ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಹೆಚ್ಚಳ : ಮಹತ್ವದ ‘ಇಂಡಿಯಾ’ ಮೈತ್ರಿಕೂಟದ ಸಭೆಗೆ ಸ್ಟಾಲಿನ್ ಗೈರು !

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ದಕ್ಷಿಣ ಭಾರತದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ವಿಪಕ್ಷಗಳ ರಾಷ್ಟ್ರೀಯ ಒಕ್ಕೂಟವಾದ ‘ಇಂಡಿಯಾ’ (INDIA)ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ತಮಿಳುನಾಡಿನಲ್ಲಿ ಉಂಟಾದ ರಾಜಕೀಯ ಮರುಮೈತ್ರಿಯಿಂದ ಬೇಸತ್ತಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK), ಜೂನ್ 8 ರಂದು ನವದೆಹಲಿಯಲ್ಲಿ ಕರೆಯಲಾಗಿರುವ ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆಯನ್ನು ಬಹಿಷ್ಕರಿಸಲು … Continued

ಹೀಗಾದ್ರೆ ಇಂಡಿಯಾ ಮೈತ್ರಿಕೂಟ ವಿಸರ್ಜಿಸುವುದು ಒಳಿತು…: ದೆಹಲಿ ಚುನಾವಣೆಯಲ್ಲಿ ಎಎಪಿ-ಕಾಂಗ್ರೆಸ್ ಪ್ರತ್ಯೇಕ ಸ್ಪರ್ಧೆ ಬಗ್ಗೆ ಒಮರ್ ಅಬ್ದುಲ್ಲಾ

ನವದೆಹಲಿ: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕತ್ವ ಅಥವಾ ಕಾರ್ಯಸೂಚಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಕಳೆದ ವರ್ಷ ಸಂಸತ್ತಿನ ಚುನಾವಣೆಗಾಗಿ ಇಂಡಿಯಾ ಮೈತ್ರಿಕೂಟ ರಚಿಸಿದ್ದರೆ ಅದನ್ನು ವಿಸರ್ಜಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿರುವ ದೆಹಲಿ ವಿಧಾನಸಭಾ … Continued

ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ನಾಟ್‌ ಓಕೆ..? ಆಪ್ ಜೊತೆ ಮೈತ್ರಿ ಇಲ್ಲ ; ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್‌ ಪಕ್ಷವು ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದು, ಏಕಾಂಗಿಯಾಗಿ ಸ್ಪರ್ಧಿವುದಾಗಿ ಶುಕ್ರವಾರ ಪ್ರಕಟಿಸಿದೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 70 ಸ್ಥಾನಗಳಲ್ಲಿ ಪಕ್ಷವು ಸ್ವಂತವಾಗಿ ಸ್ಪರ್ಧಿಸಲಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಹೇಳಿದ್ದಾರೆ. ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ … Continued

ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued

ಈ ಸಲದ ಚುನಾವಣೆಯಲ್ಲಿ ಬಿಜೆಪಿ ಗೆದ್ದಷ್ಟು ಸ್ಥಾನಗಳನ್ನು ಮೂರು ಚುನಾವಣೆ ಸೇರಿಸಿದ್ರೂ ಕಾಂಗ್ರೆಸ್ಸಿಗೆ ಗೆಲ್ಲಲು ಸಾಧ್ಯವಾಗಿಲ್ಲ : ಮೋದಿ ಲೇವಡಿ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಸ್ಥಾನಗಳಷ್ಟನ್ನು ಕಾಂಗ್ರೆಸ್‌ ಮೂರು ಚುನಾವಣೆಗಳನ್ನು ಸೇರಿಸಿದರೂ ಅದಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಮತ್ತೊಮ್ಮೆ 100 ಸ್ಥಾನಗಳ ಗಡಿ ದಾಟಲು ವಿಫಲವಾಗಿದ್ದು, ಕಳೆದ ಮೂರು ಚುನಾವಣೆಗಳಲ್ಲಿ ಗೆದ್ದಿದ್ದನ್ನು ಸೇರಿಸಿದರೂ ಅದು ಬಿಜೆಪಿ ಒಂದು ಚುನಾವಣೆಯಲ್ಲಿ ಗೆದ್ದಷ್ಟು ಸ್ಥಾನಗಳಷ್ಟು ಆಗುವುದಿಲ್ಲ ಎಂದು … Continued

ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳು 3 ಅವಕಾಶಗಳನ್ನು ಕಳೆದುಕೊಂಡಿವೆ…ಆದರೆ ಈಗ…: ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ ತಂತ್ರಗಾರ ಪ್ರಶಾಂತ ಕಿಶೋರ ಅವರು, ಪ್ರಧಾನಿ ಮೋದಿ ಸರ್ಕಾರ ಹಿನ್ನಡೆಯ ಸ್ಥಿತಿಯಲ್ಲಿದ್ದಾಗ ವಿಪಕ್ಷಗಳ ಒಕ್ಕೂಟ ಅದರ ಲಾಭ ಪಡೆಯಲು ಅನೇಕ ಬಾರಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಮಮಂದಿರ (ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಂಕುಸ್ಥಾಪನೆ) ಬಗ್ಗೆ ನಿರ್ದಿಷ್ಟವಾಗಿ … Continued

ಜೈಲಿನಲ್ಲಿ ಇನ್ಸುಲಿನ್ ಕೊಡದೆ ಅರವಿಂದ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಬಯಸಿದೆ : ಇಂಡಿಯಾ ಮೈತ್ರಿಕೂಟದ ಸಮಾವೇಶದಲ್ಲಿ ಸುನೀತಾ ಕೇಜ್ರಿವಾಲ್ ಗಂಭೀರ ಆರೋಪ

ರಾಂಚಿ (ಜಾರ್ಖಂಡ್): ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಜೈಲಿನಲ್ಲಿ ಇನ್ಸುಲಿನ್‌ ನೀಡುವುದನ್ನು ನಿರಾಕರಿಸಲಾಗುತ್ತಿದೆ’ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದಾರೆ. ಜಾರ್ಖಂಡದ ರಾಂಚಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಪಕ್ಷಗಳ ಇಂಡಿಯಾ ಮೈತ್ರಿ ಕೂಟದ ‘ನ್ಯಾಯ’ ಚುನಾವಣಾ ಸಮಾವೇಶದಲ್ಲಿ ಅವರು ಈ ಆರೋಪ ಮಾಡಿದ್ದಾರೆ. ನನ್ನ … Continued

ಲೋಕಸಭೆ ಚುನಾವಣೆ : ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌-ಸಮಾಜವಾದಿ ಪಕ್ಷದ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ಲಕ್ನೋ : 2024ರ ಲೋಕಸಭೆ ಚುನಾವಣೆಗೆ ಅಖಿಲೇಶ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು,ಈ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ರವಿದಾಸ್ ಮೆಹ್ರೋತ್ರಾ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ಹಂಚಿಕೊಂಡ ಮೆಹ್ರೋತ್ರಾ ಅವರು, ಉತ್ತರ ಪ್ರದೇಶದಲ್ಲಿ ಸ್ಥಾನ ಹೊಂದಾಣಿಕೆಯಲ್ಲಿ ಸಮಾಜವಾದಿ ಪಕ್ಷ 63 … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆ: ಪಂಜಾಬಿನ ಎಲ್ಲ ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ಆಮ್‌ ಆದ್ಮಿ ಪಕ್ಷ..!

ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ ಹಾಗೂ ಪಂಜಾಬಿನಲ್ಲಿ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ಸೂಚಿಸಿದೆ. ಎಎಪಿ ಪಂಜಾಬ್‌ ರಾಜ್ಯದ ಎಲ್ಲಾ 13 ಲೋಕಸಭಾ ಸ್ಥಾನಗಳು ಮತ್ತು ಚಂಡೀಗಢದಲ್ಲಿ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಘೋಷಣೆಯನ್ನು ಪಕ್ಷದ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಟಿಎಂಸಿ ನಂತ್ರ ಈಗ ಪಂಜಾಬಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದ ಎಎಪಿ ; ಇಂಡಿಯಾ ಮೈತ್ರಿಕೂಟಕ್ಕೆ ಡಬಲ್ ಶಾಕ್‌…!

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ ಸಿಂಗ್‌ ಮಾನ್ ಅವರು ಲೋಕಸಭೆ ಚುನಾವನೆಯಲ್ಲಿ ಪಂಜಾಬಿನಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸ್ಪರ್ಧೆಯನ್ನು ಬುಧವಾರ ತಳ್ಳಿಹಾಕಿದ್ದಾರೆ. ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮಿತ್ರಪಕ್ಷಗಳಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ … Continued