ವೀಡಿಯೊ…| ತನ್ನ ವಾಯುನೆಲೆಗಳ ಮೇಲೆ ಭಾರತ ದಾಳಿ ನಡೆಸಿದ್ದನ್ನು ಕೊನೆಗೂ ಬಹಿರಂಗವಾಗಿ ಒಪ್ಪಿಕೊಂಡ ಪಾಕಿಸ್ತಾನ…!

ನವದೆಹಲಿ: ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಭಾರತವು ತನ್ನ ಪ್ರಮುಖ ವಾಯುನೆಲೆಗಳ ಮೇಲಿನ ದಾಳಿ ನಡೆಸಿದೆ ಎಂದು ಪಾಕಿಸ್ತಾನವು ಮತ್ತೊಮ್ಮೆ ಬಹಿರಂಗವಾಗಿ ಒಪ್ಪಿಕೊಂಡಿದೆ. ಭಾರತವು ಅಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಿದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ದೇಶದ ಗಮನಾರ್ಹ ವಾಯು ನೆಲೆಗಳು ಹಾನಿಗೊಳಗಾಗಿವೆ ಎಂದು ಪಾಕಿಸ್ತಾನ ದೃಢಪಡಿಸಿದೆ. ಪಾಕಿಸ್ತಾನದ ಉಪ ಪ್ರಧಾನಿ … Continued

ವೀಡಿಯೊ..| ನಾವು ದಾಳಿ ನಡೆಸುವ ಮೊದಲೇ ಭಾರತ ನಮ್ಮ ವಾಯುನೆಲೆಗಳ ಮೇಲೆ ʼಬ್ರಹ್ಮೋಸ್ʼ ದಾಳಿ ನಡೆಸಿತು ಎಂದು ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ…!

ನವದೆಹಲಿ: ಮೇ 9-10ರ ಮಧ್ಯರಾತ್ರಿ ರಾವಲ್ಪಿಂಡಿಯ ವಿಮಾನ ನಿಲ್ದಾಣ ಸೇರಿದಂತೆ ನಮ್ಮ ಪ್ರಮುಖ ಸೇನಾ ನೆಲೆಗಳ ಮೇಲೆ ಬ್ರಹ್ಮೋಸ್ ಕ್ಷಿಪಣಿಗಳನ್ನು ಉಡಾಯಿಸಿ ನಮ್ಮ ಯೋಜನೆಗಳನ್ನು ಭಾರತವು ವಿಫಲಗೊಳಿಸಿತು ಎಂದು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನದ ಪರವಾಗಿ ನಿಂತ ಕೆಲವೇ ರಾಷ್ಟ್ರಗಳಲ್ಲಿ ಒಂದಾದ ಅಜೆರ್ಬೈಜಾನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪಾಕ್‌ ಪ್ರಧಾನಿ ಷರೀಫ್, … Continued

ಭಾರತದ ಸಾಮರ್ಥ್ಯ ಬಹಿರಂಗ…| ಪಾಕಿಸ್ತಾನದ ಮುರಿದ್ ಸೇನಾ ನೆಲೆಯ ಭೂಗತ ಸೌಲಭ್ಯಗಳ ಮೇಲೆ ದಾಳಿ ನಡೆಸಿದ್ದನ್ನು ತೋರಿಸಿದ ಉಪಗ್ರಹ ಚಿತ್ರಗಳು…!

ನವದೆಹಲಿ: ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಮುರಿಯದ್ ವಾಯುನೆಲೆಯ ಮೇಲೆ ನಡೆದ ವಾಯುದಾಳಿಗಳು ಭೂಗತ ಮಿಲಿಟರಿ ಸೌಲಭ್ಯವನ್ನು ಗುರಿಯಾಗಿರಿಸಿಕೊಂಡಿರಬಹುದು ಎಂದು ಹೊಸದಾಗಿ ಬಿಡುಗಡೆಯಾದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ತೋರಿಸಿವೆ. ಬುಧವಾರದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಪಾಕಿಸ್ತಾನದ ಮುರಿಯದ್ ವಾಯುನೆಲೆಗೆ ವ್ಯಾಪಕ ಹಾನಿಯನ್ನು ಬಹಿರಂಗಪಡಿಸಿವೆ, ಪಾಕಿಸ್ತಾನ ವಾಯುಪಡೆಯ ಭೂಮಿ ಅಡಿಯ ಮಿಲಿಟರಿ ಸೌಲಭ್ಯದಿಂದ … Continued

ವೀಡಿಯೊ…| ಆಪರೇಷನ್ ಸಿಂಧೂರ : ಪಾಕಿಸ್ತಾನದ ಮೇಲೆ ಮತ್ತೊಂದು ಯಶಸ್ವಿ ದಾಳಿಯ ವೀಡಿಯೊ ಬಿಡುಗಡೆ ಮಾಡಿದ ಭಾರತೀಯ ಸೇನೆ

ನವದೆಹಲಿ: ಭಾರತೀಯ ಸೇನೆಯ ಪಶ್ಚಿಮ ಕಮಾಂಡ್ ಭಾನುವಾರ (ಮೇ 18) ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯನ್ನು ನ್ಯಾಯ ಒದಗಿಸಲು ಯೋಜಿಸಲಾಗಿದೆ, ತರಬೇತಿ ನೀಡಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂದು ಹೇಳಿದೆ. ಪಶ್ಚಿಮ ಕಮಾಂಡ್ ‘ಆಪರೇಷನ್ ಸಿಂಧೂರ’ ಯಶಸ್ಸಿನ ಬಗ್ಗೆ ಸೈನಿಕರು ವಿಶ್ವಾಸದಿಂದ ಹೇಳುತ್ತಿರುವುದನ್ನು ತೋರಿಸುವ ವೀಡಿಯೊವನ್ನು X ನಲ್ಲಿ ಪೋಸ್ಟ್ ಮಾಡಿದೆ. ಪೋಸ್ಟ್‌ನಲ್ಲಿ “ಯೋಜಿಸಲಾಗಿದೆ, ತರಬೇತಿ ನೀಡಲಾಗಿದೆ … Continued

ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ…!

ನವದೆಹಲಿ: ಮೇ 10 ರಂದು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಅದರ ವಾಯುಪಡೆಯ ಮೂಲಸೌಲಭ್ಯಗಳಲ್ಲಿ ಶೇಕಡಾ 20 ರಷ್ಟು ನಾಶವಾಗಿದೆ ಮತ್ತು ಸ್ಕ್ವಾಡ್ರನ್ ಲೀಡರ್‌ ಸೇರಿದಂತೆ 50 ಕ್ಕೂ ಹೆಚ್ಚು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಉಲ್ಲೇಖಿಸಿದ ಕೆಲವು ವರದಿಗಳು ತಿಳಿಸಿವೆ. ಈ ದಾಳಿಯು ಪಾಕಿಸ್ತಾನದ ಪ್ರಮುಖ ಶಸ್ತ್ರಾಸ್ತ್ರ … Continued

ಆಪರೇಷನ್ ಸಿಂಧೂರ : ಬ್ರಹ್ಮೋಸ್ ಕ್ಷಿಪಣಿ ಬಳಸಿ ಪಾಕಿಸ್ತಾನದ 11 ವಾಯುನೆಲೆಗಳನ್ನು ನಾಶಮಾಡಿದ ಭಾರತ; ಪಟ್ಟಿ ಇಲ್ಲಿದೆ…

ನವದೆಹಲಿ: ಪಾಕಿಸ್ತಾನದ ವಾಯುನೆಲೆಗಳನ್ನು ಹೊಡೆದುರುಳಿಸಲು ಮತ್ತು ನಾಶಮಾಡಲು ಭಾರತ ಬ್ರಹ್ಮೋಸ್ ಕ್ಷಿಪಣಿಗಳನ್ನು ಬಳಸಿತು. ಪಾಕಿಸ್ತಾನದ ಕನಿಷ್ಠ 11 ವಾಯುನೆಲೆಗಳ ಮೇಲೆ ಭಾರತೀಯ ಪಡೆಗಳು ದಾಳಿ ನಡೆಸಿವೆ. ಪಶ್ಚಿಮ ಗಡಿ ಮತ್ತು ನಿಯಂತ್ರಣ ರೇಖೆ (LoC) ಉದ್ದಕ್ಕೂ ಪಾಕಿಸ್ತಾನದ ಆಕ್ರಮಣಕಾರಿ ಕ್ರಮಗಳಿಗೆ ನಿರ್ಣಾಯಕ ಪ್ರತಿಕ್ರಿಯೆಯಾಗಿ, ಭಾರತೀಯ ಸಶಸ್ತ್ರ ಪಡೆಗಳು ಶನಿವಾರ (ಮೇ 10) ಪಾಕಿಸ್ತಾನದ ತಾಂತ್ರಿಕ ಸೌಲಭ್ಯಗಳು, … Continued

ವೀಡಿಯೊ | ಮೋದಿ ಹೆಸರು ಹೇಳಲು ಹೆದರುವ ರಣಹೇಡಿ..ಸೇನೆಗೆ ಇವ್ರೇನು ಸಂದೇಶ ಕೊಡ್ತಾರೆ ; ಪಾಕ್‌ ಪ್ರಧಾನಿಯನ್ನು ಜರೆದ ಸಂಸದ-ವೀಕ್ಷಿಸಿ

ಭಾರತದೊಂದಿಗಿನ ಗಡಿ ಉದ್ವಿಗ್ನತೆಯ ನಡುವೆ ಶೆಹಬಾಜ್ ಶರೀಫ್‌ಗೆ ಭಾರಿ ಮುಜುಗರವಾಗಿದ್ದು, ಪಾಕಿಸ್ತಾನದ ಸಂಸದರೊಬ್ಬರು ತಮ್ಮದೇ ಪ್ರಧಾನಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು “ಉಚ್ಚರಿಸಲು” ಹೆದರುವ “ಹೇಡಿ” ಎಂದು ಜರೆದಿದ್ದಾರೆ. “ಅವರಿಂದ ಭಾರತದ ವಿರುದ್ಧ ಒಂದೇ ಒಂದು ಹೇಳಿಕೆಯೂ ಬಂದಿಲ್ಲ. ಗಡಿಯಲ್ಲಿ ನಿಂತಿರುವ ಪಾಕಿಸ್ತಾನಿ ಸೈನಿಕರು ಸರ್ಕಾರ ಧೈರ್ಯದಿಂದ ಹೋರಾಡುತ್ತದೆ ಎಂದು ನಿರೀಕ್ಷಿಸುತ್ತಾರೆ. ನಿಮ್ಮ ನಾಯಕ … Continued