ನಟ ಅಲ್ಲು ಅರ್ಜುನ್ ಮನೆಗೆ ನುಗ್ಗಿ ಹಾನಿಗೊಳಿಸಿದ ಗುಂಪು ; 6 ಜನರ ಬಂಧನ

ಹೈದರಾಬಾದ್‌: ಹೈದರಾಬಾದ್‌ನಲ್ಲಿರುವ ತೆಲುಗು ನಟ ಅಲ್ಲು ಅರ್ಜುನ್ ಅವರ ಜೂಬಿಲಿ ಹಿಲ್ಸ್ ನಿವಾಸಕ್ಕೆ ಭಾನುವಾರ ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ ಹಲವಾರು ಸದಸ್ಯರು ನುಗ್ಗಿ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ವಿಶ್ವವಿದ್ಯಾನಿಲಯದ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) 6 ಸದಸ್ಯರನ್ನು ಬಂಧಿಸಿದ್ದಾರೆ ಹಾಗೂ ನಂತರ ಅವರನ್ನು ಜುಬಿಲಿ ಹಿಲ್ಸ್ … Continued

ʼಪುಷ್ಪಾ 2′ ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಸಾವಿನ ಪ್ರಕರಣ ; ಖ್ಯಾತ ನಟ ಅಲ್ಲು ಅರ್ಜುನ್‌ ಬಂಧನ

ಹೈದರಾಬಾದ್: ಕಳೆದ ವಾರ ಹೈದರಾಬಾದ್ ಥಿಯೇಟರ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ಶುಕ್ರವಾರ ಮಧ್ಯಾಹ್ನ ಪೊಲೀಸರು ಬಂಧಿಸಿದ್ದಾರೆ. ಇಂದು, ಶುಕ್ರವಾರ ಬೆಳಿಗ್ಗೆ ಅಲ್ಲು ಅರ್ಜುನ್ ಅವರನ್ನು ಅವರ ಜೂಬಿಲಿ ಹಿಲ್ಸ್ ಮನೆಯಲ್ಲಿ ಬಂಧಿಸಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಯಿತು. ಅಲ್ಲು ಅರ್ಜುನ್‌ ಈಗಾಗಲೇ ತಮ್ಮ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ … Continued

ಸುಳ್ಳು ಭರವಸೆ, ವಂಚನೆ ಮಾಡುವ ಚೀನಾ ಕಾಲ್‌ ಸೆಂಟರ್‌ಗಳ ಕೆಲಸಕ್ಕೆ ಬಲವಂತವಾಗಿ ದೂಡುತ್ತಿದ್ದ ವಂಚಕನನ್ನು 2500 ಕಿಮೀ ಬೆನ್ನಟ್ಟಿ ಹಿಡಿದ ಪೊಲೀಸರು…!

ನವದೆಹಲಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಕಲಿ ಕಾಲ್‌ ಸೆಂಟರ್‌ಗಳ ಮೂಲಕ ಸೈಬರ್‌ ಅಪರಾಧ ಎಸಗಲು ಭಾರತದ ಯುವಕರನ್ನು ಬಲವಂತಪಡಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಶನಿವಾರ ಹೈದರಾಬಾದ್‌ನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಪೊಲೀಸರು ಇದಕ್ಕಾಗಿ 2,500 ಕಿ.ಮೀ. ದೂರದ ವರೆಗೆ ಆತನನ್ನು ಬೆನ್ನು ಹಿಡಿದುಬಂದು ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಬಂಧಿತ ಕಮ್ರಾನ್ ಹೈದರ್ ಅಲಿಯಾಸ್ … Continued

‘ಪುಷ್ಪಾ 2’ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಮಹಿಳೆ ಸಾವು, ಮಗನಿಗೆ ಗಾಯ

ಹೈದರಾಬಾದ್ : ಬುಧವಾರ (ಡಿಸೆಂಬರ್‌ ೪) ಸಂಜೆ ಹೈದರಾಬಾದ್‌ನ ಥಿಯೇಟರ್‌ನಲ್ಲಿ ‘ಪುಷ್ಪಾ 2: ದಿ ರೂಲ್’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ 35 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಮತ್ತು ಅವರ ಒಂಬತ್ತು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಈ ಘಟನೆ ನಡೆದಿದ್ದು, ಚಿತ್ರದ ನಾಯಕ ನಟ ಅಲ್ಲು … Continued

ಮಗನ ಸಾವಿನ ಬಗ್ಗೆ ತಿಳಿಯದೆ ಶವದೊಂದಿಗೆ 4 ದಿನ ಇದ್ದ ದೃಷ್ಟಿ ವಿಕಲಚೇತನ ವೃದ್ಧ ದಂಪತಿ…!

ಹೈದರಾಬಾದ್: 30ರ ಹರೆಯದ ಮಗನ ಶವದ ಜತೆ ವಯೋವೃದ್ಧ, ದೃಷ್ಟಿ ವಿಕಲಚೇತನ ದಂಪತಿ ನಾಲ್ಕು ದಿನಗಳ ಕಾಲ ಇದ್ದಾರೆ. ಅವರಿಗೆ ಆತ ಸತ್ತಿದ್ದಾನೆ ಎಂಬುದೇ ಅವರಿಗೆ ಗೊತ್ತಾಗಿಲ್ಲ. ಹೈದರಾಬಾದ್‌ನ ಬ್ಲೈಂಡ್ಸ್ ಕಾಲೋನಿಯಲ್ಲಿರುವ ದಂಪತಿಯ ಅಕ್ಕಪಕ್ಕದ ಮನೆಯವರು ಇವರ ಮನೆಯಿಂದ ದುರ್ವಾಸನೆ ಹೊರಹೊಮ್ಮುವುದನ್ನು ಗಮನಿಸಿ ಸೋಮವಾರ ಪೊಲೀಸರಿಗೆ ಕರೆ ಮಾಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. … Continued

ವೀಡಿಯೊ…| ಪೆಟ್ರೋಲ್ ತುಂಬುತ್ತಿರುವಾಗಲೇ ಪಂಪ್‌ ನಲ್ಲಿ ಲೈಟರಿನಲ್ಲಿ ಬೆಂಕಿ ಹಚ್ಚಿದ ಕುಡುಕ ; ಭುಗಿಲೆದ್ದ ಬೆಂಕಿ ….!

ಹೈದರಾಬಾದ್: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಪೆಟ್ರೋಲ್ ಪಂಪ್‌ನಲ್ಲಿ ಲೈಟರ್ ಹಚ್ಚಿ ಬೆಂಕಿ ಹಚ್ಚಿದ ಘಟನೆ ಶನಿವಾರ ಸಂಜೆ ಹೈದರಾಬಾದಿನಲ್ಲಿ ನಡೆದಿದ್ದು, ನಂತರ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಚಿರನ್ ಎಂದು ಗುರುತಿಸಲಾಗಿದೆ. ಆತ ಕುಡಿದ ಸ್ಥಿತಿಯಲ್ಲಿ ಕೈಯಲ್ಲಿ ಸಿಗರೇಟ್ ಲೈಟರ್‌ ಹಿಡಿದು … Continued

ಅತಿದೊಡ್ಡ ಸೈಬರ್ ವಂಚನೆಯಲ್ಲಿ ₹ 13 ಕೋಟಿ ಕಳೆದುಕೊಂಡ 75 ವರ್ಷದ ವೃದ್ಧ…!

ಹೈದರಾಬಾದ್: ತೆಲಂಗಾಣದ ಸೈಬರ್ ಸೆಕ್ಯುರಿಟಿ ಬ್ಯೂರೋಗೆ ವ್ಯಕ್ತಿಯೊಬ್ಬರಿಂದ ಅತಿದೊಡ್ಡ ಸೈಬರ್ ಹಣಕಾಸು ವಂಚನೆ ದೂರು ಬಂದಿದ್ದು, 75 ವರ್ಷದ ವ್ಯಕ್ತಿಯೊಬ್ಬರು ₹ 13 ಕೋಟಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತ ವ್ಯಕ್ತಿ ಸಾರ್ವಜನಿಕ ವಲಯದ ಘಟಕದ ಹಿರಿಯ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದರು ಎಂದು ಹೇಳಲಾಗಿದೆ. ಈ ವ್ಯಕ್ತಿ ಜುಲೈ 1 ರಂದು ವಾಟ್ಸ್‌ಆ್ಯಪ್ ಮೂಲಕ ಹೂಡಿಕೆಯ ಪ್ರಸ್ತಾಪವನ್ನು … Continued

ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸಿದ ಪ್ರವಾಸಿಗರು : ತುಂಬಿ ಹರಿಯುತ್ತಿದ್ದ ಹೊಳೆಗೆ ಬಿದ್ದ ಕಾರು…!

ಹೈದರಾಬಾದಿನ ಪ್ರವಾಸಿ ತಂಡವು ಕೇರಳದ ಕೊಟ್ಟಾಯಂ ಜಿಲ್ಲೆಯ ಕುರುಪಂಥರಾ ಪ್ರದೇಶದಲ್ಲಿ ಗೂಗಲ್ ನಕ್ಷೆಗಳನ್ನು ಬಳಸಿಕೊಂಡು ದಾರಿ ಹುಡುಕಲು ಹೋಗಿ ಎಸ್‌ಯುವಿ ಕಾರನ್ನು ಹೊಳೆಗೆ ಹಾರಿಸಿದ ಘಟನೆ ನಡೆದಿರುವುದು ವರದಿಯಾಗಿದೆ. ಶನಿವಾರ ಬೆಳಗಿನ ಜಾವ ಮಹಿಳೆ ಸೇರಿದಂತೆ ನಾಲ್ವರು ಪ್ರವಾಸಿಗರು ಅಲಪ್ಪುಳಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಪ್ರವಾಸಿಗರಿಗೆ ಯಾವುದೇ ಗಾಯಗಳಾಗಿಲ್ಲ ಮತ್ತು ಸಮಯಕ್ಕೆ ಸರಿಯಾಗಿ … Continued

ಪವಿತ್ರಾ ಜಯರಾಮ ಸಾವಿನ ಬೆನ್ನಲ್ಲೇ ಗೆಳೆಯ-ಕಿರುತೆರೆ ನಟ ಚಂದು ಆತ್ಮಹತ್ಯೆ

ಹೈದರಾಬಾದ್ : ಕೆಲ ದಿನಗಳ ಹಿಂದಷ್ಟೇ ಕನ್ನಡ ಹಾಗೂ ತೆಲುಗು ಕಿರುತೆರೆಯ ಜನಪ್ರಿಯ ನಟಿಯಾದ ಪವಿತ್ರ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಈಗ ಗಂಭೀರವಾಗಿ ಗಾಯಗೊಂಡಿದ್ದ ಅವರ ಸ್ನೇಹಿತ ಹಾಗೂ ಕಿರುತೆರೆ ನಟ ಚಂದು ನಟಿ ಪವಿತ್ರಾ ಜಯರಾಮ ಅವರ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಕಾರ್ತಿಕ ದೀಪಂ’, ‘ರಾಧಮ್ಮ ಪೆಲ್ಲಿ’, ‘ತ್ರಿನಯನಿ’ ಮತ್ತು … Continued

ಹೈದರಾಬಾದ್ ಮಳೆ: ಗೋಡೆ ಕುಸಿದು 7 ಕಾರ್ಮಿಕರು ಸಾವು

ಹೈದರಾಬಾದ್: ಮೇ 7 ರ ಮಂಗಳವಾರ ರಾತ್ರಿ ಹೈದರಾಬಾದ್‌ ಮಹಾನಗರದ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ತಡೆಗೋಡೆ ಕುಸಿದು ಏಳು ಕಾರ್ಮಿಕರು ಸಾವಿಗೀಡಾದ ದಾರುಣ ಘಟನೆ ನಡೆದಿದೆ. ತೀವ್ರ ಬಿಸಿಲಿನ ನಂತರ ಹೈದರಾಬಾದ್‌ನಲ್ಲಿ ಭಾರೀ ಮಳೆಯಾಗಿದೆ. ಮೃತ ಕಾರ್ಮಿಕರು ಒಡಿಶಾ ಮತ್ತು ಛತ್ತೀಸ್‌ಗಢ ರಾಜ್ಯದವರಾಗಿದ್ದು, ಉದ್ಯೋಗಕ್ಕಾಗಿ ಹೈದರಾಬಾದ್‌ಗೆ ವಲಸೆ ಬಂದಿದ್ದಾರೆ. ಬಾಚುಪಲ್ಲಿಯ ರೇಣುಕಾ ಕಾಲೋನಿಯಲ್ಲಿ ಅನುಮತಿಯೊಂದಿಗೆ … Continued