ಮಗನ ಸಾವಿನ ಬಗ್ಗೆ ತಿಳಿಯದೆ ಶವದೊಂದಿಗೆ 4 ದಿನ ಇದ್ದ ದೃಷ್ಟಿ ವಿಕಲಚೇತನ ವೃದ್ಧ ದಂಪತಿ…!

ಹೈದರಾಬಾದ್: 30ರ ಹರೆಯದ ಮಗನ ಶವದ ಜತೆ ವಯೋವೃದ್ಧ, ದೃಷ್ಟಿ ವಿಕಲಚೇತನ ದಂಪತಿ ನಾಲ್ಕು ದಿನಗಳ ಕಾಲ ಇದ್ದಾರೆ. ಅವರಿಗೆ ಆತ ಸತ್ತಿದ್ದಾನೆ ಎಂಬುದೇ ಅವರಿಗೆ ಗೊತ್ತಾಗಿಲ್ಲ. ಹೈದರಾಬಾದ್‌ನ ಬ್ಲೈಂಡ್ಸ್ ಕಾಲೋನಿಯಲ್ಲಿರುವ ದಂಪತಿಯ ಅಕ್ಕಪಕ್ಕದ ಮನೆಯವರು ಇವರ ಮನೆಯಿಂದ ದುರ್ವಾಸನೆ ಹೊರಹೊಮ್ಮುವುದನ್ನು ಗಮನಿಸಿ ಸೋಮವಾರ ಪೊಲೀಸರಿಗೆ ಕರೆ ಮಾಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. … Continued

ವೀಡಿಯೊ…| ಪೆಟ್ರೋಲ್ ತುಂಬುತ್ತಿರುವಾಗಲೇ ಪಂಪ್‌ ನಲ್ಲಿ ಲೈಟರಿನಲ್ಲಿ ಬೆಂಕಿ ಹಚ್ಚಿದ ಕುಡುಕ ; ಭುಗಿಲೆದ್ದ ಬೆಂಕಿ ….!

ಹೈದರಾಬಾದ್: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಪೆಟ್ರೋಲ್ ಪಂಪ್‌ನಲ್ಲಿ ಲೈಟರ್ ಹಚ್ಚಿ ಬೆಂಕಿ ಹಚ್ಚಿದ ಘಟನೆ ಶನಿವಾರ ಸಂಜೆ ಹೈದರಾಬಾದಿನಲ್ಲಿ ನಡೆದಿದ್ದು, ನಂತರ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಚಿರನ್ ಎಂದು ಗುರುತಿಸಲಾಗಿದೆ. ಆತ ಕುಡಿದ ಸ್ಥಿತಿಯಲ್ಲಿ ಕೈಯಲ್ಲಿ ಸಿಗರೇಟ್ ಲೈಟರ್‌ ಹಿಡಿದು … Continued

ಅತಿದೊಡ್ಡ ಸೈಬರ್ ವಂಚನೆಯಲ್ಲಿ ₹ 13 ಕೋಟಿ ಕಳೆದುಕೊಂಡ 75 ವರ್ಷದ ವೃದ್ಧ…!

ಹೈದರಾಬಾದ್: ತೆಲಂಗಾಣದ ಸೈಬರ್ ಸೆಕ್ಯುರಿಟಿ ಬ್ಯೂರೋಗೆ ವ್ಯಕ್ತಿಯೊಬ್ಬರಿಂದ ಅತಿದೊಡ್ಡ ಸೈಬರ್ ಹಣಕಾಸು ವಂಚನೆ ದೂರು ಬಂದಿದ್ದು, 75 ವರ್ಷದ ವ್ಯಕ್ತಿಯೊಬ್ಬರು ₹ 13 ಕೋಟಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತ ವ್ಯಕ್ತಿ ಸಾರ್ವಜನಿಕ ವಲಯದ ಘಟಕದ ಹಿರಿಯ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದರು ಎಂದು ಹೇಳಲಾಗಿದೆ. ಈ ವ್ಯಕ್ತಿ ಜುಲೈ 1 ರಂದು ವಾಟ್ಸ್‌ಆ್ಯಪ್ ಮೂಲಕ ಹೂಡಿಕೆಯ ಪ್ರಸ್ತಾಪವನ್ನು … Continued

ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸಿದ ಪ್ರವಾಸಿಗರು : ತುಂಬಿ ಹರಿಯುತ್ತಿದ್ದ ಹೊಳೆಗೆ ಬಿದ್ದ ಕಾರು…!

ಹೈದರಾಬಾದಿನ ಪ್ರವಾಸಿ ತಂಡವು ಕೇರಳದ ಕೊಟ್ಟಾಯಂ ಜಿಲ್ಲೆಯ ಕುರುಪಂಥರಾ ಪ್ರದೇಶದಲ್ಲಿ ಗೂಗಲ್ ನಕ್ಷೆಗಳನ್ನು ಬಳಸಿಕೊಂಡು ದಾರಿ ಹುಡುಕಲು ಹೋಗಿ ಎಸ್‌ಯುವಿ ಕಾರನ್ನು ಹೊಳೆಗೆ ಹಾರಿಸಿದ ಘಟನೆ ನಡೆದಿರುವುದು ವರದಿಯಾಗಿದೆ. ಶನಿವಾರ ಬೆಳಗಿನ ಜಾವ ಮಹಿಳೆ ಸೇರಿದಂತೆ ನಾಲ್ವರು ಪ್ರವಾಸಿಗರು ಅಲಪ್ಪುಳಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಪ್ರವಾಸಿಗರಿಗೆ ಯಾವುದೇ ಗಾಯಗಳಾಗಿಲ್ಲ ಮತ್ತು ಸಮಯಕ್ಕೆ ಸರಿಯಾಗಿ … Continued

ಪವಿತ್ರಾ ಜಯರಾಮ ಸಾವಿನ ಬೆನ್ನಲ್ಲೇ ಗೆಳೆಯ-ಕಿರುತೆರೆ ನಟ ಚಂದು ಆತ್ಮಹತ್ಯೆ

ಹೈದರಾಬಾದ್ : ಕೆಲ ದಿನಗಳ ಹಿಂದಷ್ಟೇ ಕನ್ನಡ ಹಾಗೂ ತೆಲುಗು ಕಿರುತೆರೆಯ ಜನಪ್ರಿಯ ನಟಿಯಾದ ಪವಿತ್ರ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಈಗ ಗಂಭೀರವಾಗಿ ಗಾಯಗೊಂಡಿದ್ದ ಅವರ ಸ್ನೇಹಿತ ಹಾಗೂ ಕಿರುತೆರೆ ನಟ ಚಂದು ನಟಿ ಪವಿತ್ರಾ ಜಯರಾಮ ಅವರ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಕಾರ್ತಿಕ ದೀಪಂ’, ‘ರಾಧಮ್ಮ ಪೆಲ್ಲಿ’, ‘ತ್ರಿನಯನಿ’ ಮತ್ತು … Continued

ಹೈದರಾಬಾದ್ ಮಳೆ: ಗೋಡೆ ಕುಸಿದು 7 ಕಾರ್ಮಿಕರು ಸಾವು

ಹೈದರಾಬಾದ್: ಮೇ 7 ರ ಮಂಗಳವಾರ ರಾತ್ರಿ ಹೈದರಾಬಾದ್‌ ಮಹಾನಗರದ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ತಡೆಗೋಡೆ ಕುಸಿದು ಏಳು ಕಾರ್ಮಿಕರು ಸಾವಿಗೀಡಾದ ದಾರುಣ ಘಟನೆ ನಡೆದಿದೆ. ತೀವ್ರ ಬಿಸಿಲಿನ ನಂತರ ಹೈದರಾಬಾದ್‌ನಲ್ಲಿ ಭಾರೀ ಮಳೆಯಾಗಿದೆ. ಮೃತ ಕಾರ್ಮಿಕರು ಒಡಿಶಾ ಮತ್ತು ಛತ್ತೀಸ್‌ಗಢ ರಾಜ್ಯದವರಾಗಿದ್ದು, ಉದ್ಯೋಗಕ್ಕಾಗಿ ಹೈದರಾಬಾದ್‌ಗೆ ವಲಸೆ ಬಂದಿದ್ದಾರೆ. ಬಾಚುಪಲ್ಲಿಯ ರೇಣುಕಾ ಕಾಲೋನಿಯಲ್ಲಿ ಅನುಮತಿಯೊಂದಿಗೆ … Continued

ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

ಹೈದರಾಬಾದ್: ತೆಲಂಗಾಣ ಪೊಲೀಸರು ರೋಹಿತ್ ವೇಮುಲ (Rohith Vemula) ಸಾವಿನ ಪ್ರಕರಣವನ್ನು ಶುಕ್ರವಾರ ಮುಕ್ತಾಯಗೊಳಿಸಿದ್ದಾರೆ. ಪ್ರಕರಣದಲ್ಲಿನ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಪೊಲೀಸರು ಸಲ್ಲಿಸಿದ ಅಂತಿಮ ವರದಿಯಲ್ಲಿ ರೋಹಿತ್ ವೇಮುಲ ದಲಿತನೇ ಅಲ್ಲ. ಆತ ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ. ಈ ಹೇಳಿಕೆಯನ್ನು … Continued

ವೀಡಿಯೊ…| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

ಇತ್ತೀಚೆಗೆ ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಟ್​ ಆ್ಯಂಡ್ ರನ್ ಪ್ರಕರಣದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ನಂತರ ಮುಂಭಾಗದ ಟೈರ್ ಅಡಿಯಲ್ಲಿ … Continued

ವೀಡಿಯೊ…| ಮನೆಗೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರ ವಿರುದ್ಧ ಹೋರಾಡಿದ ತಾಯಿ-ಮಗಳು ; ಇಬ್ಬರು ದರೋಡೆಕೋರರ ಬಂಧನ : ವೀಕ್ಷಿಸಿ

ಹೈದರಾಬಾದ್ : ಮಾರ್ಷಲ್ ಆರ್ಟ್ಸ್‌ನಲ್ಲಿ ತರಬೇತಿ ಪಡೆದ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳು ಬೇಗಂಪೇಟೆಯಲ್ಲಿರುವ ತಮ್ಮ ಮನೆಯಲ್ಲಿ ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳ ದರೋಡೆ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರ ಮೂಲದ ಇಬ್ಬರು ಆರೋಪಿಗಳು ಮನೆಯನ್ನು ದರೋಡೆ ಮಾಡಲು ಯೋಜನೆ ರೂಪಿಸಿದ್ದರು ಮತ್ತು ದರೋಡೆ ಮಾಡಲು ಮೊದಲೇ ಮನೆಯನ್ನು … Continued

ಮನೆಯಲ್ಲಿ ಮಗಳು-ಆಕೆಯ ಪ್ರಿಯಕರನನ್ನು ಒಟ್ಟಿಗೆ ನೋಡಿದ ನಂತರ ಮಗಳನ್ನೇ ಕೊಂದ ತಾಯಿ…!

ಹೈದರಾಬಾದ್‌ : ಆಘಾತಕಾರಿ ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ತನ್ನ 19 ವರ್ಷದ ಮಗಳನ್ನು ಆಕೆಯ ಪ್ರಿಯಕರನೊಂದಿಗೆ ತಮ್ಮ ಮನೆಯಲ್ಲಿ ಒಟ್ಟಾಗಿ ಇರುವುದನ್ನು ಕಂಡ ನಂತರ ಮಗಳನ್ನೇ ಹತ್ಯೆಗೈದ ಾರೋಪಿತ ಘಟನೆ ಹೈದರಾಬಾದ್‌ ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಜಂಗಮ್ಮ ಎಂದು ಗುರುತಿಸಲಾಗಿದ್ದು, ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ಊಟಕ್ಕೆ ಮನೆಗೆ ಬಂದಿದ್ದಾಗ ಮಗಳು ಭಾರ್ಗವಿ ತನ್ನ … Continued