ಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ : ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜಶಾಲಾ–ಕಮಾಲ್ ಮೌಲಾ ಮಸೀದಿ ಸಂಕೀರ್ಣವನ್ನು ಹಿಂದೂ ದೇವಾಲಯವೆಂದು ಘೋಷಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಮೇ 15ರ ತೀರ್ಪನ್ನು ಪ್ರಶ್ನಿಸಿ ಮುಸ್ಲಿಮ್‌ ಪಕ್ಷದವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಸೀಮಿತ ಮಧ್ಯಂತರ ಪರಿಹಾರ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನ … Continued

ದೈವಕ್ಕೆ ಅಪಮಾನ ; ಮೈಸೂರು ಚಾಮುಂಡೇಶ್ವರಿ ದೇವಿಯ ಮುಂದೆ ಕ್ಷಮೆಯಾಚಿಸಿದ ನಟ ರಣವೀರ ಸಿಂಗ್

ಮೈಸೂರು:  ಬಾಲಿವುಡ್‌ ನಟ ರಣವೀರ ಸಿಂಗ್ ಅವರು ಮಂಗಳವಾರ (ಮೇ 26) ಬೆಳಿಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ’ ಚಿತ್ರದ ದೈವದ ದೃಶ್ಯವನ್ನು ಅಣಕಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರ್ದೇಶನದ ಮೇರೆಗೆ ಅವರುಬಚಾಮುಂಡೇಶ್ವರಿ ದೇವಿಯ ಎದುರು ಕ್ಷಮೆಯಾಚಿಸಿದ್ದಾರೆ. 2025ರ ನವೆಂಬರ್ 30 ರಂದು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ … Continued

ಗೃಹಲಕ್ಷ್ಮಿ ಯೋಜನೆ ಹಣ ಬಾಕಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಿಂಬಾಕಿ ಹಣ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ … Continued

ನಕಲಿ ಕಾನೂನು ಪದವಿ ಸರ್ಟಿಫಿಕೆಟ್‌ ಬಳಸಿ ಪಾಕಿಸ್ತಾನ ಹೈಕೋರ್ಟ್‌ನಲ್ಲಿ 5 ವರ್ಷ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ ವ್ಯಕ್ತಿ

ಇಸ್ಲಾಮಾಬಾದ್: ಕಾನೂನು ಪದವಿಯೇ ಇಲ್ಲದ ವ್ಯಕ್ತಿಯೊಬ್ಬ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಐದು ವರ್ಷಗಳ ಕಾಲ ತೀರ್ಪುಗಳನ್ನು ನೀಡಿದ ಆಘಾತಕಾರಿ ಘಟನೆ ಪಾಕಿಸ್ತಾನದಲ್ಲಿ ಬೆಳಕಿಗೆ ಬಂದಿದೆ ಎಂದು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ,  ಇಸ್ಲಾಮಾಬಾದ್ ಹೈಕೋರ್ಟ್‌ನ (IHC) ನ್ಯಾಯಮೂರ್ತಿಯಾಗಿದ್ದ ತಾರಿಕ್ ಮಹಮೂದ್ ಜಹಾಂಗೀರಿ ಅವರ ಕಾನೂನು ಪದವಿ ನಕಲಿ ಎಂದು ಸಾಬೀತಾಗಿದ್ದು, ಅವರನ್ನು ಹುದ್ದೆಯಿಂದ ವಜಾಗೊಳಿಸಿ ನ್ಯಾಯಾಲಯ ಆದೇಶಿಸಿದೆ. … Continued

ಬೆಂಗಳೂರಿನಲ್ಲಿರು ಅಕ್ರಮ ವಲಸಿಗರ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ಸಲ್ಲಿಸಿ ಎಂದ ಹೈಕೋರ್ಟ್‌

ಬೆಂಗಳೂರು : ಅಕ್ರಮ ವಲಸಿಗರಿಂದ ದೇಶದ ಭದ್ರತೆಗೆ ಅಪಾಯವಿದೆ ಎಂದು ಮೌಖಿಕವಾಗಿ ಬುಧವಾರ ಕಳವಳ ವ್ಯಕ್ತಪಡಿಸಿರುವ  ಹೈಕೋರ್ಟ್‌, ಅಕ್ರಮ ವಲಸಿಗರ ಸಂಬಂಧ ಯಾವ ಕ್ರಮಕೈಗೊಳ್ಳಲಾಗಿದೆ ಎಂಬುದರ ಕುರಿತು ಮುಂದಿನ ವಿಚಾರಣೆಯ ವೇಳೆಗೆ ರಾಜ್ಯ ಸರ್ಕಾರವು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ. ಬಾಂಗ್ಲಾ ಅಕ್ರಮ ವಲಸಿಗರಿಗೆ ಸಂಬಂಧಿಸಿದಂತೆ ಹೋರಾಟ ಮಾಡಿರುವುದಕ್ಕೆ ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎರಡು … Continued

ಹೆಂಡತಿಗೆ ಬೀದಿ ನಾಯಿಗಳ ಮೇಲೆ ಅತಿಯಾದ ವ್ಯಾಮೋಹ: ವಿಚ್ಛೇದನ ಕೋರಿ ಹೈಕೋರ್ಟ್ ಮೊರೆ ಹೋದ ಪತಿ….

ಅಹಮದಾಬಾದ್: ಗುಜರಾತ್ ಹೈಕೋರ್ಟ್ ಡಿಸೆಂಬರ್ 1, 2025 ರಂದು ಅಸಾಮಾನ್ಯ ವಿಚ್ಛೇದನ ಪ್ರಕರಣದ ವಿಚಾರಣೆ ನಡೆಸಲಿದೆ. ತನ್ನ ಪತ್ನಿಯು ಬೀದಿ ನಾಯಿಗಳನ್ನು ಅಪಾರ್ಟ್‌ಮೆಂಟ್‌ಗೆ ತಂದು, ಅವುಗಳೊಂದಿಗೆ ಅದೇ ಹಾಸಿಗೆಯಲ್ಲಿ ಮಲಗುವಂತೆ ಒತ್ತಾಯಿಸುತ್ತಾರೆ ಎಂದು ಆರೋಪಿಸಿ ಪತಿಯು ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. 2006 ರಲ್ಲಿ ವಿವಾಹವಾದ ಈ ಕ್ರೈಸ್ತ ದಂಪತಿ ಒಂದು ದಶಕದ ಹಿಂದೆ … Continued

ಶಾಸಕ ನಂಜೇಗೌಡ ಆಯ್ಕೆ ಅಸಿಂಧು ; ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ : ಮರು ಮತ ಎಣಿಕೆಗೆ ಆದೇಶ

ನವದೆಹಲಿ: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ಕೆ ವೈ ನಂಜೇಗೌಡ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹಾಗೂ ಮರು ಮತಎಣಿಕೆ ನಡೆಸುವಂತೆ ಸೂಚಿಸಿದೆ. ಆದರೆ ಮರು ಮತ ಎಣಿಕೆಯ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟಿಸದೆ ಮುಚ್ಚಿದ ಲಕೋಟೆಯಲ್ಲಿ … Continued

ಗೋಕರ್ಣದ ಬೆಟ್ಟದ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾದ ಮಹಿಳೆ-ಮಕ್ಕಳನ್ನ ವಾಪಸ್ ರಷ್ಯಾಕ್ಕೆ ಕಳುಹಿಸಲು ಹೈಕೋರ್ಟ್ ಗ್ರೀನ್‌ ಸಿಗ್ನಲ್

ಬೆಂಗಳೂರು: ಜುಲೈನಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕಾಡಿನ ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳಿಗೆ ಅವರ ದೇಶ ರಷ್ಯಾಕ್ಕೆ ಮರಳಲು ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ. ನೀನಾ ಕುಟಿನಾ ಅವರ ಮಾಜಿ ಪತಿ ಮತ್ತು ಮಕ್ಕಳ ತಂದೆ ಇಸ್ರೇಲಿ ಪ್ರಜೆ ಡ್ರೋರ್ ಶ್ಲೋಮೋ ಗೋಲ್ಡ್‌ಸ್ಟೈನ್ … Continued

ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ಮುಷ್ಕರ ಮುಂದೂಡಿಕೆ; ರಸ್ತೆಗೆ ಇಳಿದ ಬಸ್‌ ಗಳು

ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ಸಾರಿಗೆ ನಿಗಮಗಳ ನೌಕರರ ಸಂಘಗಳ ಒಕ್ಕೂಟವು ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿದೆ. ಇಂದಿನಿಂದ (ಆಗಸ್ಟ್‌ ೫ರಿಂದ) ಕರೆಕೊಟ್ಟಿದ್ದ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ. ತಕ್ಷಣದಿಂದ ಬಸ್‌ಗಳ ಸಂಚಾರ ಆರಂಭಿಸಲು ಸಂಘಟನೆಗಳ ಮುಖಂಡರು ಸೂಚನೆ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿದ್ದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ … Continued

ಭಾರತ ಸರ್ಕಾರ ವಿರುದ್ಧ ಹೈಕೋರ್ಟ್​​ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್‌

ಬೆಂಗಳೂರು : ಎಲಾನ್ ಮಸ್ಕ್ ಒಡೆತನದ ಎಕ್ಸ್‌ ವೆಬ್‌ಸೈಟ್‌ನಲ್ಲಿನ ಟ್ವೀಟ್ ಮತ್ತು ಇತರ ವಿಷಯವನ್ನು ತೆಗೆದುಹಾಕುವಂತೆ ಸೂಚಿಸಲು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆ (ಐಟಿ ಆಕ್ಟ್) ಸೆಕ್ಷನ್ 79(3)(ಬಿ)ಯನ್ನು ಬಳಸುವ ವಿಧಾನವನ್ನು ಪ್ರಶ್ನಿಸಿ ಎಕ್ಸ್, ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಭಾರತದಲ್ಲಿನ ಸರ್ಕಾರಿ ಅಧಿಕಾರಿಗಳು ಸರಿಯಾದ ಕಾನೂನು ಕಾರ್ಯವಿಧಾನಗಳನ್ನು ಬೈಪಾಸ್ … Continued