆರೋಪ ಹೊತ್ತಿದ್ದ ಕಾರಣ ಜನವರಿಯಲ್ಲಿ ಜಾರಿ ನಿರ್ದೇಶನಾಲಯ ಬಂಧಿಸುವ … Continued

ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ; ಹೇಮಂತ ಸೊರೇನ್ ಮತ್ತೆ ಸಿಎಂ..!

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ಇಂದು, ಬುಧವಾರ ರಾಜೀನಾಮೆ ಸಲ್ಲಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಲಿದ್ದಾರೆ. ರಾಜ್ಯಪಾಲರಿಗೆ ಚಂಪೈ ಸೊರೇನ್ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಹೇಮಂತ್ ಸೊರೇನ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಇದೀಗ ಹೇಮಂತ್ ಸೊರೇನ್ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ ಮಾಜಿ ಸಿಎಂ ಹೇಮಂತ ಸೊರೇನ್‌ ಗೆ ಜಾಮೀನು

ರಾಂಚಿ: ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರಿಗೆ ಜಾಮೀನು ನೀಡಿದೆ. ಸೊರೇನ್‌ ವಿರುದ್ಧ ಆಪಾದಿಸಲಾದ ಭೂ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಮೂರ್ತಿ ರೊಂಗೋನ್ ಮುಖೋಪಾಧ್ಯಾಯ ಅವರು ಶುಕ್ರವಾರ ಸೊರೇನ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಈ ಹಿಂದೆ ನ್ಯಾಯಮೂರ್ತಿ ಮುಖೋಪಾಧ್ಯಾಯ ಅವರು ಸೊರೇನ್ ತನ್ನ ಚಿಕ್ಕಪ್ಪನ … Continued

ಮಾಜಿ ಸಿಎಂ ಹೇಮಂತ ಸೊರೇನ್‌ ಗೆ ಸೇರಿದ 31 ಕೋಟಿ ರೂ. ಮೌಲ್ಯದ ರಾಂಚಿ ಭೂಮಿ ಜಪ್ತಿ ಮಾಡಿದ ಇ.ಡಿ.

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಅವರ ಸಹಚರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ರಾಂಚಿಯಲ್ಲಿ 8.86 ಎಕರೆ ಭೂಮಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ ಎಂದು ಫೆಡರಲ್ ಏಜೆನ್ಸಿ ಗುರುವಾರ ತಿಳಿಸಿದೆ. ನಗರ ವಸತಿ ಆಸ್ತಿ ದರದ ಪ್ರಕಾರ ಇದರ ಮೌಲ್ಯ 31,07,02,480 ರೂ. ಎಂದು ಹೇಳಲಾಗಿದೆ. 48 … Continued

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ: ಈವರೆಗೆ ಜೈಲಿಗೆ ಹೋಗಿದ್ದ ಮಾಜಿ ಸಿಎಂಗಳ ಪಟ್ಟಿ ಇಲ್ಲಿದೆ…

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ವು ಗುರುವಾರ ರಾತ್ರಿ ಬಂಧಿಸಿದೆ. 2024 ರ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಅವರ ಬಂಧನವನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್ ಸೇರಿದಂತೆ ವಿರೋಧ ಪಕ್ಷಗಳು ಖಂಡಿಸಿವೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕಾನೂನು ಜಾರಿ ಸಂಸ್ಥೆಯಿಂದ … Continued

ಜೆಎಂಎಂ ತೊರೆದು ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಿಎಂ ಹೇಮಂತ್ ಸೊರೇನ್ ಅತ್ತಿಗೆ ಸೀತಾ ಸೊರೇನ್

ರಾಂಚಿ : ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್(Hemant Soren) ಅತ್ತಿಗೆ ಸೀತಾ ಸೊರೇನ್ (Sita Soren)​ ಅವರು ಜಾರ್ಖಂಡ್​ ಮುಕ್ತಿ ಮೋರ್ಚಾ(ಜೆಎಂಎಂ)ಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರು ಜಾಮಾ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ತಮ್ಮ ಪತಿ ದುರ್ಗಾ ಸೊರೇನ್ ಅವರ ನಿಧನದ ನಂತರ ಪಕ್ಷವು ತನಗೆ ಮತ್ತು ತಮ್ಮ … Continued

‘ಹೈಕೋರ್ಟ್‌ಗೆ ಹೋಗಿ’: ಬಂಧನದ ವಿರುದ್ಧ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಭೂ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನಾವು ಮಧ್ಯಪ್ರವೇಶಿಸುವುದಿಲ್ಲ, ಹೈಕೋರ್ಟ್‌ಗೆ ಹೋಗಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ, ಎಂ.ಎಂ. ಸುಂದರೇಶ ಮತ್ತು ಬೇಲಾ ಎಂ ತ್ರಿವೇದಿ … Continued