ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

 ಹುಬ್ಬಳ್ಳಿ: ನಗರದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ಅತ್ಯಾಚಾರದಿಂದ ಜನಿಸಿದ ನವಜಾತ ಶಿಶುವನ್ನು ಬಾಲಕಿಯ ಪೋಷಕರು ಮತ್ತೊಂದು ಕುಟುಂಬಕ್ಕೆ ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ. ಇದರ ನಡುವೆಯೇ ಬಾಲಕಿ ಇದೀಗ ಮತ್ತೊಮ್ಮೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅತ್ಯಾಚಾರದ ಆರೋಪಿ, ಬಾಲಕಿಯ ಪೋಷಕರು ಹಾಗೂ ಇಬ್ಬರು ಖಾಸಗಿ … Continued

ಹುಬ್ಬಳ್ಳಿ : ಒಳಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

ಹುಬ್ಬಳ್ಳಿ: ಒಳಚರಂಡಿ ಕಾಮಗಾರಿ ವೇಳೆ ಗೋಡೆ ಮಣ್ಣು ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಗುಜರಾತ್ ಭವನದ ಸಮೀಪ ಇರುವ ಕೃಷ್ಣಾ ನಗರದಲ್ಲಿ ಗುರುವಾರ ಸಂಭವಿಸಿದೆ ಎಂದು ವರದಿಯಾಗಿದೆ. ಮಲ್ಲಪ್ಪ ಜೋಗಿ (30) ಮೃತ ಕಾರ್ಮಿಕನಾಗಿದ್ದು, ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದವರು ಎಂದು ಗುರುತಿಸಲಾಗಿದೆ. ಮಹಾನಗರ ಪಾಲಿಕೆಯಿಂದ ಗುತ್ತಿಗೆ ಪಡೆದು ನಡೆಸುತ್ತಿದ್ದ ಕಾಮಗಾರಿ ವೇಳೆ ದುರಂತ … Continued

4 ಗಂಟೆ ಆಕಾಶದಲ್ಲೇ ಸುತ್ತಾಡಿದ ಹೈದರಾಬಾದ್-‌ ಹುಬ್ಬಳ್ಳಿ ವಿಮಾನ ; ಪ್ರಯಾಣಿಕರ ಆಕ್ರಂದನ, ಪ್ರಾರ್ಥನೆ….

ಬೆಂಗಳೂರು: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ ವಿಮಾನವೊಂದು ಹವಾಮಾನ ವೈಪರೀತ್ಯಕ್ಕೆ ಸಿಲುಕಿ, ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುದೀರ್ಘ ಹಾರಾಟ ನಡೆಸಿದ ಆತಂಕಕಾರಿ ಘಟನೆ ನಡೆದಿದೆ. ವಿಮಾನವು ತೀವ್ರವಾಗಿ ಅಲುಗಾಡತೊಡಗಿದಾಗ ಪ್ರಯಾಣಿಕರು ಪ್ರಾಣಭಯದಿಂದ ಕೂಗಿಕೊಂಡ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಫ್ಲೈ-91 (Fly91) ಸಂಸ್ಥೆಗೆ ಸೇರಿದ IC3401 ವಿಮಾನವು ಭಾನುವಾರ (ಏ.19) ಮಧ್ಯಾಹ್ನ 3 … Continued

ಕೆಯುಡಬ್ಲ್ಯುಜೆ ರಾಜ್ಯ ಸಮಿತಿಗೆ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನಾಮನಿರ್ದೇಶನ

ಹುಬ್ಬಳ್ಳಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ( ಕೆಯುಡಬ್ಲ್ಯುಜೆ) ರಾಜ್ಯ ಕಾರ್ಯಕಾರಿ ಸಮಿತಿಗೆ ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನಾಮನಿರ್ದೇಶನಗೊಂಡಿದ್ದಾರೆ. ಏಪ್ರಿಲ್‌ 12ರಂದು ಬೀದರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ ಈ ನಾಮನಿರ್ದೇಶನ ಮಾಡಿದ್ದಾರೆ. ಹುಬ್ಬಳ್ಳಿ ಸಂಜೆ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ಗಂಗೊಳ್ಳಿಯವರು ಈ ಹಿಂದೆ … Continued

ಹುಬ್ಬಳ್ಳಿ: 6 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಉಪ ಆಯುಕ್ತ

ಹುಬ್ಬಳ್ಳಿ: ತೆರಿಗೆ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರನ್ನು (Deputy Commissioner) ಲೋಕಾಯುಕ್ತ ಪೊಲೀಸರು ಸೋಮವಾರ ರೆಡ್‌ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತ ಅಧಿಕಾರಿಯನ್ನು ಭರತಕುಮಾರ ಹೆಗಡೆ (48) ಎಂದು ಗುರುತಿಸಲಾಗಿದೆ. ಅಂಕೋಲಾ ಮೂಲದ ಉದ್ಯಮಿ ವಿಶ್ವಜೀತ ನಾಯಕ್ (53) ಎಂಬವರಿಂದ 6 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾ … Continued

ಹುಬ್ಬಳ್ಳಿ : ‘ರೀಲ್ಸ್‌’ಗಾಗಿ ಆಡಿ ಕಾರು-ಬೈಕ್ ಸ್ಟಂಟ್; ಬಿಜೆಪಿ ಮುಖಂಡನ ಮಗ ಸಾವು

ಹುಬ್ಬಳ್ಳಿ: ಕ್ರ್ಯಾಶ್ ರೀಲ್ಸ್‌ ವಿಡಿಯೋ (Reels) ಮಾಡಲು ಹೋಗಿ ಬಿಜೆಪಿ ಮುಖಂಡನ ಪುತ್ರ ಗುರುವಾರ ಮೃತಪಟ್ಟಿದ್ದಾನೆ. ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಷ ಸಂಗಳದ (15) ಮೃತ ಬಾಲಕ ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ರಜೆಗಾಗಿ ಹುಬ್ಬಳ್ಳಿಯ (Hubballi news) ಮನೆಗೆ ಬಂದಿದ್ದ ನಮೀಷ ಗುರುವಾರ ಸಂಜೆ ತನ್ನ ಸ್ನೇಹಿತನ ಜೊತೆ ಸೇರಿ ಶೇಜವಾಡ್ಕರ ಪ್ಲಾಟ್‌ಗೆ … Continued

ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ…!

ಹುಬ್ಬಳ್ಳಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ನನಗೆ ಬೇಸರವಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ಲಿಂಗರಾಜ ಪಾಟೀಲ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಪಕ್ಷ … Continued

ವೀಡಿಯೊ..| ರಣಜಿ ಫೈನಲ್‌ ನಲ್ಲಿ ಜಮ್ಮು-ಕಾಶ್ಮೀರ ತಂಡಕ್ಕೆ ಹುರಿದುಂಬಿಸಲು ಹುಬ್ಬಳ್ಳಿಗೆ ಬಂದ ಸಿಎಂ ಓಮರ್ ಅಬ್ದುಲ್ಲಾ…!

ಹುಬ್ಬಳ್ಳಿ : ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಕ್ರಿಕೆಟ್ ತಂಡಗಳ ನಡುವೆ ಇಲ್ಲಿನ ಕೆ.ಎಸ್.ಸಿ.ಎ (KSCA) ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ವೀಕ್ಷಿಸಲು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಶುಕ್ರವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿದ್ದು, ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ … Continued

ವೀಡಿಯೊ | ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ : ಕರ್ನಾಟಕ ಆಟಗಾರನಿಗೆ ತಲೆಯಿಂದ ಡಿಚ್ಚಿ ಹೊಡೆದ ಜಮ್ಮು ತಂಡದ ನಾಯಕ

ಹುಬ್ಬಳ್ಳಿ: ಇಲ್ಲಿನ ಕೆ.ಎಸ್.ಸಿ.ಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವಿನ 2025-26ರ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯದ ಎರಡನೇ ದಿನದಂದು ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಜಮ್ಮು-ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಅವರು ಕರ್ನಾಟಕದ ಫೀಲ್ಡರ್ ಕೆ.ವಿ. ಅನೀಶ್ ಅವರಿಗೆ ತಲೆಯಿಂದ ಡಿಚ್ಚಿ ಹೊಡೆದ (Headbutt) ಪ್ರಸಂಗ ನಡೆದಿದೆ. ಜಮ್ಮು-ಕಾಶ್ಮೀರ ಇನಿಂಗ್ಸ್‌ನ 101ನೇ … Continued

ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಹಿನ್ನೆಲೆ ಗಾಯಕ ಸೋನು ನಿಗಮ್ ಭೇಟಿ

ಹುಬ್ಬಳ್ಳಿ : ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಸೋಮವಾರ (ಫೆ.9) ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ್ದ ಗಾಯಗ ಸೋನು ನಿಗಮ್ ಸೋಮವಾರ ಬೆಳಿಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದರು. ಸಿದ್ಧಾರೂಢರ ದರ್ಶನ ಪಡೆದ ಅವರು ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. … Continued