ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ; ಕೆರೆಗೆ ಹಾರಿ ಪಾರಾದ ವ್ಯಕ್ತಿ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಡಿಸೆಂಬರ್ 31 ರಂದು ಶರಿಯತ್‌ಪುರ ಜಿಲ್ಲೆಯಲ್ಲಿ ಖೋಕನ್ ದಾಸ್ (50) ಎಂಬ ಹಿಂದೂ ವ್ಯಕ್ತಿಯ ಮೇಲೆ ಭೀಕರ ದಾಳಿ ನಡೆಸಲಾಗಿದ್ದು, ದುಷ್ಕರ್ಮಿಗಳು ಅವರನ್ನು ಜೀವಂತವಾಗಿ ಸುಡಲು ಯತ್ನಿಸಿದ ಘಟನೆ ವರದಿಯಾಗಿದೆ. ಖೋಕನ್ ದಾಸ್ ಅವರು ತಮ್ಮ ಮೆಡಿಕಲ್ ಶಾಪ್ ಮುಚ್ಚಿ ಮನೆಗೆ … Continued

ಕಲಿಮಾ ಪಠಿಸದ್ದಕ್ಕೆ ಉಗ್ರರಿಂದ ತಂದೆಯ ತಲೆಗೆ ಗುಂಡೇಟು ; ಕಣ್ಣೀರಿಟ್ಟ ಪುಣೆಯ ಉದ್ಯಮಿಯ ಪುತ್ರಿ

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಉಗ್ರರು ಹಿಂದೂಗಳನ್ನೇ ಗುರಿಯಾಗಿಸಿ ನರಮೇಧ ಮಾಡಿದ್ದಾರೆ. ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್ (Pahalgam) ಕಣಿವೆಯಲ್ಲಿ ವ್ಯಕ್ತಿಗಳ ಗುರುತು ಹಾಗೂ ಧರ್ಮ ಯಾವುದೆಂದು ಕೇಳಿ ಅವರನ್ನು ಹತ್ಯೆ ಮಾಡಲಾಗಿದೆ. ಕಲಿಮಾ (Kalima) ಹೇಳಲು ಬಾರದವರ ತಲೆಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಭಯೋತ್ಪಾದಕರು ಟೆಂಟ್‌ ಒಳಗೆ ಕುಳಿತಿದ್ದ 54 ವರ್ಷದ ಸಂತೋಷ ಜಗದಾಳೆ … Continued

ವೀಡಿಯೊ..| ಬಪ್ಪನಾಡು ಜಾತ್ರೆ ರಥೋತ್ಸವದ ವೇಳೆ ಮುರಿದುಬಿದ್ದ ತೇರು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಮುಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ಶನಿವಾರ ಬೆಳಗಿನ … Continued

ಪ್ರಚೋದನಕಾರಿ ಹೇಳಿಕೆ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ ಐಆರ್‌

ಮಂಗಳೂರು : ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಹಿನ್ನಲೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಮಾರ್ಚ್ 9 ರಂದು ವಿಎಚ್‌ಪಿ ಆಯೋಜಿಸಿದ್ದ ಕೊರಗಜ್ಜನ‌ ಆದಿಕ್ಷೇತ್ರಕ್ಕೆ ನಮ್ಮ‌ನಡೆ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡುವಾಗ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ … Continued

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಹಿಂದೂ ದೇವಾಲಯಕ್ಕೆ ಹಾನಿ, ಭಾರತ ವಿರೋಧಿ ಬರಹ ಗೀಚಿ ವಿರೂಪ

ದಕ್ಷಿಣ ಕ್ಯಾಲಿಫೋರ್ನಿಯಾದ ಅತಿದೊಡ್ಡ ಹಿಂದೂ ದೇವಾಲಯಗಳಲ್ಲಿ ಒಂದಾದ ಬಾಪ್ಸ್‌ (BAPS) ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ಭಾರತ ವಿರೋಧಿ ಬರಹಗಳನ್ನು ಬರೆದು, ಮಂದಿರಕ್ಕೆ ಹಾನಿ ಮಾಡಿದ ಘಟನೆ ಭಾನುವಾರ ನಡೆದಿದೆ. ಇದು ಅಮೆರಿಕದಲ್ಲಿ ಹಿಂದೂ ಸಮುದಾಯದ ವಿರುದ್ಧ ದ್ವೇಷದ ಅಪರಾಧಗಳ ಮತ್ತೊಂದು ಉದಾಹರಣೆಯಾಗಿದೆ. ಕ್ಯಾಲಿಫೋರ್ನಿಯಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯ ದೇವಾಲಯಕ್ಕೆ ಹಾನಿ ಮಾಡಲಾಗಿದೆ. ಬೋಚಸನ್ವಾಸಿ … Continued

ದಕ್ಷಿಣ ಆಫ್ರಿಕಾದಲ್ಲಿ ಅನಾವರಣಗೊಂಡ ಭೂಮಿಯ ದಕ್ಷಿಣ ಗೋಳಾರ್ಧದ ಅತಿದೊಡ್ಡ ಹಿಂದೂ ದೇವಾಲಯ…!

ಜೋಹಾನ್ಸ್‌ಬರ್ಗ್: ಭೂಮಿಯ ದಕ್ಷಿಣ ಗೋಳಾರ್ಧದಲ್ಲಿ ಅತಿದೊಡ್ಡ ಹಿಂದೂ ದೇವಾಲಯ ಮತ್ತು ಸಾಂಸ್ಕೃತಿಕ ಸಂಕೀರ್ಣವನ್ನು ಜೋಹಾನ್ಸ್‌ಬರ್ಗ್‌ನಲ್ಲಿ ಭಾನುವಾರ ಅನಾವರಣಗೊಳಿಸಲಾಯಿತು. ದಕ್ಷಿಣ ಆಫ್ರಿಕಾದವರಲ್ಲಿ ಶೇಕಡಾ ಎರಡಕ್ಕಿಂತ ಕಡಿಮೆ ಜನರು ಹಿಂದೂ ಎಂದು ಗುರುತಿಸಿಕೊಂಡಿದ್ದರೂ, ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯದಲ್ಲಿ ಹಿಂದೂ ಧರ್ಮ ಹೆಚ್ಚು ಅನುಸರಿಸುವ ಧರ್ಮವಾಗಿದೆ. ಈ ಸಂದರ್ಭಕ್ಕಾಗಿ ಭಾರತದಿಂದ ದಕ್ಷಿಣ ಆಫ್ರಿಕಾಕ್ಕೆ ಬಂದಿರುವ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ … Continued

ಬಾಂಗ್ಲಾದೇಶದಲ್ಲಿ ‘ಹಿಂದೂಗಳ ಮೇಲೆ ದೌರ್ಜನ್ಯ, ಭಾರತಕ್ಕೆ ಅವಮಾನ ; ಆ ದೇಶದ ರೋಗಿಗಳಿಗೆ ಚಿಕಿತ್ಸೆ ನೀಡಲ್ಲ ಎಂದ ಕೋಲ್ಕತ್ತಾ ಆಸ್ಪತ್ರೆ…

ಕೋಲ್ಕತ್ತಾ : ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಆಸ್ಪತ್ರೆಯೊಂದು ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದೆ. ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಮಾಡಿದ ಅವಮಾನದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಜೆ.ಎನ್. ರೇ … Continued

ಮುಸ್ಲಿಂ ಕುಟುಂಬದ ಮಗಳ ಮದುವೆ ಕಾರ್ಡ್‌ನಲ್ಲಿ ಗಣೇಶ, ಕೃಷ್ಣನ ಚಿತ್ರ ; ಈ ಮದುವೆ ಆಮಂತ್ರಣ ಪತ್ರ ಭಾರೀ ವೈರಲ್‌…!

ಲಕ್ನೋ : ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ, ತಿಲೋಯ್ ತೆಹ್ಸಿಲ್‌ನ ಪುರೆ ಅಲ್ಲಾದೀನ್ ಗ್ರಾಮದ ಮುಸ್ಲಿಂ ಕುಟುಂಬವೊಂದು ತಮ್ಮ ಮಗಳ ಮದುವೆಗೆ ಹಿಂದೂ ಸಂಪ್ರದಾಯಗಳಿಗೆ ಅನುಗುಣವಾಗಿ ವಿಶಿಷ್ಟವಾದ ವಿವಾಹ ಆಮಂತ್ರಣ ಪತ್ರವನ್ನು ಮುದ್ರಿಸಿದೆ. ವಧು, ವರ ಮತ್ತು ಕುಟುಂಬದ ಸದಸ್ಯರ ಹೆಸರುಗಳೊಂದಿಗೆ ಹಿಂದೂ ದೇವರುಗಳಾದ ಗಣೇಶ ಮತ್ತು ಕೃಷ್ಣನ ಚಿತ್ರಗಳನ್ನು ಒಳಗೊಂಡಿರುವ ಮದುವೆ ಕಾರ್ಡ್ ಮುದ್ರಿಸಿರುವುದು … Continued

ಹಿಂದೂ- ಮುಸ್ಲಿಂ ವಿವಾಹ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಮಾನ್ಯವಲ್ಲ: ಮಧ್ಯಪ್ರದೇಶ ಹೈಕೋರ್ಟ್

ಭೋಪಾಲ್‌ : ಮುಸ್ಲಿಂ ಹುಡುಗ ಮತ್ತು ಹಿಂದೂ ಹುಡುಗಿಯ ನಡುವೆ ಮತಾಂತರವಾಗದೆ ವಿವಾಹವಾಗುವುದು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಕಾನೂನುಬಾಹಿರ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ವಿಶೇಷ ವಿವಾಹ ಕಾಯಿದೆ- 1954ರ ಅಡಿ ಮದುವೆಯಾಗಲು ಮತ್ತು ವಿವಾಹ ನೋಂದಣಿ ಮಾಡಿಕೊಳ್ಳಲು ಪೊಲೀಸ್‌ ರಕ್ಷಣೆ ಬೇಕು ಎಂದು ಕೋರಿ ಅಂತರ್ಧರ್ಮೀಯ ಜೋಡಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಮಧ್ಯಪ್ರದೇಶ … Continued

1950-2015ರ ಅವಧಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 7.8% ಕುಸಿತ ; ಅಲ್ಪಸಂಖ್ಯಾತರ ಶೇಕಡಾವಾರು ಹೆಚ್ಚಳ : ಪಿಎಂ-ಇಎಸಿ ಅಧ್ಯಯನ

ನವದೆಹಲಿ: ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿ (Prime Minister’s Economic Advisory Council) ನಡೆಸಿದ ಅಧ್ಯಯನವು ಭಾರತದಲ್ಲಿ ಬಹುಸಂಖ್ಯಾತ ಧರ್ಮದ (ಹಿಂದೂಗಳು) ಜನಸಂಖ್ಯೆಯ ಪಾಲು 1950 ಮತ್ತು 2015 ರ ನಡುವೆ ಶೇಕಡಾ 7.8 ರಷ್ಟು ಕುಸಿದಿದೆ, ಇದೇ ಅವಧಿಯಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ 43.15% ರಷ್ಟು ಹೆಚ್ಚಳವಾಗಿದೆ ಎಂದು ಅದು ಹೇಳಿದೆ. ಈ ಅವಧಿಯಲ್ಲಿ … Continued