ನೇಹಾ ಹಿರೇಮಠ ಹತ್ಯೆ ಪ್ರಕರಣ : 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

ಹುಬ್ಬಳ್ಳಿ :   ಹುಬ್ಬಳ್ಳಿಯ ಬಿವಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ನ್ಯಾಯಾಲಯಕ್ಕೆ ಸೋಮವಾರ ಸುಮಾರು 483 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಏಪ್ರಿಲ್ 18ರಂದು ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ … Continued

ಜುಲೈ 15ರಿಂದ ಮುಂಬೈ- ಹುಬ್ಬಳ್ಳಿ- ಮುಂಬೈ ಇಂಡಿಗೋ ವಿಮಾನ ಸೇವೆ ಪುನಾರಂಭ

ಹುಬ್ಬಳ್ಳಿ: ಮುಂಬೈ- ಹುಬ್ಬಳ್ಳಿ- ಮುಂಬೈ ((Mumbai-Hubballi-Mumbai) ಮಧ್ಯೆ ಇಂಡಿಗೋ 6ಇ (Indigo 6e) ವಿಮಾನಯಾನ ಸೇವೆ ಜುಲೈ 15ರಿಂದ ಪುನಾರಂಭಗೊಳ್ಳಲಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಮನವಿ ಮೇರೆಗೆ ಇಂಡಿಗೋ 6 ಇ ವಿಮಾನ ಸಂಚಾರವನ್ನು ಮತ್ತೆ ಶುರು ಮಾಡಲು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ. ಇಂಡಿಗೋ 6ಇ … Continued

ಬೆಂಗಳೂರು ರಾಮೇಶ್ವರಂ‌ ಕೆಫೆ ಸ್ಫೋಟ ಪ್ರಕರಣ: 5ನೇ ಆರೋಪಿ ಬಂಧನ

ನವದೆಹಲಿ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಮತ್ತೊಬ್ಬ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದೆ. ಇದರಿಂದಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧಿತರ ಸಂಖ್ಯೆ ಈಗ ಐದಕ್ಕೇರಿದೆ. ಬಂಧಿತ ಹುಬ್ಬಳ್ಳಿಯ ಶಂಕಿತ ಉಗ್ರನನ್ನು ಶೋಯೆಬ್‌ ಅಹ್ಮದ್‌ ಮಿರ್ಜಾ ಅಲಿಯಾಸ್‌ ಚೋಟು ಎಂದು ಹೇಳಲಾಗಿದೆ. ಈ ಶಂಕಿತ ಹುಬ್ಬಳ್ಳಿ ನಿವಾಸಿ, … Continued

ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ಹುಬ್ಬಳ್ಳಿ : ನಗರದ ವೀರಾಪುರ ಓಣಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಂಜಲಿ ಅಂಬಿಗೇರ ಹತ್ಯೆಯಿಂದ ಮಮನೊಂದು ಆಕೆಯ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶನಿವಾರ (ಮೇ 18) ಅಂಜಲಿ ಹತ್ಯೆ ಖಂಡಿಸಿ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಂಜಲಿ ಸಹೋದರಿ ಯಶೋಧಾ ಎಂಬವರು ಪ್ರತಿಭಟನೆ ವೇಳೆ … Continued

ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

ಹುಬ್ಬಳ್ಳಿ : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಅಂಬಿಗೇರ (20) ಎಂಬ ಯುವತಿ ಹತ್ಯೆ ಆರೋಪಿಯನ್ನು ಗುರುವಾರ ತಡರಾತ್ರಿ ಪೊಲೀಸರು ದಾವಣಗೆರೆ ಬಳಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕೊಲೆ ಆರೋಪಿ ಆಟೋ ಚಾಲಕ ಗಿರೀಶ (ವಿಶ್ವ) ಸಾವಂತ (21) ಎಂಬಾತನನ್ನು ದಾವಣಗೆರೆ ಬಳಿ ರೈಲ್ವೇ ಪೊಲೀಸರ ಸಹಾಯದಿಂದ ಬಂಧಿಸಲಾಗಿದೆ. ರೈಲಿನಿಂದ ಜಿಗಿದು ಗಾಯಗೊಂಡಿದ್ದ ಆರೋಪಿಯನ್ನು … Continued

ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ಹುಬ್ಬಳ್ಳಿ: ಹತ್ಯೆಗೀಡಾದ ನೇಹಾ ಹಿರೇಮಠ (Neha Hiremath) ಮನೆಗೆ ಗುರುವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನೇಹಾ ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಿರೇಮಠ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ನಿಮ್ಮ ಕುಟುಂಬದ ಜೊತೆಗೆ ನಾವಿದ್ದೇವೆ ಅಂತ ಭರವಸೆ ನೀಡಿದರು. … Continued

ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ ಒಳಗೆ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಬಿವಿಬಿ ಕಾಲೇಜಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಎಂಸಿಎ ವಿದ್ಯಾರ್ಥಿನಿಯನ್ನು ನೇಹಾ ಹಿರೇಮಠ ಎಂದು ಗುರುತಿಸಲಾಗಿದ್ದು, ಈಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಎಂದು ಹೇಳಲಾಗಿದೆ. ಈ ದುಷ್ಕೃತ್ಯ ಎಸೆಗಿರುವ … Continued

ಹುಬ್ಬಳ್ಳಿ : ಪಾಲಿಕೊಪ್ಪದಲ್ಲಿ ಶೃಂಗೇರಿ ಜಗದ್ಗುರುಗಳಿಂದ ‘ಶಿವಶಕ್ತಿ ಧಾಮ’ ಲೋಕಾರ್ಪಣೆ

ಹುಬ್ಬಳ್ಳಿ: ವಿಆರ್​ಎಲ್​ ಲಾಜಿಸ್ಟಿಕ್ಸ್‌ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಅವರ ಬಹುದಿನಗಳ ಸಂಕಲ್ಪ ಸಾಕಾರಗೊಂಡಿದ್ದು, ಹುಬ್ಬಳ್ಳಿ ಸಮೀಪದ ಪಾಲಿಕೊಪ್ಪದಲ್ಲಿ ನಿಮಿರ್ಸಲಾದ ಶ್ರೀ ಶಿವಶಕ್ತಿ ಧಾಮದ ಲೋಕಾರ್ಪಣೆಯು ಗುರುವಾರ ನೆರವೇರಿತು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು   ಶಿವಶಕ್ತಿಧಾಮವನ್ನು ಲೋಕಾರ್ಪಣೆ ಮಾಡಿದರು. ಹುಬ್ಬಳ್ಳಿ ಸಮೀಪದ ಪಾಲಿಕೊಪ್ಪದಲ್ಲಿ ನಿಮಿರ್ಸಲಾಗಿರುವ ದೇವಾಲಯಗಳ ಸಮುಚ್ಛಯಕ್ಕೆ “ಶ್ರೀಶಿವಶಕ್ತಿ ಧಾಮ’ … Continued

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ ; ಭರ್ಜರಿ ಸ್ವಾಗತ

ಹುಬ್ಬಳ್ಳಿ: ಮೂವತ್ತು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿ ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ 31 ವರ್ಷಗಳ ನಂತರ ಬಂಧನಕ್ಕೊಳಗಾಗಿದ್ದ ಶ್ರೀಕಾಂತ ಪೂಜಾರಿ ಅವರು ಕೋರ್ಟ್‌ ನಿಂದ ಜಾಮೀನು ದೊರೆತ ಮೇಲೆ 9 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 31 ವರ್ಷಗಳ ಹಿಂದಿನ ರಾಮಜನ್ಮಭೂಮಿ ಹೋರಾಟದ ಗಲಭೆ ಪ್ರಕರಣದಲ್ಲಿ … Continued

ಎರಡು ಕಾರು, ಲಾರಿ ಮಧ್ಯೆ ಸರಣಿ ಅಪಘಾತ : ನಾಲ್ವರು ಸಾವು, ನಾಲ್ವರಿಗೆ ಗಾಯ

ಹುಬ್ಬಳ್ಳಿ: ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ (Dharwad) ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಜನವರಿ 6) ಬೆಳಗಿನ ಜಾವ ಸಂಭವಿಸಿದೆ. ಘಟನೆಯಲ್ಲಿ ಹಾಸನದ ‌ಮೂಲದ ಮೂವರು, ಬೆಂಗಳೂರಿನ ಓರ್ವ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಕಾರು ಹಾಗೂ … Continued