ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ; ಯುವಕ ಸಾವು

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ದುರ್ಗಾಂಬಾ ಹೊಟೇಲಿನ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯ ಅಂಗಡಿಮನೆಯ ಕಿರಣ ಬಾಲಚಂದ್ರ ನಾಯ್ಕ ( 24 ) … Continued

ಹೊನ್ನಾವರ : ಮೇಯಲು ಬಿಟ್ಟ ಗೋವನ್ನು ಹತ್ಯೆ ಮಾಡಿ ಮಾಂಸ ಕದ್ದೊಯ್ದ ಕಳ್ಳರು

ಹೊನ್ನಾವರ : ಮೇಯಲು ಬಿಟ್ಟಿದ್ದ ಹಸುವನ್ನು ಹತ್ಯೆ ಮಾಡಿ ಅದರ ಮಾಂಸವನ್ನು ಒಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರಿನ ಜಡ್ಡಿಗದ್ದೆ ಸಮೀಪದ ಕಿರ್ಸಾನಹಕ್ಕಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇದು ಸ್ಥಳೀಯರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಮಾಡಿದ ಗೋವಿನ ತಲೆಯ ಭಾಗ, ಚರ್ಮ, ಮೂಳೆಯ ಭಾಗಗಳನ್ನು ಬಿಸಾಡಿ ಹೋಗಿರುವುದು ಸೋಮವಾರ … Continued

ಹೊನ್ನಾವರ : ಏರ್‌ಗನ್ ನಿಂದ ಸಿಡಿದ ಗುಂಡು ತಗುಲಿ ಯುವಕ ಸಾವು

ಹೊನ್ನಾವರ : ಕೈಯಲ್ಲಿದ್ದ ಏರ್‌ಗನ್ ನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಹಾಡಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ (19) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಮಂಗಗಳನ್ನು ಓಡಿಸಲು ಕೈಯಲ್ಲಿ ಏರ್‌ಗನ್ ಹಿಡಿದು … Continued

ಹೊನ್ನಾವರ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ದ ಬೃಹತ್ ಪ್ರತಿಭಟನಾ ಸಮಾವೇಶ

ಹೊನ್ನಾವರ  :  ನದಿ ತಾನು ಹರಿಯುವ ದಿಕ್ಕಿನ ವಿರುದ್ಧ ಹರಿದರೆ ಅದು ನಾಶಕ್ಕೆ ಮುನ್ನುಡಿ. ನದಿಯ ನೀರನ್ನು ಸುರಂಗ‌ ಕೊರೆದು ಹಿಂದಕ್ಕೆ ಒಯ್ಯುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡ. ಯೋಜನೆ ನಿಲ್ಲಿಸಲು ಎಲ್ಲರೂ ಒಂದಾಗಬೇಕು. ಎಲ್ಲರೂ ಸೇರಿ ಒಗ್ಗಟ್ಟಿನಲ್ಲಿ ಹೋರಾಟ ಮಾಡೋಣ ಎಂದು ನುಡಿದರು. ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ  … Continued

ಹೊನ್ನಾವರ : ಖಾಸಗಿ ಬಸ್‌ ಪಲ್ಟಿ ; ಹಲವರಿಗೆ ಗಾಯ

ಹೊನ್ನಾವರ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಉರುಳಿ ಬಿದ್ದು ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಳ್ಳಂಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭಾನುವಾರ (ಮಾರ್ಚ್ 8)ರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಹೊನ್ನಾವರದಿಂದ ಸಾಗರ ಮಾರ್ಗವಾಗಿ ಬೆಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಬಸ್, ರ ರಾತ್ರಿ … Continued

ಹೊನ್ನಾವರ : ಹೆಜ್ಜೇನು ದಾಳಿಗೆ ವ್ಯಕ್ತಿ ಸಾವು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಅನಿಲಗೋಡ ಶಾಲೆಯ‌ ಸಮೀಪ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹೊನ್ನಾವರ ತಾಲೂಕಿನ ಅನಿಲಗೋಡದ ನಿವಾಸಿ ಮಂಜುನಾಥ ಗಣಪ ಅಂಬಿಗ (53) ಎಂಬವರು ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೆಲಸಕ್ಕೆಂದು ಬೇರಂಕಿಯ ಸಮೀಪ ನಡೆದುಕೊಂಡು ಹೋಗುತ್ತಿರುವಾಗ ಅನಿಲಗೋಡ ಜನತಾ ವಿದ್ಯಾಲಯದ ಹಿಂಭಾಗದಲ್ಲಿ … Continued

ಹಿಂದೂಸ್ತಾನಿ ಗಾಯಕ ಅಶೋಕ ಹುಗ್ಗಣ್ಣವರ ನಿಧನ

ಹುಬ್ಬಳ್ಳಿ: ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ನಿವೃತ್ತ ಸಂಗೀತ ಪ್ರಾಧ್ಯಾಪಕರಾದ ಅಶೋಕ ಹುಗ್ಗಣ್ಣವರ (64) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಮೂಲತಃ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದವರಾದ ಅಶೋಕ ಹುಗ್ಗಣ್ಣವರ ಅವರು, ಹೊನ್ನಾವರದ  ಎಸ್.ಡಿ.ಎಂ. ಕಾಲೇಜಿನಲ್ಲಿ ಸಂಗೀತ ಪ್ರಾಧ್ಯಾಪಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ 2021ರಲ್ಲಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯ ಬಳಿಕ ಅವರು ಹುಬ್ಬಳ್ಳಿಯಲ್ಲಿ … Continued

ಹೊನ್ನಾವರ : ಮಂಕಿ ಪಟ್ಟಣ ಪಂಚಾಯತದ ಮೊದಲ ಚುನಾವಣೆ : ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್ಸಿಗೆ ಹಿನ್ನಡೆ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪಟ್ಟಣ ಪಂಚಾಯತ ಆಗಿ ಘೋಷಣೆಯಾದ ನಂತರ ಮಂಕಿಯಲ್ಲಿ ನಡೆದ ಮೊದಲ ಮಹತ್ವದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಭೂತಪೂರ್ವ ಗೆಲುವು ಸಾಧಿಸಿದ್ದು, ಆಡಳಿತದ ಚುಕ್ಕಾಣಿ ಹಿಡಿದಿದೆ. ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲೇ ಕಾಂಗ್ರೆಸ್ಸಿಗೆ ಹಿನ್ನಡೆಯಾಗಿದೆ. ಸಚಿವ ಮಂಕಾಳ ವೈದ್ಯರಿಗೆ ಸ್ವಕ್ಷೇತ್ರದಲ್ಲಿ  ಹಿನ್ನಡೆಯಾದರೆ,ಮಾಜಿ ಸಚಿವ … Continued

ಹೊನ್ನಾವರ : ಮಂಕಿಯಲ್ಲಿ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ಸಾವು

ಹೊನ್ನಾವರ : ಅರಬ್ಬೀ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ವಿದ್ಯಾರ್ಥಿಗಳಾದ ಮದನ್ ನಾರಾಯಣ ಖಾರ್ವಿ (17) ಮತ್ತು ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಅವರು ಗುರುವಾರ ಸಂಜೆ 6:30ರ ಸುಮಾರಿಗೆ ತಮ್ಮ ಪಾತಿ ದೋಣಿಯಲ್ಲಿ ಮೀನುಗಾರಿಕೆಗೆ … Continued

ಹೊನ್ನಾವರ : ಶಾಲಾ ಪ್ರವಾಸಿ ಬಸ್ ಪಲ್ಟಿ : ಓರ್ವ ಸಾವು, 40ಕ್ಕೂ ಮಂದಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರ (Honnavar) ತಾಲೂಕಿನ ಗೇರುಸೊಪ್ಪ ಸಮೀಪದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಹಾಗೂ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದರಲ್ಲಿ ಮೂರ್ನಾಲ್ಕು ಜನರನ್ನು … Continued