ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಮಹಿಳೆ ಸೀಟ್ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ…!

ಹುಬ್ಬಳ್ಳಿ: ಇತ್ತೀಚಿಗೆ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಸಹ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ್ದು ರಾಷ್ಟ್ರಾದ್ಯಂತ ಭಾರೀ ಸುದ್ದಿಯಾಗಿತ್ತು. ಈಗ ರಾಜ್ಯದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಹ ಪ್ರಯಾಣಿಕ ಮಹಿಳೆಯೊಬ್ಬರ ಸೀಟಿನ ಮೇಲೆ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿರುವುದು ವರದಿಯಾಗಿದೆ. ಈ ಘಟನೆ ಮಂಗಳವಾರ ರಾತ್ರಿ ವಿಜಯಪುರದಿಂದ ಮಂಗಳೂರಿಗೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ … Continued

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ನಂತರ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಇಂದು, ಬುಧವಾರ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ … Continued

ಹುಬ್ಬಳ್ಳಿ: ಬ್ಯಾರಿಕೇಡ್‌ ದಾಟಿ ಹಾರ ಹಿಡಿದು ಪ್ರಧಾನಿ ಮೋದಿಯತ್ತ ಓಡಿ ಬಂದಿದ್ಯಾಕೆ ಎಂಬುದಕ್ಕೆ ಕಾರಣ ಹೇಳಿದ 12ರ ಬಾಲಕ

ಹುಬ್ಬಳ್ಳಿ: ನಗರದಲ್ಲಿ ಜನವರಿ 12ರಂದು ನಡೆದ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾಗ ರೋಡ್‌ ಶೋ ನಡೆಸಿದ್ದರು. ಬಿಗಿ ಪೊಲೀಸ್‌ ಬಂದೋಬಸ್ತ್‌ ನಡುವೆಯೇ ಬಾಲಕನೊಬ್ಬ ಬ್ಯಾರಿಕೇಡ್ ದಾಟಿ ಪ್ರಧಾನ ಮಂತ್ರಿಗೆ ಹೂವಿನ ಹಾರ ಹಾಕಲು ಓಡಿ ಬಂದು ದೇಶಾದ್ಯಂತ ಸುದ್ದಿಯಾಗಿದ್ದ. ಈಗ ಪೊಲೀಸರನ್ನು ದಾಟಿ ಆತ ಪ್ರಧಾನಿಗಳ … Continued

26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ : ರನ್‌ವೇ ಸಿದ್ಧವಾಗಿದೆ, ಕೌಶಲ್ಯ ಕಲಿತು ಟೇಕಾಫ್‌ ಆಗಿ ; ಯುವಕರಿಗೆ ಕರೆ

* ಡಿಜಿಟಲ್ ಇಂಡಿಯಾ ಯುವಜನತೆಗೆ ಅವಕಾಶಗಳ ಆಗರ* * ಯುವಶಕ್ತಿಯೇ ದೇಶದ ಶಕ್ತಿ * ಏಕ ಭಾರತ ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕರೆ * ಭಾರತವನ್ನು 3 ನೇ‌ ಅತೀದೊಡ್ಡ ಆರ್ಥಿಕ ಶಕ್ತಿಯಾಗಿಸುವ ಸಂಕಲ್ಪ ಹುಬ್ಬಳ್ಳಿ : ಡಿಜಿಟಲ್ ಇಂಡಿಯಾದ ಪ್ರಸ್ತುತ ಕಾಲಘಟ್ಟದಲ್ಲಿ ಕೌಶಲ್ಯಭರಿತ ಯುವಜನತೆಗೆ ಅವಕಾಶಗಳ ಬಾಗಿಲು ತೆರೆದಿದೆ. ಏಳಿ ಎದ್ದೇಳಿ ಗುರಿ ಮುಟ್ಟುವ … Continued

ಇಂದು ಪ್ರಧಾನಿಯಿಂದ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ : ಮೋದಿಗೆ ಬಿದರಿ ಕಲೆಯ ಸ್ವಾಮಿ ವಿವೇಕಾನಂದರ ಮೂರ್ತಿ, ಗರಗ-ಬೆಂಗೇರಿಯಲ್ಲಿ ತಯಾರಾದ ರಾಷ್ಟ್ರಧ್ವಜದ ಸ್ಮರಣಿಕೆ ಸಮರ್ಪಣೆ

ಧಾರವಾಡ: ಅವಳಿ ನಗರದಲ್ಲಿ ಬುಧವಾರದಿಂದ ಜನವರಿ 16 ರ ವರೆಗೆ ನಡೆಯಲಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಸಂಜೆ 4 ಗಂಟೆಗೆ ಯುವ ಜನೋತ್ಸವವನ್ನು ಉದ್ಘಾಟಿಸಲಿರುವ ಗೌರವಾನ್ವಿತ ಪ್ರಧಾನಮಂತ್ರಿ ಅವರನ್ನು ಜಿಲ್ಲಾಡಳಿತದಿಂದ … Continued

ಇಂದು (ಜ.12) ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಧಾರವಾಡ: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜನವರಿ 12ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಈ ವೇಳೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ … Continued

ಹುಬ್ಬಳ್ಳಿಗೆ ನಾಳೆ ಪ್ರಧಾನಿ ಮೋದಿ ಆಗಮನ : ಹುಬ್ಬಳ್ಳಿ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ಜನವರಿ 12ರಂದು ನಡೆಯುತ್ತಿರುವ 26ನೇ ಯುವಜನೋತ್ಸವ-2023 ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ನಿಮಿತ್ತ ನಗರದಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಹಾಗೂ ಪಾರ್ಕಿಂಗ್ ಸ್ಥಳ ನಿಗದಿಪಡಿಸಲಾಗಿದೆ. ನವಲಗುಂದ ಕಡೆಯಿಂದ ಬರುವ ಬಸ್ಸುಗಳು ಕೆ.ಎಚ್. ಪಾಟೀಲ ರಸ್ತೆ ಶೃಂಗಾರ ಕ್ರಾಸ್ ಬಳಿ ಪ್ರಯಾಣಿಕರನ್ನು ಇಳಿಸಬೇಕು. ಗದಗ ರಸ್ತೆ ವಿನೋಭಾ ನಗರದ ಮೈದಾನದಲ್ಲಿ ವಾಹನಗಳನ್ನು … Continued

ಸ್ಯಾಂಟ್ರೋ ರವಿ ಆಸ್ತಿ ಮುಟ್ಟುಗೋಲಿಗೆ ಸಿಎಂ ಬೊಮ್ಮಾಯಿ ಸೂಚನೆ

ಹುಬ್ಬಳ್ಳಿ: ರೌಡಿಶೀಟರ್ ಹಿನ್ನೆಲೆಯ ಸ್ಯಾಂಟ್ರೊ ರವಿಗೆ ಸೇರಿದ ಆಸ್ತಿಯನ್ನು ಮುಟುಗೋಲು ಹಾಕಿಕೊಳ್ಳಲು ಸೂಚನೆ ನೀಡಲಾಗಿದ್ದು, ಆತನ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಕಾನೂನು ಬಾಹಿರವಾಗಿ ಆಸ್ತಿ ಸಂಪಾದಿಸಿದ್ದನ್ನು ಮುಟ್ಟುಗೋಲು ಹಾಕಿಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಆತನನ್ನು ರಕ್ಷಣೆ ಮಾಡುವ … Continued

ಜನವರಿ 12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು, ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. … Continued

ಉದ್ಯಮಿ ಪುತ್ರ ನಾಪತ್ತೆ ಪ್ರಕರಣ ಭೇದಿಸಿದ ಪೊಲೀಸರು ​: ಕೊನೆಗೂ ಶವ ಪತ್ತೆ, ತಂದೆ ಸೇರಿ ನಾಲ್ವರ ಬಂಧನ, ಮಗನ ಕೊಲೆಗೆ ತಂದೆಯಿಂದಲೇ ಸುಪಾರಿ?!

ಹುಬ್ಬಳ್ಳಿ: ಮಗನ ವಿಪರೀತ ದುಶ್ಚಟ ಮತ್ತು ಕಿರುಕುಳಕ್ಕೆ ಬೇಸತ್ತು ತಂದೆಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆಂದು ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶವ ಕಲಘಟಗಿ ತಾಲೂಕಿನ ಕಾಡಿನಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೊಲೆಯಾದ ಕೇಶ್ವಾಪುರ ಕುಸುಗಲ್ಲ ರಸ್ತೆ ಅರಿಹಂತನಗರದ ಅಖಿಲ (26) ಎಂಬಾತನ ತಂದೆ, ಕಟ್ಟಡ … Continued