ಮಾಜಿ ಸಚಿವ ಬಿ.ಸಿ. ಪಾಟೀಲ ಅಳಿಯ ಆತ್ಮಹತ್ಯೆ

ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ ಅವರ ಅಳಿಯ ಕೆ.ಜಿ. ಪ್ರತಾಪಕುಮಾರ ಅವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಹಿರೆಕೆರೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಅವರು ಹೊನ್ನಾಳಿ ಬಳಿಯ ಅರಕೆರೆ ಗ್ರಾಮದ ಬಳಿ ರಸ್ತೆ ಸಮೀಪ … Continued

ತುಂಗಭದ್ರಾ ನದಿಯಲ್ಲಿ ಮೂವರು ಹುಡುಗರು ನೀರುಪಾಲು

ದಾವಣಗೆರೆ : ತುಂಗಭದ್ರಾ ನದಿಯಲ್ಲಿ ಮೂವರು ಹುಡುಗರು ನೀರು ಪಾಲಾಗಿರುವ ಘಟನೆ ಭಾನುವಾರ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಗ್ರಾಮದ ಪವನ (16), ಕಿರಣ (14) ಹಾಗೂ ವರುಣ (15) ನೀರು ಪಾಲಾದವರು ಎಂದು ಹೇಳಲಾಗಿದೆ. ಭಾನುವಾರ ಬೆಳಿಗ್ಗೆ ಹೊಲದಲ್ಲಿ ಬೇಸಾಯ ಮುಗಿಸಿದ ನಂತರ ತುಂಗಭದ್ರಾ ನದಿಯಲ್ಲಿ ಎತ್ತುಗಳಿಗೆ ನೀರು ಕುಡಿಸಲು … Continued