ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡಲು ಪ್ರಧಾನಿ ಮೋದಿಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ … Continued

ಹುಬ್ಬಳ್ಳಿಯಲ್ಲಿ  ಕೇಶವಕುಂಜಕ್ಕೆ ಸಿಎಂ ಭೇಟಿ, ಆರೆಸ್ಸೆಸ್‌ ಪ್ರಮುಖ ಮಂಗೇಶ ಭೇಂಡೆ ಆಶೀರ್ವಾದ ಪಡೆದ ಬೊಮ್ಮಾಯಿ

ಹುಬ್ಬಳ್ಳಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದರು. ನಂತರ ಹುಬ್ಬಳ್ಳಿಯ ಕೇಶವ ಕುಂಜಕ್ಕೆ ಭೇಟಿ ನೀಡಿದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ( ಆರೆಸ್ಸೆಸ್)‌ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಹುಬ್ಬಳ್ಳಿಯ ಆರ್ ಎಸ್ ಎಸ್ ನ … Continued

ಪ್ರಿಯಕರನ ಜೊತೆ ಸೇರಿ ಸೋದರನ ಕೊಲೆ ಪ್ರಕರಣ: ಕೋರ್ಟಿಗೆ ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿದ್ದ ರುಂಡ ಮುಂಡ ಬೇರ್ಡಿಸಿ ಬೇರೆಬೇರೆ ಜಾಗದಲ್ಲಿ ಎಸೆದ ಪ್ರಕರಣದಲ್ಲಿ ನಟಿ ಶನಯಾ ಕಾಟವೇ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಪೊಲೀಸರು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಕೊಲೆಯಾದ … Continued

ಹುಬ್ಬಳ್ಳಿಯಲ್ಲಿ ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ ಕೇಂದ್ರಕ್ಕೆ ಚಾಲನೆ ನೀಡಿದ ಡಿಸಿಎಂ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಡಿಜಿಟಲ್ ಎಕನಾಮಿಯಲ್ಲಿ ಮೊದಲ ಸ್ಥಾನದಲ್ಲಿದೆ. ಸದ್ಯ ರಾಜ್ಯದ ಐಟಿ/ ಬಿಟಿ ವಲಯದಿಂದ 54 ಬಿಲಿಯನ್ ಡಾಲರ್ ದೇಶದ ಆರ್ಥಿಕತೆಗೆ ಸೇರುತ್ತಿದೆ. ಇದನ್ನು 300 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಬೆಂಗಳೂರು ಟೆಕ್ ಸಮಿಟ್‌ಗಿಂತ ಪೂರ್ವಭಾವಿಯಾಗಿ ಹುಬ್ಬಳ್ಳಿಯಲ್ಲಿ ಬರುವ ಸೆಪ್ಟಂಬರ್ ಅಥವಾ ಅಕ್ಟೋಬರ್‌‌ನಲ್ಲಿ ಸಮಾವೇಶ ಆಯೋಜಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ … Continued

ಜೂನ್ 7ರ ವರೆಗೆ ಕಾದುನೋಡಿ ಲಾಕ್‌ಡೌನ್ ಕುರಿತು ನಿರ್ಧಾರ: ಶೆಟ್ಟರ

ಹುಬ್ಬಳ್ಳಿ:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಶೇ.16 ರಷ್ಟಿದೆ. ಪಾಸಿಟಿವ್ ದರ ಕಡಿಮೆಯಾದರೆ ರಾಜ್ಯದಲ್ಲಿ ಲಾಕ್‌ಡೌನ್ ತೆರವು ಮಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಹೇಳಿದ್ದಾರೆ. ಜೂನ್‌ 7 ರ ವರೆಗೆ ಕಾದು ನೋಡಿ ಲಾಕ್ ಡೌನ್ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಕೇಂದ್ರದ … Continued

ಕಾಂಗ್ರೆಸ್ಸೇತರ ಪಕ್ಷ ಏಳು ವರ್ಷ ದೇಶ ಮುನ್ನಡೆಸಿರುವುದು ಭಾರತದಲ್ಲಿ ಐತಿಹಾಸಿಕ ಮೈಲುಗಲ್ಲು: ಸಚಿವ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ಸೇತರ ಪಕ್ಷವೊಂದು ಏಳು ವರ್ಷಗಳ ಕಾಲ ದೇಶ ಮುನ್ನೆಡೆಸಿರುವುದು. ಸ್ವತಂತ್ರ ಭಾರತದಲ್ಲಿ ಐತಿಹಾಸಿಕ ಮೈಲುಗಲ್ಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಬಿಜೆಪಿ ನೇತೃತ್ವದ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ, ಶನಿವಾರ ಕೇಶ್ವಾಪುರ ಮಯೂರಿ ಬಡಾವಣೆ ಉದ್ಯಾನವನವನದಲ್ಲಿ ಆಯೋಜಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮ ಹಾಗೂ ಫುಡ್ … Continued

ಕೊರೊನಾದಿಂದ ಗುಣಮುಖ..ಈಗ ಕೃಷಿ ಕಾಯಕದಲ್ಲಿ ಸಭಾಪತಿ ಹೊರಟ್ಟಿ ..!

ಹುಬ್ಬಳ್ಳಿ: ಜಾಗತಿಕ ಮಹಾಮಾರಿ ಕೋವಿಡ್ ಸೋಂಕಿಗೆ ಒಳಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಾಗಿ ಈಗ ಗುಣಮುಖರಾಗಿರುವ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ಬಸವರಾಜ ಹೊರಟ್ಟಿ ಅವರು ಇದೀಗ ಗೃಹ ನಿಗಾವಣೆಯಲ್ಲಿದ್ದಾರೆ. ಅವರ ನೆಚ್ಚಿನ ಜೀವಸೆಲೆಯಾಗಿರುವ ಹುಬ್ಬಳ್ಳಿ ತಾಲೂಕಿನ ವರೂರು ನಿಸರ್ಗ ತೋಟದ ಮನೆಯಲ್ಲಿರುವ ಬಸವರಾಜ ಹೊರಟ್ಟಿ ಅವರು ತಮ್ಮ ತೋಟದಲ್ಲಿ ಕೃಷಿ ಕಾರ್ಯ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಹೊಲದಲ್ಲಿ … Continued

ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ

ಕುಂದಾಪುರ/ಹುಬ್ಬಳ್ಳಿ/ವಿಜಯಪುರ: ಕುಂದಾಪುರ ತಾಲೂಕಿನ ಹಲವಡೆ ಭಾನುವಾರ ಸಂಜೆ ಗಾಳಿ ಮಳೆಯಾಗಿದೆ. ಕೆಲವೆಡೆ ತೋಟದಲ್ಲಿ ಅಡಿಕೆ ಮರಗಳು, ಬಾಳೆ ಗಿಡಗಳು ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದೆ.ಹಲವೆಡೆ ಆಲಿಕಲ್ಲುಗಳೂ ಬಿದ್ದಿವೆ. ಸಿದ್ದಾಪುರ, ಹೊಸಂಗಡಿ, ಹಳ್ಳಿಹೊಳೆ, ಅಜ್ರಿ, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಉಳ್ಳೂರು ಮೊದಲಾದೆಡೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.ಗೋಳಿಯಂಗಡಿ ಪೇಟೆಯಲ್ಲಿ ಧಾರಾಕಾರ ಮಳೆ ಸುರಿದು ವಾರದ ಸಂತೆಗೆ ತೊಂದರೆಯಾಗಿತ್ತು. … Continued

ಹುಬ್ಬಳ್ಳಿ: ವ್ಯಕ್ತಿಗೆ ಸಿಡಿ ಬ್ಲ್ಯಾಕ್ ಮೇಲ್, ಹಣಕ್ಕಾಗಿ ಅಪಹರಿಸಿ ಹಲ್ಲೆ

ಹುಬ್ಬಳ್ಳಿ: ತನ್ನ ಪ್ರೇಯಿಸಿಯೊಂದಿಗಿದ್ದ ಸಮಯದಲ್ಲಿ ಶೂಟ್ ಮಾಡಿದ್ದ ರೌಡಿಗಳ ಗುಂಪೊಂದು ಹಣಕ್ಕಾಗಿ ಪೀಡಿಸಿ, ಹಲ್ಲೆ ಮಾಡಿರುವ ಪ್ರಕರಣ ಗೋಕುಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕುಮಾರಸ್ವಾಮಿ ಎಂಬ ಯುವಕ ತನ್ನ ಪ್ರೇಯಿಸಿ ಜೊತೆಗಿದ್ದಾಗ ಅಕ್ಷಯ ಪಾರ್ಕ್ ನಿವಾಸಿಗಳಾದ ಶಕ್ತಿರಾಜ ದಾಂಡೇಲಿ, ಹಲವರು ಶೂಟ್ ಮಾಡಿದ್ದಾರೆ. ಇದೇ ವೀಡಿಯೋ ಇಟ್ಟುಕೊಂಡು ಕುಮಾರಸ್ವಾಮಿಯನ್ನ ಬ್ಲ್ಯಾಕ್ ಮೇಲ್ ಮಾಡಿದ್ದರು ಎಂದು ದೂರು … Continued

ಸಮುದಾಯ ಭವನಗಳು ಹೊಸ ಚಿಂತನೆಯ ಕಮ್ಮಟಗಳಾಗಲಿ: ಶ್ರೀರಾಮುಲು

ಹುಬ್ಬಳ್ಳಿ: ಇಲಾಖೆಯಿಂದ ನಿರ್ಮಿಸಿರುವ ಸಮುದಾಯ ಭವನಗಳಲ್ಲಿ ಮದುವೆ ಮತ್ತಿತರ ಕಾರ್ಯಕ್ರಮಗಳ ಜೊತೆಗೆ ಸಮಾಜದ ಬಗೆಗಿನ ಚಿಂತನೆಗಳು ಹಾಗೂ ಗೋಷ್ಠಿಗಳು ನಡೆಯಬೇಕು‌. ಸಮುದಾಯ ಭವನಗಳು ಹೊಸ ಚಿಂತನೆಯ ಕಮ್ಮಟಗಳಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಹೇಳಿದರು. ಹುಬ್ಬಳ್ಳಿಯ‌ ಈಶ್ವರ ಹಾಗೂ ಸಂಗೊಳ್ಳಿ ರಾಯಣ್ಣ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೂರು ಕೋಟಿ ಹಾಗೂ … Continued