ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ

ಕುಂದಾಪುರ/ಹುಬ್ಬಳ್ಳಿ/ವಿಜಯಪುರ: ಕುಂದಾಪುರ ತಾಲೂಕಿನ ಹಲವಡೆ ಭಾನುವಾರ ಸಂಜೆ ಗಾಳಿ ಮಳೆಯಾಗಿದೆ. ಕೆಲವೆಡೆ ತೋಟದಲ್ಲಿ ಅಡಿಕೆ ಮರಗಳು, ಬಾಳೆ ಗಿಡಗಳು ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದೆ.ಹಲವೆಡೆ ಆಲಿಕಲ್ಲುಗಳೂ ಬಿದ್ದಿವೆ. ಸಿದ್ದಾಪುರ, ಹೊಸಂಗಡಿ, ಹಳ್ಳಿಹೊಳೆ, ಅಜ್ರಿ, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಉಳ್ಳೂರು ಮೊದಲಾದೆಡೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.ಗೋಳಿಯಂಗಡಿ ಪೇಟೆಯಲ್ಲಿ ಧಾರಾಕಾರ ಮಳೆ ಸುರಿದು ವಾರದ ಸಂತೆಗೆ ತೊಂದರೆಯಾಗಿತ್ತು. … Continued

ಹುಬ್ಬಳ್ಳಿ: ವ್ಯಕ್ತಿಗೆ ಸಿಡಿ ಬ್ಲ್ಯಾಕ್ ಮೇಲ್, ಹಣಕ್ಕಾಗಿ ಅಪಹರಿಸಿ ಹಲ್ಲೆ

ಹುಬ್ಬಳ್ಳಿ: ತನ್ನ ಪ್ರೇಯಿಸಿಯೊಂದಿಗಿದ್ದ ಸಮಯದಲ್ಲಿ ಶೂಟ್ ಮಾಡಿದ್ದ ರೌಡಿಗಳ ಗುಂಪೊಂದು ಹಣಕ್ಕಾಗಿ ಪೀಡಿಸಿ, ಹಲ್ಲೆ ಮಾಡಿರುವ ಪ್ರಕರಣ ಗೋಕುಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕುಮಾರಸ್ವಾಮಿ ಎಂಬ ಯುವಕ ತನ್ನ ಪ್ರೇಯಿಸಿ ಜೊತೆಗಿದ್ದಾಗ ಅಕ್ಷಯ ಪಾರ್ಕ್ ನಿವಾಸಿಗಳಾದ ಶಕ್ತಿರಾಜ ದಾಂಡೇಲಿ, ಹಲವರು ಶೂಟ್ ಮಾಡಿದ್ದಾರೆ. ಇದೇ ವೀಡಿಯೋ ಇಟ್ಟುಕೊಂಡು ಕುಮಾರಸ್ವಾಮಿಯನ್ನ ಬ್ಲ್ಯಾಕ್ ಮೇಲ್ ಮಾಡಿದ್ದರು ಎಂದು ದೂರು … Continued

ಸಮುದಾಯ ಭವನಗಳು ಹೊಸ ಚಿಂತನೆಯ ಕಮ್ಮಟಗಳಾಗಲಿ: ಶ್ರೀರಾಮುಲು

ಹುಬ್ಬಳ್ಳಿ: ಇಲಾಖೆಯಿಂದ ನಿರ್ಮಿಸಿರುವ ಸಮುದಾಯ ಭವನಗಳಲ್ಲಿ ಮದುವೆ ಮತ್ತಿತರ ಕಾರ್ಯಕ್ರಮಗಳ ಜೊತೆಗೆ ಸಮಾಜದ ಬಗೆಗಿನ ಚಿಂತನೆಗಳು ಹಾಗೂ ಗೋಷ್ಠಿಗಳು ನಡೆಯಬೇಕು‌. ಸಮುದಾಯ ಭವನಗಳು ಹೊಸ ಚಿಂತನೆಯ ಕಮ್ಮಟಗಳಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಹೇಳಿದರು. ಹುಬ್ಬಳ್ಳಿಯ‌ ಈಶ್ವರ ಹಾಗೂ ಸಂಗೊಳ್ಳಿ ರಾಯಣ್ಣ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೂರು ಕೋಟಿ ಹಾಗೂ … Continued

ಫೆ.೧೬ರಿಂದ ಹುಬ್ಬಳ್ಳಿ-ಮುಂಬೈ ವಿಮಾನ ಸೇವೆ ಆರಂಭ

ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಮುಂಬೈ ನಡುವಿನ ತನ್ನ ವಿಮಾನ ಸೇವೆಯನ್ನು ಫೆಬ್ರವರಿ 16 ರಿಂದ ಪುನರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ವಾರದಲ್ಲಿ ಮೂರು ದಿನ ( ಮಂಗಳವಾರ, ಶುಕ್ರವಾರ ಮತ್ತು ಶನಿವಾರ) ಏರ್​ಬಸ್​ಗಳು ಸಂಚರಿಸಲಿವೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಸುಮಾರು 10 ತಿಂಗಳಿಂದಇದರ ಸಂಚಾರ ಸ್ಥಗಿತಗೊಂಡಿತ್ತು. ಈಗ ಮತ್ತೆ ಆರಂಭವಾಗಲಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ … Continued

ಹುಬ್ಬಳ್ಳಿಗೆ ಬರಲಿದೆ ಏಮ್ಸ್‌ ಆಸ್ಪತ್ರೆ

ಹುಬ್ಬಳ್ಳಿ: ಸ್ಥಾಪಿಸಲು ಉದ್ದೇಶಿಸಿದ್ದ ಪ್ರತಿಷ್ಠಿತ ಆಲ್ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್‌) ಈಗ ಅಲ್ಲಿಂದ ಸ್ಥಳಾಂತರಗೊಳ್ಳಿದ್ದು, ಈಗ ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಜಾಗ ಗುರುತಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಇದುವರೆಗೂ ಶೈಕ್ಷಣಿಕ ಹಾಗೂ ವ್ಯಾಪಾರ ಕ್ಷೇತ್ರದಲ್ಲಿ ಉತ್ತರ ಕರ್ನಾಟಕದ ಹೆಬ್ಬಾಗಿಲಾಗಿದ್ದ ಹುಬ್ಬಳ್ಳಿ-ಧಾರವಾಡ ಈಗ ಆರೋಗ್ಯ ಕ್ಷೇತ್ರದಲ್ಲಿಯೂ ಈಗ ಉತ್ತರ ಕರ್ನಾಟಕದ … Continued