ಹೈಕೋರ್ಟ್‌ನಲ್ಲಿ ಹಿಜಾಬ್ ಪ್ರಕರಣ: ಗೂಂಗಟ್, ಟರ್ಬನ್‌, ಬಳೆ, ಶಿಲುಬೆಗೆ ನಿಷೇಧವಿಲ್ಲ, ಹಾಗಾದ್ರೆ ಹಿಜಾಬ್‌ ಏಕೆ ಧರಿಸಬಾರದು-ಪ್ರೊ. ರವಿವರ್ಮಕುಮಾರ್‌ ಪ್ರಶ್ನೆ

ಬೆಂಗಳೂರು: ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ಜೆ. ಎಂ. ಖಾಜಿ ಅವರ ಪೂರ್ಣ ಪೀಠವು ಬುಧವಾರ ಮುಂದುವರೆಸಿತು. … Continued