ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ

ಹೊಸಪೇಟೆ : ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡುವವರು ಬರ್ಮುಡ, ಜೀನ್ಸ್ ಚಡ್ಡಿ ಧರಿಸುವಂತಿಲ್ಲ. ವಿರೂಪಾಕ್ಷನ ದರ್ಶನ‌ ಪಡೆಯಲು ಸಾಂಪ್ರದಾಯಿಕ ಉಡುಗೆ ಕಡ್ಡಾಯ. ಬರ್ಮುಡ, ಜೀನ್ಸ್‌ ಚಡ್ಡಿ ಧರಿಸಿ ಬಂದರೆ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. ಪಂಚೆ ತೊಟ್ಟು ಸಾಂಪ್ರದಾಯಿಕ ಉಡುಗೆಯಲ್ಲಿ ಬಂದರೆ ಮಾತ್ರ ದೇವರ ದರ್ಶನಕ್ಕೆ … Continued

ಹೊಸಪೇಟೆ ಬಳಿ ಭೀಕರ ಅಪಘಾತ ; 7 ಜನರು ಸಾವು

ಹೊಸಪೇಟೆ : ಹೊಸಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಹೊರವಲಯದ ಸುರಂಗದ ಸಮೀಪ ಎರಡು ಮೈನಿಂಗ್‌ ಟಿಪ್ಪರ್ ಲಾರಿಗಳು ಹಾಗೂ ಕ್ರೂಸರ್‌ ನಡುವೆ ಅಪಘಾತ ಸಂಭವಿಸಿದೆ. ಒಂದು ಮೈನಿಂಗ್‌ ಟಿಪ್ಪರ್‌ ಲಾರಿ ಹೆದ್ದಾರಿ ಪಕ್ಕದ … Continued

ಚಿಕನ್‌ ಊಟ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸಪೇಟೆ: ಕಲುಷಿತ ಆಹಾರ ಸೇವನೆಯಿಂದ 30ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಗರದಲ್ಲಿ ಗುರುವಾರ ನಡೆದ ವರದಿಯಾಗಿದೆ. ನಗರದ ಸರ್ಕಾರಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಬುಧವಾರ ರಾತ್ರಿ ಚಿಕನ್ ಊಟ ಮಾಲಾಗಿತ್ತು. ಒಟ್ಟು 148 ವಿದ್ಯಾರ್ಥಿನಿಯರಲ್ಲಿ 17 ಜನರು ಸಸ್ಯಹಾರ ಸೇವಿಸಿದ್ದು, ಇನ್ನುಳಿದವರು ಮಾಂಸಹಾರ ಸೇವಿಸಿದ್ದರು.ವಿದ್ಯಾರ್ಥಿಗಳು … Continued

ಬಿಜೆಪಿ ತೊರೆದ ಮತ್ತೊಬ್ಬ ನಾಯಕಿ : ಸಚಿವ ಆನಂದ ಸಿಂಗ್ ಸಹೋದರಿ ರಾಣಿ ಸಂಯುಕ್ತ ಕಾಂಗ್ರೆಸ್ಸಿಗೆ ಸೇರ್ಪಡೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಮಾಜಿ ಸದಸ್ಯೆ ಹಾಗೂ ಸಚಿವ ಆನಂದ್ ಸಿಂಗ್ ಸಹೋದರಿ ಬಿಎಲ್ ರಾಣಿ ಸಂಯುಕ್ತ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ್ದು, ಇಂದು, ಶನಿವಾರ (ಏ.22) ಕಾಂಗ್ರೆಸ್ಸಿಗೆ ಹೊಸಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ, ಶುಕ್ರವಾರ ರಾತ್ರಿ ಕಾಂಗ್ರೆಸ್‌ ಕರ್ನಾಟಕ … Continued

ಆನಂದ್‌ ಸಿಂಗ್‌ ಪುತ್ರನಿಗೆ ಬಿಜೆಪಿ ಟಿಕೆಟ್‌ : ರಾಣಿ ಸಂಯುಕ್ತ ತೀವ್ರ ಅಸಮಾಧಾನ, ಎರಡು ದಿನಗಳಲ್ಲಿ ಮುಂದಿನ ನಡೆ ಬಗ್ಗೆ ತೀರ್ಮಾನ

 ಹೊಸಪೇಟೆ : ಹೊಸಪೇಟೆ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆ ಹಾಗೂ ಟಿಕೆಟ್‌ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತ ಅವರು ಬಹಿರಂಗವಾಗಿಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಬೆಂಬಲಿಗರ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಟುಂಬ ರಾಜಕೀಯದ ಪ್ರಸ್ತಾಪ ಮಾಡಿದ್ದು, ಸಚಿವ ಆನಂದ್‌ ಸಿಂಗ್ ಮತ್ತು ಅವರ … Continued

ಕರ್ನಾಟಕದ ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗದಲ್ಲಿ ಜಿಯೋ 5ಜಿ ಸೇವೆಗೆ ಚಾಲನೆ

ಬೆಂಗಳೂರು: ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ, ಗದಗ-ಬೆಟಗೇರಿ (ಕರ್ನಾಟಕ), ಕಾಕಿನಾಡ, ಕರ್ನೂಲ್ (ಆಂಧ್ರಪ್ರದೇಶ), ಸಿಲ್ಚಾರ್ (ಅಸ್ಸಾಂ), ಮಲಪ್ಪುರಂ ಸೇರಿದಂತೆ 16 ನಗರಗಳಲ್ಲಿ ರಿಲಯನ್ಸ್ ಜಿಯೋ ಮಂಗಳವಾರ (ಜನವರಿ 17ರ ತನ್ನ ಟ್ರೂ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇದರಲ್ಲಿ ಪಾಲಕ್ಕಾಡ್, ಕೊಟ್ಟಾಯಂ, ಕಣ್ಣೂರು (ಕೇರಳ), ತಿರುಪ್ಪೂರ್ (ತಮಿಳುನಾಡು), ನಿಜಾಮಾಬಾದ್, ಖಮ್ಮಂ (ತೆಲಂಗಾಣ), ಮತ್ತು ಬರೇಲಿ (ಉತ್ತರ … Continued

ಹೊಸಪೇಟೆ: ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವು, ಹಲವರು ಅಸ್ವಸ್ಥ

ಹೊಸಪೇಟೆ (ವಿಜಯನಗರ): ನಗರದಲ್ಲಿ ಕಲುಷಿತ ನೀರಿನ ಸೇವನೆಯಿಂದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನಗರದ ರಾಣಿಪೇಟೆಯ 12ನೇ ಕ್ರಾಸ್‌ ನಿವಾಸಿ ಲಕ್ಷ್ಮಿದೇವಿ (50) ಮೃತ ಮಹಿಳೆಯಾಗಿದ್ದಾರೆ. 40 ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಬಡಾವಣೆಯಲ್ಲಿ ಆರೋಗ್ಯ ಇಲಾಖೆಯವರು ಬೀಡು ಬಿಟ್ಟಿದ್ದು, ಜನರಿಗೆ ವಾಂತಿ, ಭೇದಿ ಪ್ರಕರಣಗಳು ನಿಲ್ಲುವ ಲಕ್ಷಣಗಳು … Continued

ಕಾಲುವೆಗೆ ಈಜಲು ಹೋಗಿ ನೀರು ಪಾಲಾದ ಮೂವರು ವಿದ್ಯಾರ್ಥಿಗಳು

ಬಳ್ಳಾರಿ : ಕಾಲುವೆಗೆ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿ ನಡೆದ ವರದಿಯಾಗಿದೆ. ಒಟ್ಟು ಆರು ವಿದ್ಯಾರ್ಥಿಗಳು ಈಜಲು ತೆರಳಿದ್ದರು ಎಂದು ಹೇಳಲಾಗಿದ್ದು, ಅವರಲ್ಲಿ ಮೂವರು ನೀರು ಪಾಲಾಗಿದ್ದಾರೆ. ಮೂವರು ಪಾರಾಗಿ ಬಂದಿದ್ದಾರೆ. ಮೃತರನ್ನು ಯಶವಂತ​​, ಅಂಜಿನಿ, ಗುರುರಾಜ ಎಂದು ಗುರುತಿಸಲಾಗಿದೆ. ಹೊಸಪೇಟೆಯ ವಿಜಯನಗರ ಕಾಲೇಜ್​ನಲ್ಲಿ ಇಬ್ಬರು ಪಿಯುಸಿ … Continued

ಬದಲಾವಣೆಗೆ ಸಾಧನವಾಗಿ, ಪರಿವರ್ತನೆ ಮಾರ್ಗ ಕರ್ನಾಟಕದಿಂದಲೇ ಆಗಲಿ:ಬಿಜೆಪಿ ಕಾರ್ಯಕಾರಿಣಿಯಲ್ಲಿ ನಡ್ಡಾ ಸಂದೇಶ

ಹೊಸಪೇಟೆ : ಬದಲಾವಣೆ ಅವಶ್ಯ ಹಾಗೂ ಅನಿವಾರ್ಯ. ನಾವು ಬದಲಾವಣೆಯ ಸಾಧನವಾಗಬೇಕು. ದಕ್ಷಿಣ ಭಾರತದಲ್ಲಿ ಪರಿವರ್ತನೆಯ ಮಾರ್ಗ ಕರ್ನಾಟಕದಿಂದ ಆಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಸಂದೇಶವೊಂದನ್ನು ರವಾನಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪಕ್ಷದ ಕಾರ್ಯ ಇನ್ನಷ್ಟು ಆಗಬೇಕು. ದೇಶ … Continued

ಎರಡು ಕಾರ್​ಗಳ ಮಧ್ಯೆ ಡಿಕ್ಕಿ; ಗಾಯಾಳುಗಳನ್ನು ವಿಚಾರಿಸಿ ಆಸ್ಪತ್ರೆಗೆ ಸಾಗಿಸಲು ಕಾರುನೀಡಿ ಬೈಕಿನಲ್ಲಿ ತೆರಳಿದ ಸಚಿವೆ ಶೋಭಾ ಕರಂದ್ಲಾಜೆ

ಹೊಸಪೇಟೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಕಾರು ಸವಾರರಿಗೆ ಸಹಾಯ ಹಸ್ತ ನೀಡಿದ್ದಾರೆ. ಹೊಸಪೇಟೆಯಲ್ಲಿ ಇಂದಿನಿಂದ (ಶನಿವಾರದಿಂದ) ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ರಸ್ತೆಯ ಮುಖಾಂತರ ತೆರಳುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು, ಹೊಸಪೇಟೆ ತಾಲೂಕಿನ ಪಿ.ಕೆ ಹಳ್ಳಿಯ ಬಳಿ ಎರಡು ಕಾರ್​ಗಳ ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ … Continued