ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಮಂದಿಗೆ ಗಾಯ

ದಾವಣಗೆರೆ: ರಂಜಾನ್ ಹಬ್ಬದ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶನಿವಾರ ಆನಗೋಡು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆನಗೋಡು ಗ್ರಾಮದ ಈದ್ಗಾ ಮೈದಾನದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೆಜ್ಜೇನುಗಳ ಗುಂಪು ದಾಳಿ ನಡೆಸಿದೆ. ಇದರಿಂದ ಪ್ರಾರ್ಥನೆಗೆ … Continued

ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿ: ಅಂಪೈರ್ ಸಾವು, ಹಲವು ಆಟಗಾರರಿಗೆ ಗಾಯ

ಉನ್ನಾವೋ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ನಡೆಸಿದ ಪರಿಣಾಮ 65 ವರ್ಷದ ಅಂಪೈರ್ ಮೃತಪಟ್ಟಿದ್ದು, ಹಲವು ಆಟಗಾರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ್ದ ಈ ಪಂದ್ಯವು ಶುಕ್ಲಾಗಂಜ್ ಪ್ರದೇಶದ ಸಪ್ರು ಮೈದಾನದಲ್ಲಿ ನಡೆಯುತ್ತಿತ್ತು. ಕಾನ್ಪುರ ಮೂಲದ ಮಾಣಿಕ್ ಗುಪ್ತಾ … Continued

ಹೊನ್ನಾವರ : ಹೆಜ್ಜೇನು ದಾಳಿಗೆ ವ್ಯಕ್ತಿ ಸಾವು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಅನಿಲಗೋಡ ಶಾಲೆಯ‌ ಸಮೀಪ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹೊನ್ನಾವರ ತಾಲೂಕಿನ ಅನಿಲಗೋಡದ ನಿವಾಸಿ ಮಂಜುನಾಥ ಗಣಪ ಅಂಬಿಗ (53) ಎಂಬವರು ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೆಲಸಕ್ಕೆಂದು ಬೇರಂಕಿಯ ಸಮೀಪ ನಡೆದುಕೊಂಡು ಹೋಗುತ್ತಿರುವಾಗ ಅನಿಲಗೋಡ ಜನತಾ ವಿದ್ಯಾಲಯದ ಹಿಂಭಾಗದಲ್ಲಿ … Continued

ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೇಲೆ ಜೇನು ದಾಳಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೆಂಗ್ರೆ ಹೊಳೆ ಬಳಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್(Bhimanna Naik) ಹಾಗೂ ಪೌರಾಯುಕ್ತ ಕಾಂತರಾಜ ಸೇರಿದಂತೆ ಹಲವರ ಮೇಲೆ ಜೇನು ದಾಳಿ ಮಾಡಿದೆ ಎಂದು ವರದಿಯಾಗಿದೆ. ಶಿರಸಿ ನಗರಕ್ಕೆ ನೀರು ಪೂರೈಸುವ ತಾಲೂಕಿನ ಕೆಂಗ್ರೆ ಹೊಳೆಯಲ್ಲಿರುವ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದ ವೇಳೆ ಜೇನು ನೋಣಗಳು ದಾಳಿ … Continued

ಜೇನು ಹುಳುಗಳ ದಾಳಿಯಿಂದ 30ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ : ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ನೋಡಲು ತೆರಳಿದ್ದ ಪ್ರವಾಸಿಗರ ಮೇಲೆ ಜೇನು ದಾಳಿ ಮಾಡಿ 30ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡ ಹಿನ್ನೆಲೆಯಲ್ಲಿ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಏಪ್ರಿಲ್‌ 14ರಿಂದ ನಿರ್ಬಂಧ ವಿಧಿಸಲಾಗಿದೆ. ಕಳೆದೆರಡು ದಿನಗಳಿಂದ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬಂದ 30ಕ್ಕೂ ಹೆಚ್ಚು ಪ್ರವಾಸಿಗರ ಮೇಲೆ … Continued

ಮೇಲುಕೋಟೆ ಜಾತ್ರೆಯಲ್ಲಿ ಹೆಜ್ಜೇನು ದಾಳಿ; 35 ಜನರಿಗೆ ಗಾಯ, 17 ಮಂದಿ ಅಸ್ವಸ್ಥ

ಮಂಡ್ಯ: ಮೇಲುಕೋಟೆಯ ತೊಟ್ಟಲುಮಡು ಜಾತ್ರೆ ವೇಳೆ ಹೆಜ್ಜೇನು ದಾಳಿ ನಡೆಸಿದ್ದು ವೇಳೆ 35ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಹಾಗೂ ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ. ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ. ಕರ್ಪೂರದ ಹೊಗೆಯಿಂದ ಹೆಜ್ಜೇನು ಗೊಂದಲಕ್ಕೆ ಒಳಗಾಗಿ ದಾಳಿ ನಡೆಸಿವೆ. ಇದರಿಂದ … Continued

ಮುಂಡಗೋಡ : ಶಿಬಿರದ ಮೇಲೆ ಹೆಜ್ಜೇನು ದಾಳಿ, 50ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ : ಹೆಜ್ಜೇನು ದಾಳಿಗೆ ಐವತ್ತಕ್ಕೂ ಹೆಚ್ಚು ಶಿಬಿರಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನಲ್ಲಿ ಟಿಬೆಟಿಯನ್‌ ಕ್ಯಾಂಪ್‌ ಬಳಿ ನಡೆದಿದೆ. ಟಿಬೇಟಿಯನ್ ಕ್ಯಾಂಪ್‌ನ ಶಿಬಿರಕ್ಕೆ ಬಂದ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ಪದಾಧಿಕಾರಿಗಳು ಗಾಯಗೊಂಡಿದ್ದಾರೆ. ಟಿಬೇಟಿಯನ್ ಕ್ಯಾಂಪ್‌ನಲ್ಲಿ ದಲಿತ ಸಂಘರ್ಷ ಸಮಿತಿಯು ಮಾರ್ಚ್‌ 3 ಹಾಗೂ 4ರಂದು ಎರಡು ದಿನಗಳ ಶಿಬಿರ … Continued

ಕಾರವಾರ: ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ: 16 ಮಂದಿ ಆಸ್ಪತ್ರೆಗೆ ದಾಖಲು

ಕಾರವಾರ: ಶಾಲೆಗೆ ಹೋಗುತ್ತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ನೊಣ ದಾಳಿ ಮಾಡಿ ಕಡಿದ ಘಟನೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲಿನಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ಜೇನು ಕಡಿತದಿಂದ 16 ಮಕ್ಕಳು ಅಸ್ವಸ್ಥರಾಗಿದ್ದು, ಕೆಲ ಮಕ್ಕಳ ಬೆನ್ನು, ಕುತ್ತಿಗೆ, ಮುಖ, ತಲೆಗೆ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ಊರವರ ಸಹಾಯದಿಂದ ಕಾರವಾರ ಜಿಲ್ಲಾಸ್ಪತ್ರೆಗೆ … Continued