ನಾಳೆಯೂ ಹಿಜಾಬ್‌ಗಾಗಿ ಹೈಡ್ರಾಮಾ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲು ಮಾಡ್ತೇವೆ: ಶಾಸಕ ರಘುಪತಿ ಭಟ್ ಎಚ್ಚರಿಕೆ

ಉಡುಪಿ: ಹೈಕೋರ್ಟ್‌ ಆದೇಶ ಮೀರಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕ ರಘುಪತಿ ಭಟ್ ಎಚ್ಚರಿಕೆ ನೀಡಿದ್ದಾರೆ. ಉಡುಪಿ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಹೋರಾಟಗಾರ್ತಿಯರಿಬ್ಬರು ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್‌ ಕುರಿತು ಹೈಡ್ರಾಮಾ ಸೃಷ್ಟಿಸಿರುವುದದರ ಕುರಿತು … Continued

ಪರೀಕ್ಷೆ ಬರೆದವರ ಬಗ್ಗೆ ಮಾತ್ರ ಯೋಚಿಸೋಣ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುವುದಾಗಿ ಪಟ್ಟು ಹಿಡಿದು ಅವಕಾಶ ನಿರಾಕರಣೆ ನಂತರ ದ್ವಿತೀಯ ಪಿಯು ಪರೀಕ್ಷೆ ಬರೆಯದೇ ವಾಪಸ್‌ ವಿದ್ಯಾರ್ಥಿನಿಯರಿಬ್ಬರ ವರ್ತನೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಬೇಸರ ವ್ಯಕ್ತಪಡಿಸಿದ್ದಾರೆ ಹಾಗೂ ನಾವು ಪರೀಕ್ಷೆ ಬರೆದವರ ಬಗ್ಗೆಯಷ್ಟೇ ಯೋಚಿಸಬೇಕು. ಬರೆಯದವರ ಬಗ್ಗೆ ಯೋಚಿಸುವುದನ್ನು ನಿಲ್ಲಿಸುವುದೇ ಒಳ್ಳೆಯದು ಎಂದು ಸಹ ಹೇಳಿದ್ದಾರೆ. ಕೆಲಮಾಧ್ಯಮದವರ ಜೊತೆ ಮಾತನಾಡಿದ … Continued

ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಲ್ವಾ, ಮುಸ್ಲಿಂ ಹೆಣ್ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ, ನಿಮಗೇನು ತೊಂದರೆ: ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ‘ಕೆಲವೆಡೆ ಹಿಂದೂ ಹೆಣ್ಣು ಮಕ್ಕಳು ಹಾಗೂ ಜೈನ ಹೆಣ್ಣುಮಕ್ಕಳು ತಲೆ ಮೇಲೆ ಸೆರಗು ಹಾಕುವುದಿಲ್ಲವಾ? ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕುವುದಿಲ್ಲವೇ? ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ ಬಿಡಿ,. ಅದರಿಂದ ನಿಮಗೇನು ತೊಂದರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ … Continued

ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆಗೆ ಅವಕಾಶವಿಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಿದ್ದರೆ ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಅನಗತ್ಯ ವಿವಾದ ಸೃಷ್ಟಿಸುವವರ ವಿರುದ್ಧ … Continued

ಸರ್ಕಾರ ಕೋರ್ಟ್ ಮೇಲೆ ಒತ್ತಡ ಹಾಕಿದೆ, ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗಲ್ಲ; ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರು

ಉಡುಪಿ: ನಾವು ನಮ್ಮ ಕುರಾನ್ ಅನುಸರಣೆ ಮಾಡುತ್ತೇವೆ. ನಾವು ಸರ್ಕಾರದ ಆದೇಶ ಅನುಸರಿಸಬೇಕಾಗಿಲ್ಲ. ನಮಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ತರಗತಿಗಳಲ್ಲಿ ಹಿಜಾಬ್ ನಿರ್ಬಂಧದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿಯ ಐವರು ವಿದ್ಯಾರ್ಥಿನಿಯರು ಹೇಳಿದ್ದಾರೆ. ಹೈಕೋರ್ಟ್‌ ತೀರ್ಪಿನ ನಂತರ ಇಂದು, ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವರು ವಿದ್ಯಾರ್ಥಿನಿಯರು ಹೈಕೋರ್ಟ್‌ ತೀರ್ಪಿನ ಕುರಿತು … Continued

ಹಿಜಾಬ್ – ಕೇಸರಿ ಶಾಲು ವಿವಾದ: ಪರೀಕ್ಷೆ ತಪ್ಪಿಸಿಕೊಂಡರೆ ಬೇರೆ ಅವಕಾಶವಿಲ್ಲ ಎಂದ ಶಿಕ್ಷಣ ಸಚಿವರು

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಕಾರಣ ಮುಂದಿರಿಸಿ ಪರೀಕ್ಷೆ ತಪ್ಪಿಸಿಕೊಂಡರೆ, ಅವರಿಗೆ ಬೇರೆ ಅವಕಾಶ ನೀಡುವುದಿಲ್ಲ. ಹಿಂದೂ ಮಕ್ಕಳಿಗೂಇದು ಅನ್ವಯಿಸುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪರೀಕ್ಷೆ ಬೇಕೆಂದರೆ ಹಿಜಾಬ್, ಕೇಸರಿ ಶಾಲು ತೆಗೆದು ಪರೀಕ್ಷೆ ಬರೆಯಬೇಕು. ಈ ಕಾರಣದಿಂದ ಪರೀಕ್ಷೆ ತಪ್ಪಿಸಿಕೊಂಡರೆ ಅವರಿಗೆ … Continued

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್​​ಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ ಹಿಜಾಬ್‌, ಕೇಸರಿ ಶಾಲು, ಸ್ಕಾರ್ಫ್​​​ ಧರಿಸದಂತೆ ಆದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ. ಹೈಕೋರ್ಟ್‌ ಮಧ್ಯಂತರ ಆದೇಶದ ನಂತರ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶಿಸಿದೆ. ‌ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ … Continued

ಹಿಜಾಬ್, ಬುರ್ಖಾ ದಬ್ಬಾಳಿಕೆಯ ಸಂಕೇತ: ತಸ್ಲೀಮಾ ನಸ್ರೀನ್

ನವದೆಹಲಿ: ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ವಿರೋಧಿಸಿದ್ದಾರೆ. ಹಿಜಾಬ್, ಬುರ್ಖಾ ಅಥವಾ ನಿಖಾಬ್ ದಬ್ಬಾಳಿಕೆಯ ಸಂಕೇತವಾಗಿದೆ ಎಂದು ತಸ್ಲೀಮಾ ನಸ್ರೀನ್ ಅವರು ಇಂಡಿಯಾ ಟುಡೇ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಹಿಜಾಬ್ ಕುರಿತ ವಿವಾದವು ಕರ್ನಾಟಕದಾದ್ಯಂತ ಹರಡಿತು ಮತ್ತು ಭಾರತದ ಇತರ ರಾಜ್ಯಗಳಿಗೆ ಹರಡಿದ ಸಂದರ್ಭದಲ್ಲಿ ತಸ್ಲೀಮಾ ನಸ್ರೀನ್ ಅವರ … Continued

ಶಿಕ್ಷಕರಿಗೆ ಹಿಜಾಬ್ ಧರಿಸಲು ಅಡ್ಡಿ ಆರೋಪ: ಪರಿಶೀಲನೆ ನಂತರ ಆದೇಶ ಮಾಡ್ತೇನೆ ಎಂದ ಗೃಹ ಸಚಿವರು

ಬೆಂಗಳೂರು: ಹಿಜಾಬ್ ಧರಿಸಿದ ಕಾರಣಕ್ಕಾಗಿ ಶಿಕ್ಷಕರನ್ನು ತರಗತಿ ಒಳಗಡೆ ಬಿಡದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಸುದ್ದಿ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಒಂದು ಆದೇಶ ಮಾಡುತ್ತೇವೆ ಎಂದು … Continued

ಹಿಜಾಬ್ ಕುರಿತು ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಲಾಗಿದೆ: ಜಮೀರ್ ಅಹಮದ್ ಸ್ಪಷ್ಟನೆ

ಹುಬ್ಬಳ್ಳಿ: ಸೌಂದರ್ಯ ಕಾಣದಿರಲು ಹಾಗೂ ತಮ್ಮ ರಕ್ಷಣೆಗಾಗಿ ಹಿಜಾಬ್‍ ಧರಿಸುತ್ತಾರೆ ಎಂದಿದ್ದೆ. ಈ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಗೊಂದಲ ಸೃಷ್ಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಜಮೀರ ಅಹ್ಮದ್ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್ ಹಾಕದಿದ್ದರೆ ಅತ್ಯಾಚಾರ ಆಗುತ್ತದೆಯೆಂದು ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಹೇಳಿಕೆ ತಪ್ಪಾಗಿ ಅರ್ಥಯಸಿ ಗೊಂದಲ … Continued