ಹೊನ್ನಾವರ | ಮುಳ್ಳೋಡು ಸಮೀಪ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ತಾಲೂಕಿನ ಮುಳ್ಳೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ 200 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. … Continued

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಾರ್ವಜನಿಕರ ತೀವ್ರ ವಿರೋಧ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಶ್ರೀ ಗುತ್ತಿಕನ್ನಿಕಾ ನಗರದೇವಿ ದೇವಾಲಯದ ಸಭಾಭವನದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಕುರಿತು ನಡೆದ ಸಾರ್ವಜನಿಕ ಆಕ್ಷೇಪಣೆ ಸಭೆಯಲ್ಲಿ ಸಾರ್ವಜನಿಕರು ಯೋಜನೆಯ ವಿರುದ್ಧ ತಮ್ಮ ಬಲವಾದ ವಿರೋಧ ವ್ಯಕ್ತಪಡಿಸಿದರು. ಈ ಸಭೆ ಕೇವಲ ಒಂದು ಕಾಟಾಚಾರದ ಪ್ರಕ್ರಿಯೆ ಎಂಬಂತೆ ನಡೆಸಲಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. … Continued

ಹೊನ್ನಾವರ : ಜಾನಪದ ತಜ್ಞ, ಸಾಹಿತಿ ಡಾ. ಎನ್.ಆರ್. ನಾಯಕ ನಿಧನ

ಹೊನ್ನಾವರ: ಖ್ಯಾತ ಜಾನಪದ ತಜ್ಞ, ನಾಟಕಕಾರ, ಕವಿ, ಸಾಹಿತಿ ಡಾ. ಎನ್.ಆರ್. ನಾಯಕ (90) (Dr. N.R. Nayak) ಅವರು ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಅಸ್ವಸ್ತತೆಯಿಂದ ಮೂರ್ನಾಲ್ಕು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳು, ಒಬ್ಬರು ಮಗಳು ಇದ್ದಾರೆ. … Continued

ಹೊನ್ನಾವರ | ಹಸು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಸುವೊಂದನ್ನು ಕಳ್ಳತನ ಮಾಡಲು ಪ್ರಯತ್ನಿಸಿದ ಇಬ್ಬರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಮತ್ತು ಉಡುಪಿ ಜಿಲ್ಲೆಗಳ ನಿವಾಸಿಗಳಾದ ಮೊಹಮ್ಮದ್ ಜಾಫರ್ ಜಕ್ವಾನ್ ಮತ್ತು ಸಬೀಲ್ ಬೆಟ್ಟಿ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಸೆ. 4ರಂದು ಮಧ್ಯರಾತ್ರಿ ಅವಧಿಯಲ್ಲಿ ಕಾರಿನಲ್ಲಿ ಬಂದು ರಸ್ತೆಯ ಬದಿಯಲ್ಲಿ ಮಲಗಿದ್ದ … Continued

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಸಾಮಾಜಿಕ ಹೋರಾಟಗಾರ ಪಿ.ಎಸ್.ಭಟ್ಟ ಉಪ್ಪೋಣಿ ನಿಧನ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಸಾಮಾಜಿಕ ಕಾರ್ಯಕರ್ತ ಪಿ.ಎಸ್‌.ಭಟ್‌ ಉಪ್ಪೋಣಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಉಪ್ಪೋಣಿಯವರಾಗಿದ್ದ ಅವರು ಬಿಎಸ್‌ಸಿ ಪದವೀಧರರಾಗಿದ್ದರು. ವಿದ್ಯಾರ್ಥಿ ದಿಸೆಯಿಂದಲೇ ನಾಕತ್ವಗುಣ ಇದ್ದ ಅವರು ಹೊನ್ನಾವರ ಎಸ್‌ಡಿಎಂ ಕಾಲೇಜ್‌ ಯೂನಿಯನ್‌ ಕಾರ್ಯದರ್ಶಿಯಾಗಿದ್ದರು. ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ … Continued

ಹೊನ್ನಾವರ | ಗೇರುಸೊಪ್ಪ ಅಣೆಕಟ್ಟಿನಿಂದ ಶರಾವತಿ ನದಿಗೆ ನೀರು ಬಿಡುಗಡೆ

ಕಾರವಾರ : ಕರ್ನಾಟಕದಾದ್ಯಂತ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಲಿಂಗನಮಕ್ಕಿ ಹಾಗೂ ಗೇರುಸೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಸಂಗ್ರಹ ಹೆಚ್ಚಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಡ್ಯಾಂನಿಂದ ಒಟ್ಟಾರೆ 75000 ಕ್ಯೂಸೆಕ್‌ … Continued

ಹೊನ್ನಾವರ | ಮಾರುತಿ ಓಮ್ನಿ ವಾಹನದ ನಾಲ್ಕೂ ಟೈರ್‌ ಕದ್ದೊಯ್ದ ಕಳ್ಳರು

ಹೊನ್ನಾವರ: ಮಾರುತಿ ಓಮ್ನಿ ವಾಹನದ ನಾಲ್ಕೂ ಟೈರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಾಳೆಗದ್ದೆ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯ ಕಸ್ತೂರಬಾ ನಗರದ ನಿವಾಸಿ ಸತೀಶ ಶೆಟ್ಟಿ ಎಂಬವರಿಗೆ ಸೇರಿದೆ. ಅವರು ಹೊನ್ನಾವರ ತಾಲೂಕಿನ ಬಾಳೆಗದ್ದೆ ಸಂಬಂಧಿಕರ ಮನೆಗೆ ಹೋದಾಗ ಈ ಘಟನೆ ನಡೆದಿದೆ. ರಾತ್ರಿ ಅವರು ರಸ್ತೆ … Continued

ಹೊನ್ನಾವರ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ : ಆಗಸ್ಟ್‌ 24 ರಂದು ಬಂಗಾರಮಕ್ಕಿಯಲ್ಲಿ ವಿಚಾರಗೋಷ್ಠಿ

ಹೊನ್ನಾವರ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸಾಧಕ-ಬಾಧಕಗಳ ಕುರಿತು ಆಗಸ್ಟ್‌ 24 ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ವಿಚಾರಗೋಷ್ಠಿ ನಡೆಯಲಿದೆ ಎಂದು ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ಹೇಳಿದ್ದಾರೆ. ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ವೀಡಿಯೊ…| ಹೊನ್ನಾವರ : ಲಿಂಗನಮಕ್ಕಿ ಅಣೆಕಟ್ಟಿನಿಂದ ಶರಾವತಿ ನದಿಗೆ 15000 ಕ್ಯೂಸೆಕ್ ನೀರು ಬಿಡುಗಡೆ

ಕಾರವಾರ : ಶರಾವತಿಯ ಲಿಂಗನಮಕ್ಕಿ ಜಲಾಶಯದಿಂದ ಇಂದು ಮಂಗಳವಾರ (ಆಗಸ್ಟ್‌ 19) ನೀರನ್ನು ಹೊರಕ್ಕೆ ಬಿಡಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ ಒಟ್ಟು 15000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಮೊದಲು ಮೂರು ಗೇಟಗಗಳನ್ನು ತೆಗೆದು ನೀರನ್ನು ಹೊರಕ್ಕೆ ಕಳುಹಿಸಲಾಗಿತ್ತು. ನಂತರ 11 ಗೇಟ್‌ಗಳನ್ನು ತೆರೆದು ಒಟ್ಟು 15000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹೀಗಾಗಿ … Continued

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ ಮುನ್ಸೂಚನೆ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ಕಾರವಾರ : ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಆಗಸ್ಟ್‌ 20 ಬೆಳಗ್ಗೆ ವರೆಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರುತ್ತಿದೆ. ಜಲಾಶಯದಿಂದ ಆಗಸ್ಟ್‌ 19 … Continued