ಹಿಮಾಚಲ ಪ್ರದೇಶದಲ್ಲಿ ಭೂಕುಸಿತ : 6 ಮಂದಿ ಸಾವು, ಐವರಿಗೆ ಗಂಭೀರ ಗಾಯ

ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಎದುರಿನ ಪಿಡಬ್ಲ್ಯೂಡಿ ರಸ್ತೆಯ ಬಳಿ ಭಾನುವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಆರು ಜನ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಇದ್ದಾರೆ. ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ದೊಡ್ಡ ಮರವೊಂದು ಉರುಳಿ ಬಿದ್ದ ಪರಿಣಾಮ ರಸ್ತೆಯ ಅಂಚಿನಲ್ಲಿ ಕುಳಿತಿದ್ದ ಜನರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು … Continued

ವೀಡಿಯೊ..| ಭಾರಿ ಹಿಮ ಬಿದ್ದ ರಸ್ತೆಯಲ್ಲಿ ಟ್ರಕ್ ಸ್ಕಿಡ್ ಆಗಿ ಆಳದ ಪ್ರಪಾತಕ್ಕೆ ಬೀಳುವ ಮೊದಲು ಹಾರಿ ತಪ್ಪಿಸಿಕೊಂಡ ಚಾಲಕ…!

ನವದೆಹಲಿ: ಹಿಮಾಚಲ ಪ್ರದೇಶವು ಈ ತಿಂಗಳು ಭಾರೀ ಹಿಮಪಾತಕ್ಕೆ ಸಾಕ್ಷಿಯಾಗಿದೆ. ಅದು ಈ ರಾಜ್ಯವನ್ನು ಚಳಿಗಾಲದ ಅದ್ಭುತ ಭೂಮಿಯಾಗಿ ಪರಿವರ್ತಿಸಿದೆ. ಆದರೆ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಅನೇಕ ತೊಂದರೆಗಳನ್ನು ತಂದೊಡ್ಡಿದೆ. ಅವರ ವಾಹನಗಳು ನಿಯಂತ್ರಣ ತಪ್ಪಿ ಸ್ಕಿಡ್ ಆಗುತ್ತಿದ್ದು, ಹಿಮಾವೃತ ಪರ್ವತ ರಸ್ತೆಗಳಲ್ಲಿ ಸಿಲುಕಿ ಕಂದಕಕ್ಕೆ ಬೀಳುತ್ತಿವೆ. ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಹಿಮಭರಿತ ರಸ್ತೆಯಲ್ಲಿ ಸಣ್ಣ … Continued

ಕಾಂಗ್ರೆಸ್ಸಿನಿಂದ ಅಚ್ಚರಿಯ ನಡೆ ; ಪಕ್ಷದ ಹಿಮಾಚಲ ಪ್ರದೇಶ ರಾಜ್ಯ ಘಟಕ ವಿಸರ್ಜಿಸಿದ ಹೈಕಮಾಂಡ್‌…!

ನವದೆಹಲಿ: ಹಿಮಾಚಲ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕವನ್ನು ವಿಸರ್ಜಿಸಲಾಗಿದೆ. ಕಾಂಗ್ರೆಸ್‌ ತನ್ನದೇ ಪಕ್ಷದ ಮುಖ್ಯಮಂತ್ರಿಯನ್ನು ಹೊಂದಿರುವ ಮೂರು ರಾಜ್ಯಗಳಲ್ಲಿ ಹಿಮಾಚಲ ಪ್ರದೇಶವೂ ಒಂದಾಗಿದೆ. ಬುಧವಾರ ಹೇಳಿಕೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು, ‘ಹಿಮಾಚಲದ ಸಂಪೂರ್ಣ ರಾಜ್ಯ ಘಟಕ, ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರು ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಂಪೂರ್ಣ ವಿಸರ್ಜಿಸುವ … Continued

ಹಿಮಾಚಲ ಪ್ರದೇಶ : ಕಾಂಗ್ರೆಸ್ಸಿನ 6 ಅನರ್ಹ ಶಾಸಕರು, 3 ಪಕ್ಷೇತರ ಶಾಸಕರು ಬಿಜೆಪಿಗೆ ಸೇರ್ಪಡೆ

ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಧಿಕ್ಕರಿಸಿ ಅಡ್ಡ ಮತದಾನ ಮಾಡಿದ ಹಿಮಾಚಲ ಪ್ರದೇಶ ವಿಧಾನಸಭೆಯ ಆರು ಮಾಜಿ ಕಾಂಗ್ರೆಸ್ ಶಾಸಕರು ಇಂದು, ಶನಿವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಅಲ್ಲದೆ, ಮೂವರು ಸ್ವತಂತ್ರ ಶಾಸಕರು ಸಹ ಬಿಜೆಪಿ ಸೇರಿದ್ದಾರೆ. ಕೇಂದ್ರ ಸಚಿವ ಅನುರಾಗ ಠಾಕೂರ್, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜೈರಾಮ ಠಾಕೂರ್ … Continued

ಹಿಮಾಚಲ: ಪತನದ ಭೀತಿಯಲ್ಲಿ ಕಾಂಗ್ರೆಸ್​ ಸರ್ಕಾರ…! ಬಹುಮತವಿದ್ರೂ ರಾಜ್ಯಸಭೆ ಚುನಾವಣೆಯಲ್ಲಿ ಸೋಲು, ಪ್ರಬಲ ಸಚಿವ ರಾಜೀನಾಮೆ, 26 ಶಾಸಕರು ರೆಬೆಲ್..!!

ನವದೆಹಲಿ: ಹಿಮಾಚಲ ಪ್ರದೇಶದ ರಾಜ್ಯಸಭೆ ಚುನಾವಣೆಯಲ್ಲಿ ಅಚ್ಚರಿ ಎಂಬಂತೆ ಬಿಜೆಪಿ ಜಯಗಳಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್‌ ಶಾಸಕರಿಂದ ದೊಡ್ಡ ಪ್ರಮಾಣದಲ್ಲಿ ಅಡ್ಡಮತದಾನ ನಡೆದಿದ್ದು, ಇದು ಹಿಮಾಚಲದ ಕಾಂಗ್ರೆಸ್ ಸರ್ಕಾರವನ್ನೇ ಉರುಳಿಸುವ ಸುಳಿವನ್ನು ಕೂಡ ನೀಡಿದೆ. ಆಡಳಿತಾರೂಢ ಕಾಂಗ್ರೆಸ್​ ಶಾಸರು ಅಡ್ಡಮತದಾನ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸುಖ್ವಿಂದರ್​ ಸಿಂಗ್ ಸುಖು ಶಾಸಕರ ವಿಶ್ವಾಸ … Continued

ರಾಜ್ಯಸಭೆ ಚುನಾವಣೆ : ಕಾಂಗ್ರೆಸ್‌ ಶಾಸಕರ ಅಡ್ಡಮತದಾನ, ಹಿಮಾಚಲದಲ್ಲಿ ಅಭಿಷೇಕ ಮನು ಸಿಂಘ್ವಿಗೆ ಸೋಲು

ಶಿಮ್ಲಾ: ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಮಂಗಳವಾರ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸೋಲಿಸಿದ್ದಾರೆ..! ಮತ ಎಣಿಕೆಯ ವೇಳೆ ಇಬ್ಬರು ಅಭ್ಯರ್ಥಿಗಳು ತಲಾ 34-34 ಮತಗಳನ್ನು ಪಡೆದ ನಂತರ ಸಮನಾದ ಟಾಸ್‌ ಮಾಡುವ ಮೂಲಕ ವಿಜೇತರನ್ನು ನಿರ್ಧರಿಸಲಾಯಿತು. 68 ಸದಸ್ಯ … Continued

ರಾಮ ಮಂದಿರ ಉದ್ಘಾಟನೆ : ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದ ಕಾಂಗ್ರೆಸ್ ಆಡಳಿತದ ಮೊದಲ ರಾಜ್ಯವಾದ ಹಿಮಾಚಲ..!

ಶಿಮ್ಲಾ: ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಹಿಮಾಚಲ ಪ್ರದೇಶ ರಾಮಮಂದಿರ ಕಾರ್ಯಕ್ರಮಕ್ಕೆ ರಜೆ ಘೋಷಿಸಿದ ಏಕೈಕ ಕಾಂಗ್ರೆಸ್ ಆಡಳಿತದ ರಾಜ್ಯವಾಗಿದೆ. ಭಗವಾನ್‌ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ದ ಸಂದರ್ಭದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಜನವರಿ … Continued

ರಾಮ ಮಂದಿರ ನಿರ್ಮಾಣ: ಪ್ರಧಾನಿ ಮೋದಿಯನ್ನು ಹೊಗಳಿದ ಮತ್ತೊಬ್ಬ ಹಿರಿಯ ಕಾಂಗ್ರೆಸ್‌ ನಾಯಕಿ

ಶಿಮ್ಲಾ : ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆ ಹಾಗೂ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ ಒಂದೆರಡು ದಿನಗಳ ನಂತರ, ಪಕ್ಷದ ಹಿಮಾಚಲ ಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರು ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ. ಎಕ್ಸ್‌ನಲ್ಲಿ ಕಾಣಿಸಿಕೊಂಡ ವೀಡಿಯೊದಲ್ಲಿ, “ರಾಮ ಮಂದಿರವನ್ನು ನಿರ್ಮಿಸಲು ಪ್ರಧಾನಿ … Continued

ಭಾರತದ ಮೊದಲ ಮತದಾರ ಶ್ಯಾಮ್ ಸರಣ್ ನೇಗಿ ನಿಧನ, ಎರಡು ದಿನಗಳ ಹಿಂದಷ್ಟೆ ಮತ ಚಲಾಯಿಸಿದ್ದರು

ಶಿಮ್ಲಾ: ಭಾರತದ ಮೊದಲ ಮತದಾರ ಶ್ಯಾಮ್ ಸರಣ್ ನೇಗಿ ಹಿಮಾಚಲ ಪ್ರದೇಶದ ಕಿನ್ನೌರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರು 105 ವರ್ಷ ವಯಸ್ಸಿನವರಾಗಿದ್ದರು. 1952 ರ ಸಾರ್ವತ್ರಿಕ ಚುನಾವಣೆಯಲ್ಲಿ ಮೊದಲ ಮತದಾರನೆಂದು ನಂಬಲ್ಪಟ್ಟ ನೇಗಿ ಅವರು ಜುಲೈ 1, 1917 ರಂದು ಜನಿಸಿದರು ಮತ್ತು ಅಧಿಕೃತ ದಾಖಲೆಗಳ ಪ್ರಕಾರ ಶಾಲಾ ಶಿಕ್ಷಕರಾಗಿ ನಿವೃತ್ತರಾದರು. … Continued

ಹಿಮಾಚಲ ಪ್ರದೇಶದಲ್ಲಿ ಭಾರಿ ಪ್ರವಾಹ, ಭೂಕುಸಿತ: 22 ಜನರು ಸಾವು, ಐವರು ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭೂಕುಸಿತ, ಪ್ರವಾಹ ಮತ್ತು ಮೋಡ ಸ್ಫೋಟ ಸಂಭವಿಸಿ ಒಂದೇ ಕುಟುಂಬದ ಎಂಟು ಮಂದಿ ಸೇರಿದಂತೆ ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ ಹಾಗೂ ಐವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಶನಿವಾರ ಹೇಳಿದರು. ಮಂಡಿ, ಕಂಗ್ರಾ … Continued