ಸೆನ್ಯಾರ್’ ನಂತರ ದಕ್ಷಿಣ ಭಾರತಕ್ಕೆ ಈಗ ಮತ್ತೊಂದು ಚಂಡಮಾರುತದ ಭೀತಿ….

ನವದೆಹಲಿ : ಚಂಡಮಾರುತ ‘ಸೆನ್ಯಾರ್’ ದುರ್ಬಲಗೊಳ್ಳುತ್ತಿದ್ದರೂ, ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯಿಂದಿರಲು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗುರುವಾರ ಬಿಡುಗಡೆ ಮಾಡಿದ ತನ್ನ ಬುಲೆಟಿನ್‌ನಲ್ಲಿ, ಹವಾಮಾನ ಇಲಾಖೆಯು ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯನ್ನು ಆವರಿಸಿದ್ದ ವಾಯುಭಾರ ಕುಸಿತವು ತೀವ್ರ ವಾಯುಭಾರ ಕುಸಿತವಾಗಿ ಮಾರ್ಪಟ್ಟಿದೆ … Continued

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ; 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ದಕ್ಷಿಣದ ರಾಜ್ಯಗಳಲ್ಲಿ ಹೈ ಅಲರ್ಟ್…!

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮಾಹಿತಿಯ ಪ್ರಕಾರ, ಮಲೇಷ್ಯಾ ಮತ್ತು ಪಕ್ಕದ ಮಲಕ್ಕಾ ಜಲಸಂಧಿಯ ಮೇಲೆ ಉಂಟಾಗಿರುವ ಸುಳಿಗಾಳಿ ಪ್ರದೇಶವು (well-marked low-pressure area) ಮುಂದಿನ 48 ಗಂಟೆಗಳ ಒಳಗೆ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 25 ರ ಸುಮಾರಿಗೆ ಕೊಮೊರಿನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲ್ಮೈಯಲ್ಲಿನ ಚಂಡಮಾರುತದ ಪರಿಚಲನೆಯು … Continued

ಸೆಪ್ಟೆಂಬರ್ ತಿಂಗಳಲ್ಲಿ ವಿಪರೀತ ಮಳೆ ; ಪ್ರವಾಹ, ಭೂ ಕುಸಿತಗಳು ಸಂಭವಿಸುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ನವದೆಹಲಿ : ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಭಾರೀ ಮಳೆಯಿಂದಾಗಿ ಹಲವಾರು ವಿಪತ್ತುಗಳು ಸಂಭವಿಸಿದ್ದು, ಸೆಪ್ಟೆಂಬರ್‌ ತಿಂಗಳಲ್ಲಿಯೂ ಭಾರತದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತದಂತಹ ಅವಘಡಗಳು ಹಲವೆಡೆ ಸಂಭವಿಸಲಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸರಾಸರಿಯಾಗಿ 167.9 … Continued

ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಜೂನ್ ನಿಂದ ಸೆಪ್ಟೆಂಬರ್ ಅವಧಿಗೆ ಹವಾಮಾನ ಇಲಾಖೆ ತನ್ನ ಮಾನ್ಸೂನ್ ಮುನ್ಸೂಚನೆಯನ್ನು ಸ್ವಲ್ಪ ಪರಿಷ್ಕರಿಸಿದೆ, ದೀರ್ಘಾವಧಿಯ ಸರಾಸರಿಯ 106 ಪ್ರತಿಶತದಷ್ಟು ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದ್ದು, ಇದು ಹಿಂದಿನ ಅಂದಾಜಿನ 105 ಪ್ರತಿಶತಕ್ಕಿಂತ ಹೆಚ್ಚಾಗಿದೆ. ಈ ಮುನ್ಸೂಚನೆಯಲ್ಲಿ ಪ್ಲಸ್ ಅಥವಾ ಮೈನಸ್ ಶೇಕಡಾ 4 ರಷ್ಟು ಸಂಭವನೀಯ ವ್ಯತ್ಯಾಸವಾಗಬಹುದು ಎಂದು ಹೇಳಿದೆ. … Continued

ವಾಡಿಕೆಗಿಂತ ಒಂದು ವಾರಕ್ಕಿಂತ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ…!

ನವದೆಹಲಿ: ನೈಋತ್ಯ ಮಾನ್ಸೂನ್ ಶನಿವಾರ ಕೇರಳವನ್ನು ತಲುಪಿದ್ದು, 2009 ರ ನಂತರ ಭಾರತದ ಮುಖ್ಯ ಭೂಭಾಗಕ್ಕೆ ನೈಋತ್ಯ ಮುಂಗಾರು ಮಳೆ ಇಷ್ಟು ಮೊದಲು ಆಗಮಿಸಿರುವುದು ಇದೇ ಮೊದಲು ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. 2009 ರಲ್ಲಿ, ಮಾನ್ಸೂನ್ ಮೇ 23 ರಂದು ಕೇರಳಕ್ಕೆ ಆಗಮಿಸಿತ್ತು, 1975 ರಿಂದ ಲಭ್ಯವಿರುವ ದತ್ತಾಂಶವು ಮಾನ್ಸೂನ್ 1990 … Continued

ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಕ್ಕೆ ಮಾನ್ಸೂನ್‌ ಪ್ರವೇಶ ; ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

ನವದೆಹಲಿ: ವಾಡಿಕೆಗಿಂತ ಮುಂಚಿತವಾಗಿ ನೈಋತ್ಯ ಮಾನ್ಸೂನ್ ಆಗಮಿಸುತ್ತಿದ್ದು ಈಗಾಗಲೇ ಮಾನ್ಸೂನ್ ಮಾರುತಗಳು ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪ ತಲುಪಿವೆ ಎಂದು ಕೇಂದ್ರ ಹವಾಮಾನ ಇಲಾಖೆ ಮಂಗಳವಾರ ಮಾಹಿತಿ ನೀಡಿದೆ. ಮಂಗಳವಾರ ನೈಋತ್ಯ ಮಾನ್ಸೂನ್ ಮಾರುತಗಳು ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪಗಳು ಮತ್ತು ಉತ್ತರ ಅಂಡಮಾನ್ ಸಮುದ್ರದ … Continued

ಈ ವರ್ಷದ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ; ರೈತರಿಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ನವದೆಹಲಿ: ದೇಶವು ಈ ವರ್ಷ ಉತ್ತಮ ಮಾನ್ಸೂನ್ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಐಎಂಡಿ (IMD) ಮುನ್ಸೂಚನೆ ಪ್ರಕಾರ, ದೇಶವು ಮುಂಬರುವ ಜೂನ್-ಸೆಪ್ಟೆಂಬರ್ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯ ಮಳೆ (ಶೇಕಡಾ 100)ಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಈ ಋತುವಿನ ಮೊದಲ ದೀರ್ಘಾವಧಿಯ ಮುನ್ಸೂಚನೆಯಲ್ಲಿ, ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ … Continued

ಏಪ್ರಿಲ್‌ ನಿಂದ ಜೂನ್‌ ಅವಧಿಯಲ್ಲಿ ಕರ್ನಾಟಕ ಸೇರಿ ದೇಶಾದ್ಯಂತ ತಾಪಮಾನ ಇನ್ನಷ್ಟು ಹೆಚ್ಚಳ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ನವದೆಹಲಿ: ಭಾರತವು ಏಪ್ರಿಲ್‌ನಿಂದ ಜೂನ್‌ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ, ಮಧ್ಯ ಮತ್ತು ಪೂರ್ವ ಭಾರತ ಮತ್ತು ವಾಯುವ್ಯ ಬಯಲು ಪ್ರದೇಶಗಳಲ್ಲಿ ಹೆಚ್ಚಿನ ಶಾಖದ ದಿನಗಳು ಇರುತ್ತವೆ ಎಂದು ಐಎಂಡಿ (IMD) ಸೋಮವಾರ (ಮಾರ್ಚ್ 31) ತಿಳಿಸಿದೆ. ದೇಶಾದ್ಯಂತ ಬಿಸಿಲ ಬೇಗೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪ್ರಖರತೆ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಭಾರತೀಯ … Continued

ತಮಿಳುನಾಡಿನ 12 ಜಿಲ್ಲೆಗಳಿಗೆ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಚೆನ್ನೈ : ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ತಮಿಳುನಾಡಿನ ಹಲವು ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಮತ್ತು ಹಳದಿ ಎಚ್ಚರಿಕೆ ನೀಡಿದೆ. ಹವಾಮಾನದಲ್ಲಿನ ಬದಲಾವಣೆಯು ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಗೆ ಕಾರಣವಾಗಿದೆ. ಆರ್‌ಎಂಸಿ ಚೆನ್ನೈ ದಕ್ಷಿಣ ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯು ತಮಿಳುನಾಡಿನ … Continued

ಕರ್ನಾಟಕದ ಕರಾವಳಿ ಕೆಂಡ : 17 ಕಡೆ 39 ಡಿಗ್ರಿಗಿಂತ ಹೆಚ್ಚಿನ ಉಷ್ಣಾಂಶ ದಾಖಲು ; ಉತ್ತರ ಕನ್ನಡದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ

ಬೆಂಗಳೂರು : ಕರಾವಳಿ ಕರ್ನಾಟಕದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಮಾರ್ಚ್‌ 2 ಮತ್ತು 3ರಂದು ಸಹ ಬಿಸಿಗಾಳಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಸಾವಂತವಾಡಿ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ 41.1 ಡಿಗ್ರಿ ಸೆಲ್ಸಿಯಸ್‌  ಉಷ್ಣಾಂಶ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 17 ಕಡೆ 39 ಡಿಗ್ರಿಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. … Continued