ವೀಡಿಯೊ..| ಕುಮಟಾ: ಡಾಲ್ಫಿನ್ ಕಳೆಬರ ಪತ್ತೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆಯ ಅರಬ್ಬೀ ಸಮುದ್ರ ತೀರದಲ್ಲಿ ಡಾಲ್ಫಿನ್ ಕಳೆಬರ ಪತ್ತೆಯಾಗಿದೆ. ಸುಮಾರು 5 ಅಡಿ ಉದ್ದವಿರುವ ಡಾಲ್ಫಿನ್ ಕೊಳೆತ ಸ್ಥಿತಿಯಲ್ಲಿ ತೀರಕ್ಕೆ ಬಂದು ಬಿದ್ದಿದೆ. ಸಾಮಾನ್ಯವಾಗಿ ಹತ್ತರಿಂದ 15 ನಾಟಿಕಲ್ ಮೈಲು ಒಳಗೆ ಇದು ವಾಸಿಸುತ್ತಿದ್ದು ಸಮುದ್ರದ ನೀರಿನ ಇಳಿತದ ಸಂದರ್ಭದಲ್ಲಿ ಆಳ ಸಮುದ್ರಕ್ಕೆ ಹೋದ ಸಂದರ್ಭದಲ್ಲಿ … Continued

ವೀಡಿಯೊಗಳು..| ಕುಮಟಾ : ಹೊಲನಗದ್ದೆ-ಕಡ್ಲೆ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆ ಗುಡ್ಡದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬೆಂಕಿ ವ್ಯಾಪಿಸಿದ್ದು  ಸಸ್ಯ ಸಂಕುಲಗಳು ಬೆಂಕಿಗೆ ಆಹುತಿಯಾಗಿದೆ. ಈ ಘಟನೆ ಶುಕ್ರವಾರ ಅಪರಾಹ್ನದ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಅರಬ್ಬೀ ಸಮುದ್ರಕ್ಕೆ ಹೊಂದಿಕೊಂಡಿರುವ ಕಡ್ಲೆ ಗುಡ್ಡದಲ್ಲಿ ವ್ಯಾಪಿಸಿರುವ ಬೆಂಕಿ ನಂದಿಸುವುದು ಸುಲಭವಲ್ಲ. ಅರಬ್ಬೀ ಸಮುದ್ರದ ಪಶ್ಚಿಮ … Continued

ವೀಡಿಯೊ..| ಕುಮಟಾ : ಮನೆ ಬಾಗಿಲಿಗೇ ಬಂದು ನಾಯಿ ಹೊತ್ತೊಯ್ದ ಚಿರತೆ…!

ಕುಮಟಾ : ಮನೆಯಂಗಳಕ್ಕೇ ಬಂದ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯಲ್ಲಿ ನಡೆದಿದೆ. ಕುಮಟಾ ತಾಲೂಕಿನ ಹೊಲನಗದ್ದೆಯ ಬೆಳ್ಳಕ್ಕಿ ಎಂಬಲ್ಲಿ ದತ್ತಾತ್ರೇಯ ಭಟ್ಟ ಎಂಬವರ ಮನೆಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಮನೆಯವರು ಹಾಗೂ ಅಕ್ಕಪಕ್ಕದ ಮನೆಯವರು ಭಯಬೀತರಾಗಿದ್ದಾರೆ. ರಾತ್ರಿ ಮನೆಯ ಅಂಗಳಕ್ಕೇ ಬಂದ ಚಿರತೆ ನಾಯಿ … Continued

ಶ್ರೀ ಲಕ್ಷ್ಮೀ ನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳದಿಂದ ಅರ್ಚನೆ

ಕುಮಟಾ : ತಾಲೂಕಿನ ಹೊಲನಗದ್ದೆ ತೆಪ್ಪದಮಠದ ಶ್ರೀ ಲಕ್ಷ್ಮೀನರಸಿಂಹ ದೇವಾಲಯದಲ್ಲಿ ಭಾನುವಾರ ಲಕ್ಷಾಧಿಕ ತುಳಸಿ ದಳದಿಂದ ಪೂಜೆ ನಡೆಯಿತು. ಸತತವಾಗಿ 10 ವರ್ಷದಿಂದ ಪ್ರತಿವರ್ಷ ವಾರ್ಷಿಕವಾಗಿ ಲಕ್ಷಾಧಿಕ ತುಳಸಿದಳದಿಂದ ಪೂಜೆ ನಡೆಸಿಕೊಂಡು ಬರಲಾಗುತ್ತಿದೆ. ಈವರ್ಷ ಅಧಿಕ ಮಾಸ ಇರುವುದರಿಂದ ಈ ಸಂದರ್ಭದಲ್ಲಿ ನಾಡಿನ ಕ್ಷೇಮಕ್ಕಾಗಿ ನಡೆಸುವ ಈ ಪೂಜೆಯಿಂದ ಜನರಿಗೆ ಅಧಿಕ ಫಲ ಪ್ರಾಪ್ತಿಯಾಗುವದು ಎಂದು … Continued

ಕುಮಟಾ: ಕೇವಲ ಅರ್ಜಿ ಪಡೆದ್ರೆ ಸಮಸ್ಯೆ ಬಗೆಹರಿಯಲ್ಲ, ಅಧಿಕಾರಿಗಳು ಹಳ್ಳಿಯಲ್ಲಿದ್ದು ಸಮಸ್ಯೆ ಅರಿತರೆ ಬಗೆಹರಿಯುತ್ತದೆ-ಸಚಿವ ಅಶೋಕ

ಕುಮಟಾ; ಸಮಸ್ಯೆ ಎನ್ನುವುದು ಹಳ್ಳಿಯಲ್ಲಿದೆ. ಹರಿಜನ ಕೇರಿಯಲ್ಲಿ, ಮೀನುಗಾರರ ಸಮುದಾಯದಲ್ಲಿ ಸಮಸ್ಯೆಯಿದೆ. ಹಳ್ಳಿಯ ಹಿಂದುಳಿದ, ಬಡವರ ಅಭಿವೃದ್ಧಿಯಾಗಬೇಕು. ಕೇವಲ ಸಮಸ್ಯೆಗಳ ಬಗ್ಗೆ ಅರ್ಜಿ ಪಡೆಯುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಹಳ್ಳಿಯಲ್ಲಿ ಹೆಚ್ಚುಕಾಲ ಇರಬೇಕು. ಜಿಲ್ಲಾಧಿಕಾರಿ ಸಮೇತ ಅಧಿಕಾರಿಗಳು ಹಳ್ಳಿಯಲ್ಲಿದ್ದು ಸಮಸ್ಯೆ ಅರಿತುಕೊಂಡರೆ ಬಗೆಹರಿಯುತ್ತದೆ. ಅಲ್ಲಿಯ ಸಮಸ್ಯೆಯನ್ನು ಸ್ಥಳದಲ್ಲೇ ತಿರ್ಮಾನ ಮಾಡುವ ಉದ್ದೇಶ ಗ್ರಾಮ ವಾಸ್ತವ್ಯದ ಉದ್ದೇಶವಾಗಿದೆ ಎಂದು … Continued

ಕುಮಟಾ : ಹೊಲನಗದ್ದೆ ಕಡ್ಲೆಯ ಅರಬ್ಬಿ ಸಮುದ್ರ ತೀರದಲ್ಲಿ ಡಾಲ್ಫಿನ್ ಕಳೇಬರ ಪತ್ತೆ..!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆಯ ಅರಬ್ಬಿ ಸಮುದ್ರ ತೀರದಲ್ಲಿ ಡಾಲ್ಫಿನ್ ಕಳೇಬರ ಪತ್ತೆಯಾಗಿದೆ. ಸುಮಾರು 3 ಮೀಟರುಗಳಷ್ಟು ಉದ್ದವಿರುವ ಡಾಲ್ಫಿನ್ ಯಾವಕಾರಣದಿಂದ ಮೃತಪಟ್ಟಿದೆ ಎನ್ನುವುದು ತಿಳಿದು ಬಂದಿಲ್ಲ. ಇದು ಗಂಡು ಡಾಲ್ಪಿನ್ ಆಗಿದ್ದು ಕಳೇಬರದ ಮೇಲೆ ಮೇಲ್ನೋಟಕ್ಕೆ ಯಾವುದೇ ಗಾಯದ ಗುರುತು ಕಂಡು ಬರುತ್ತಿಲ್ಲ. ಮೀನುಗಾರರು ಇದನ್ನು ಹಂದಿ … Continued

ಕುಮಟಾ: ಹೊಲನಗದ್ದೆ ತೆಪ್ಪದಮಠ ಶ್ರೀಲಕ್ಷ್ಮೀನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳ ಅರ್ಚನೆ

ಕುಮಟಾ; ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ  ಹೊಲನಗದ್ದೆಯ ತೆಪ್ಪದಮಠದ ಗ್ರಾಮ ದೇವರಾದ ಶ್ರೀಲಕ್ಷ್ಮೀನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳದಿಂದ ಅರ್ಚನೆ ಮಾಡಲಾಯಿತು. ಹಲವಾರು ವರ್ಷದಿಂದ ನೂಲ ಹಣ್ಣಿಮೆದಿನದಂದು ದೇವಾಲಯದಲ್ಲಿ ಪವಿತ್ರಧಾರಣೆಯೊಂದಿಗೆ ಶ್ರೀದೇವರಿಗೆ ಲಕ್ಷಾಧಿಕ ತುಳಸಿ ದಳವನ್ನು ಅರ್ಚಿಸಿ ಪೂಜೆ ನೆರವೇರಿಸಲಾಗುತ್ತಿದೆ. ನಾಡು ಸುಭಿಕ್ಷೆಯಿಂದ ಕೂಡಿರಲಿ ಹಾಗೂ ಲೋಕದ ಜನರು ಸುಖ ಶಾಂತಿ ನೆಮ್ಮದಿಯಿಂದ ಬದುಕು … Continued