ಹೊನ್ನಾವರದ ಪ್ರಕೃತಿಯ ‘ಮಾಯಾಲೋಕ’ಕ್ಕೆ ಆನಂದ ಮಹೀಂದ್ರಾ ಫಿದಾ ! ಕೇರಳದ ಹಿನ್ನೀರಿನಷ್ಟೇ ಸುಂದರ ಎಂದ ಉದ್ಯಮಿ

ಕಾರವಾರ : ದೇಶದ ಪ್ರಸಿದ್ಧ ಉದ್ಯಮಿ ಆನಂದ ಮಹೀಂದ್ರಾ ಅವರು ಮತ್ತೊಮ್ಮೆ ಭಾರತದ ಅಷ್ಟಾಗಿ ಪರಿಚಯವಿಲ್ಲದ, ಅಪರೂಪದ ಪ್ರವಾಸಿ ತಾಣಗಳತ್ತ ಜನರ ಗಮನ ಸೆಳೆದಿದ್ದಾರೆ. ಈ ಬಾರಿ ಅವರು ಕರ್ನಾಟಕದ ಉತ್ತರ ಕನ್ನ ಜಿಲ್ಲೆಯ ಕರಾವಳಿ ತೀರದ ಸುಂದರ ತಾಣ ‘ಹೊನ್ನಾವರ’ವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಇದನ್ನು ಪ್ರಕೃತಿಯ ಒಂದು ‘ಮಾಂತ್ರಿಕ ಭೂದೃಶ್ಯ’ (Magical Landscape) ಎಂದು … Continued

ಉತ್ತರ ಕನ್ನಡ : ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ

ಕಾರವಾರ : ಉತ್ತರ ಕನ್ನ ಜಿಲ್ಲೆಯ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾದ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 7 ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಮುಳುಗಡೆಯಾದ ಬೋಟ್ ‘ಶ್ರೀ ನವರತ್ನ’ ಅಂಕೋಲಾ ತಾಲೂನಿ ಬೆಳಂಬಾರದಿಂದ ಮೀನುಗಾರಿಕೆಗೆ ತೆರಳಿತ್ತು. ಇದು ಹಿಂತಿರುಗಿ ಬರುವಾಗ ಹೊನ್ನಾವರ ಹಾಗೂ ಕುಮಟಾ ವ್ಯಾಪ್ತಿಯ ಆಳ ಸಮುದ್ರದಲ್ಲಿ ಮುಳುಗಲು ಪ್ರಾರಂಭಿಸಿದೆ. … Continued

ಹೊನ್ನಾವರ : ಸಿಡಿಲು ಬಡಿದು ಸಾವು

ಹೊನ್ನಾವರ : ಸಿಡಿಲು ಬಡಿದು ಕಡಲತೀರದಲ್ಲಿದ್ದ ಮೀನುಗಾರನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಪ್ಸರಕೊಂಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಶನಿವಾರ ತಡರಾತ್ರಿ ನಡೆದಿದೆ ಎನ್ನಲಾಗಿದ್ದು, ಮೃತ ಮೀನುಗಾರನನ್ನು ವಿನಾಯಕ ಖಾರ್ವಿ ಎಂದು ಗುರುತಿಸಲಾಗಿದೆ. ಮೀನುಗಾರಿಕಾ ಬೋಟ್‌ನಲ್ಲಿ ತೆರಳಿ ಅರಬ್ಬೀ ಸಮುದ್ರದಲ್ಲಿ ಮೀನು ಹಿಡಿದುಕೊಂಡು ಮರಳಿ ಬಂದ ನಂತರ ದೋಣಿಯನ್ನು ದಡಕ್ಕೆ … Continued

ಹೊನ್ನಾವರ : ಯಕ್ಷಗಾನದ ಖ್ಯಾತ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಇನ್ನಿಲ್ಲ

ಹೊನ್ನಾವರ : ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಬಡಗುತಿಟ್ಟು ಯಕ್ಷಗಾನದ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದ ಕಪ್ಪೆಕೆರೆ ಸುಬ್ರಾಯ  ಹೆಗಡೆ (79) ಬುಧವಾರ (ಮೇ 13) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. 1947೭ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ … Continued

ಜಿ.ಆರ್.ಪಂಡಿತರ ಯಕ್ಷಗಾನದ ಚೌಕಿಮನೆ ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಬಹುಮಾನ

ಶಿರಸಿ : ಸಾಗರದ ಜಿ.ಆರ್.ಪಂಡಿತ ಅವರು ತೆಗೆದ ಯಕ್ಷಗಾನದ ಒಂದು ಮೇಕಪ್ ಫೋಟೋಕ್ಕೆ ಅಂತಾರಾಷ್ಟ್ರೀಯ ಬಹುಮಾನಕ್ಕೆ ಪಾತ್ರವಾಗಿದೆ. ಇದೇ ಏಪ್ರಿಲ್ ನಲ್ಲಿ ಯುರೋಪಿನ ಸರ್ಬಿಯಾ ದೇಶದ ನೊವಿಸಡ್ ನಗರದ ಸ್ಟರಿಜಿನೊ ಪೊಜೊರ್ಜೆ ಎಂಬ ಖ್ಯಾತ ಛಾಯಾಗ್ರಹಣ ಸಂಸ್ಥೆಯು ಆಯೋಜಿಸಿದ್ದ 18ನೇ “ಟ್ರೈಯೇನಿಯಲ್ ಫೋಟೋಗ್ರಫಿಕ್ ಆರ್ಟ್ ನಲ್ಲಿ ಥಿಯೇಟರ್” ಎಂಬ ಹೆಸರಿನ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ 13 … Continued

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ 5 ವರ್ಷದ ಮಗು ಸಾವು

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ ಐದು ವರ್ಷದ ಮಗು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ (Honnavar)ಹೊಸಪಟ್ಟಣದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಆಶಿಕಾ  ನಾಯ್ಕ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಪಂಪ್‌ಸೆಟ್‌ ಸ್ಟಾರ್ಟ್‌ ಮಾಡಿ ಮನೆ ಬಳಕೆಗೆ ನೀರು ತುಂಬಿಸುತ್ತಿರುವಾಗ ವಿದ್ಯುತ್ ತಂತಿಗೆ ಕಾಲು … Continued

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ; ಯುವಕ ಸಾವು

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ದುರ್ಗಾಂಬಾ ಹೊಟೇಲಿನ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯ ಅಂಗಡಿಮನೆಯ ಕಿರಣ ಬಾಲಚಂದ್ರ ನಾಯ್ಕ ( 24 ) … Continued

ಹೊನ್ನಾವರ : ಮೇಯಲು ಬಿಟ್ಟ ಗೋವನ್ನು ಹತ್ಯೆ ಮಾಡಿ ಮಾಂಸ ಕದ್ದೊಯ್ದ ಕಳ್ಳರು

ಹೊನ್ನಾವರ : ಮೇಯಲು ಬಿಟ್ಟಿದ್ದ ಹಸುವನ್ನು ಹತ್ಯೆ ಮಾಡಿ ಅದರ ಮಾಂಸವನ್ನು ಒಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರಿನ ಜಡ್ಡಿಗದ್ದೆ ಸಮೀಪದ ಕಿರ್ಸಾನಹಕ್ಕಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇದು ಸ್ಥಳೀಯರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಮಾಡಿದ ಗೋವಿನ ತಲೆಯ ಭಾಗ, ಚರ್ಮ, ಮೂಳೆಯ ಭಾಗಗಳನ್ನು ಬಿಸಾಡಿ ಹೋಗಿರುವುದು ಸೋಮವಾರ … Continued

ಹೊನ್ನಾವರ : ಏರ್‌ಗನ್ ನಿಂದ ಸಿಡಿದ ಗುಂಡು ತಗುಲಿ ಯುವಕ ಸಾವು

ಹೊನ್ನಾವರ : ಕೈಯಲ್ಲಿದ್ದ ಏರ್‌ಗನ್ ನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಹಾಡಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ (19) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಮಂಗಗಳನ್ನು ಓಡಿಸಲು ಕೈಯಲ್ಲಿ ಏರ್‌ಗನ್ ಹಿಡಿದು … Continued

ಹೊನ್ನಾವರ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ದ ಬೃಹತ್ ಪ್ರತಿಭಟನಾ ಸಮಾವೇಶ

ಹೊನ್ನಾವರ  :  ನದಿ ತಾನು ಹರಿಯುವ ದಿಕ್ಕಿನ ವಿರುದ್ಧ ಹರಿದರೆ ಅದು ನಾಶಕ್ಕೆ ಮುನ್ನುಡಿ. ನದಿಯ ನೀರನ್ನು ಸುರಂಗ‌ ಕೊರೆದು ಹಿಂದಕ್ಕೆ ಒಯ್ಯುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡ. ಯೋಜನೆ ನಿಲ್ಲಿಸಲು ಎಲ್ಲರೂ ಒಂದಾಗಬೇಕು. ಎಲ್ಲರೂ ಸೇರಿ ಒಗ್ಗಟ್ಟಿನಲ್ಲಿ ಹೋರಾಟ ಮಾಡೋಣ ಎಂದು ನುಡಿದರು. ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ  … Continued