ಕಾರವಾರ | ಸ್ವಾತಂತ್ರ್ಯ ದಿನಾಚರಣೆ : ಮೊಬೈಲ್ ಟಾರ್ಚ್ ಹಿಡಿದು ಭಾಷಣ ಓದಿದ ಸಚಿವ ಲಕ್ಷ್ಮಣ ಸವದಿ

 ಕಾರವಾರ: ಉತ್ತರ ಕನ್ನಡ ಜಿಲ್ಲಾ ಕೇಂದ್ರವಾದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಮಂದ ಬೆಳಕಿದ್ದ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಲಕ್ಷ್ಮಣ ಸವದಿ ಅವರು ಮೊಬೈಲ್ ಟಾರ್ಚ್ ಬೆಳಕನ್ನು ಬಳಸಿ ಭಾಷಣ ಮಾಡಬೇಕಾಯಿತು. ನಗರದ ಕಾಜುಭಾಗದಲ್ಲಿರುವ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. … Continued

ಜೆನ್‌ ಝಡ್‌ನತ್ತ ಮೋದಿ ಫೋಕಸ್: 1 ಕೋಟಿ ಯುವಕರಿಗೆ ಎಐ(AI) ತರಬೇತಿ, ಉಚಿತ ಕೋಚಿಂಗ್ ಸೇರಿ 6 ಘೋಷಣೆಗಳು

ನವದೆಹಲಿ : ಕಳೆದ ತಿಂಗಳು ಪರೀಕ್ಷಾ ಪತ್ರಿಕೆ ಸೋರಿಕೆಯ ವಿರುದ್ಧ ನಡೆದ ಬೃಹತ್ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಜನರಲ್ ಝಡ್ ಅವರ ಆಕಾಂಕ್ಷೆಗಳು ಮತ್ತು ‘ಯುವ ಶಕ್ತಿ’ಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದರು. ದೇಶದ ಯುವಶಕ್ತಿ, ಶಿಕ್ಷಣ, ಕ್ರೀಡೆ, ತಂತ್ರಜ್ಞಾನ, ನಾಗರಿಕ ರಕ್ಷಣೆ ಹಾಗೂ ಇಂಧನ … Continued

ಭಾರತದ ಅಭಿವೃದ್ಧಿಗೆ ‘ಸಪ್ತಧಾರೆ’ ಮಂತ್ರ : ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಮುಂದಿಟ್ಟ 7 ʼಶಕ್ತಿ ಸೂತ್ರʼಗಳು

ನವದೆಹಲಿ: ಭಾರತವನ್ನು ಆತ್ಮನಿರ್ಭರ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ದೇಶದ ಆರ್ಥಿಕತೆ, ತಂತ್ರಜ್ಞಾನ, ರಕ್ಷಣಾ ಸಾಮರ್ಥ್ಯ ಮತ್ತು ಜಾಗತಿಕ ಪ್ರಭಾವವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ‘ಶಕ್ತಿಯ ಸಪ್ತಧಾರೆ’ ಎಂಬ ಏಳು ಪ್ರಮುಖ ಶಕ್ತಿಧಾರೆಗಳನ್ನು ದೇಶದ ಮುಂದಿಟ್ಟಿದ್ದಾರೆ. ಶನಿವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, … Continued

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ | ರಾಜಕೀಯ ವಿವಾದಕ್ಕೆ ಕಾರಣವಾದ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಆಸನ ವ್ಯವಸ್ಥೆ

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ “ಐದನೇ ಸಾಲಿನಲ್ಲಿ ಆಸನ ವ್ಯವಸ್ಥೆ” ಮಾಡಿರುವುದು ರಾಜಕೀಯ ವಿವಾದಕ್ಕ ಕಾರಣವಾಗಿದೆ. ಹಾಗೂ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಸರ್ಕಾರ ಗೌರವ ಕೊಡುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಐದನೇ … Continued

ಜಾತ್ಯತೀತ ನಾಗರಿಕ ಸಂಹಿತೆ ಕಾಲದ ಅಗತ್ಯ : ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಬಲವಾಗಿ ಪ್ರತಿಪಾದಿಸಿದ ಪ್ರಧಾನಿ ಮೋದಿ

ನವದೆಹಲಿ : ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ ಅಗತ್ಯದ ಬಗ್ಗೆ ಬಲವಾಗಿ ಪ್ರತಿಪಾದನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶವನ್ನು ವಿಭಜಿಸುವ ಕಾನೂನುಗಳಿಗೆ ಆಧುನಿಕ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅದನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. “ಸುಪ್ರೀಂಕೋರ್ಟ್ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪದೇ ಪದೇ ಚರ್ಚೆಗಳನ್ನು ನಡೆಸಿದೆ, ಆದೇಶಗಳನ್ನು ನೀಡಿದೆ, … Continued

ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು

ಮಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ವರದಿಯಾಗಿದೆ. ಮೃತರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎಂದು ಗುರುತಿಸಲಾಗಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. … Continued

ಸ್ವಾತಂತ್ರ್ಯ ದಿನದಂದು 21-ಗನ್ ಸೆಲ್ಯೂಟ್‌ಗೆ ಸ್ವದೇಶಿ ಬಂದೂಕು ಬಳಕೆ: ರಕ್ಷಣಾ ಸಚಿವಾಲಯ

ನವದೆಹಲಿ: ಆತ್ಮನಿರ್ಭರ ಭಾರತದ ಕನಸನ್ನು ಬಲಪಡಿಸುವ ಪ್ರಯತ್ನದಲ್ಲಿ, 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿಧ್ಯುಕ್ತ 21-ಗನ್ ಸೆಲ್ಯೂಟ್‌ಗೆ ಭದ್ರತಾ ಪಡೆಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಬಂದೂಕುಗಳನ್ನು ಬಳಸುತ್ತವೆ ಎಂದು ಭಾರತದ ರಕ್ಷಣಾ ಕಾರ್ಯದರ್ಶಿ ಡಾ. ಅಜಯ್ ಕುಮಾರ್ ಹೇಳಿದ್ದಾರೆ.. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದೆ ನಾವು ಬ್ರಿಟಿಷ್ ಒಂದು ಪೌಂಡ್ ಗನ್ ಅನ್ನು ಬಳಸುತ್ತಿದ್ದೆವು, ಆದರೆ … Continued