ತಮಿಳುನಾಡು ಚುನಾವಣೆ 2026 : ಎನ್‌ಡಿಎ-ಡಿಎಂಕೆ ನಡುವಿನ ಜಿದ್ದಾಜಿದ್ದಿಯಲ್ಲಿ ಗೆಲ್ಲೋದು ಯಾರು ; ‘ಮ್ಯಾಟ್ರಿಜ್’ ಸಮೀಕ್ಷೆ ಹೇಳಿದ್ದೇನು ?

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಕಣ ಸಜ್ಜಾಗುತ್ತಿದ್ದು,  ಆಡಳಿತಾರೂಢ ಡಿಎಂಕೆ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಹಾಗೂ ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ ಎಂದು ‘ಮ್ಯಾಟ್ರಿಜ್’ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯು ಮುನ್ಸೂಚನೆ ನೀಡಿದೆ. ಸೋಮವಾರ ಪ್ರಕಟವಾದ ಈ ಸಮೀಕ್ಷಾ ವರದಿಯು, ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಲ್ಪ … Continued

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ: ಲೋಕಸಭೆಯ ಸಭಾಧ್ಯಕ್ಷ (ಸ್ಪೀಕರ್) ಓಂ ಬಿರ್ಲಾ ಅವರ ಪದಚ್ಯುತಿಗೆ ಕೋರಿ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ ಸದನದಲ್ಲಿ ಸೋಲನುಭವಿಸಿದೆ. ಪ್ರತಿಪಕ್ಷಗಳ ಭಾರಿ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಧ್ವನಿ ಮತದ ಮೂಲಕ ಈ ನಿರ್ಣಯವನ್ನು ತಿರಸ್ಕರಿಸಲಾಯಿತು. ಮತದಾನದ ನಂತರ ಸದನದ ಕಲಾಪವನ್ನು ಗುರುವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು. ಗುರುವಾರ (ಮಾರ್ಚ್‌ 12) … Continued

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಪ್ರತಿಭಟನೆ: ಕಾಂಗ್ರೆಸ್-ಮಿತ್ರಪಕ್ಷಗಳ ನಡುವೆ ಹೆಚ್ಚಿದ ಬಿರುಕು

ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಶೃಂಗಸಭೆ(AI Summit)ಯಲ್ಲಿ ಯುವ ಕಾಂಗ್ರೆಸ್ ನಡೆಸಿದ ಅರೆಬೆತ್ತಲೆ ಪ್ರತಿಭಟನೆಯು ಈಗ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ರಾಜಕೀಯ ಮುಜುಗರವಾಗಿ (Albatross) ಪರಿಣಮಿಸಿದೆ. ಮೊದಲಿಗೆ ವಿಪಕ್ಷಗಳ ‘ಇಂಡಿಯಾ’ (INDIA) ಮೈತ್ರಿಕೂಟದ ಮಿತ್ರಪಕ್ಷಗಳು ಈ ಪ್ರತಿಭಟನೆಯಿಂದ ಅಂತರ ಕಾಯ್ದುಕೊಂಡಿದ್ದವು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗವಾಗಿ ಟೀಕಿಸಿದ ನಂತರ, ಮಿತ್ರಪಕ್ಷಗಳು ಕೂಡ ಧ್ವನಿ ಎತ್ತುತ್ತಿವೆ. … Continued

ಮಮತಾ ಬ್ಯಾನರ್ಜಿಯನ್ನು ಇಂಡಿಯಾ ಮೈತ್ರಿಕೂಟದ ನಾಯಕಿ ಮಾಡಿ, ರಾಹುಲ್‌ ಗಾಂಧಿ ಹಿಂದೆ ಸರಿಯಲಿ..: ಮಣಿಶಂಕರ ಅಯ್ಯರ್ ಹೇಳಿಕೆ

ಕೋಲ್ಕತ್ತಾ: ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, ಈಗ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ರಾಹುಲ್ ಗಾಂಧಿಯವರು ಇಂಡಿಯಾ (INDIA) ಮೈತ್ರಿಕೂಟದ ‘ಮುನ್ನಡೆಸುವ ಸೀಟನ್ನು’ ಪ್ರಾದೇಶಿಕ ಪಕ್ಷಗಳ ನಾಯಕರಿಗೆ ಬಿಟ್ಟುಕೊಡಬೇಕು ಎಂದು ಸಲಹೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದ್ದಾರೆ. ಮಮತಾ ಇಲ್ಲದಿದ್ದರೆ ‘ಇಂಡಿಯಾ’ ಇಲ್ಲ! … Continued

ರಾಜ್ಯಸಭೆ 37 ಸ್ಥಾನಗಳಿಗೆ ಚುನಾವಣೆ : ಎನ್‌ ಡಿಎಗೆ ಹೆಚ್ಚಿನ ಸ್ಥಾನಗಳ ನಿರೀಕ್ಷೆ; ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯ ಭೀತಿ

ನವದೆಹಲಿ: ಮಾರ್ಚ್ 16 ರಂದು 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೇಲ್ಮನೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ತನ್ನ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಿಕೊಳ್ಳುವ ಸೂಚನೆಗಳಿವೆ. ಮಹಾರಾಷ್ಟ್ರ, ಬಿಹಾರ ಮೊದಲಾದ ರಾಜ್ಯಗಳಲ್ಲಿ ವಿರೋಧ ಪಕ್ಷಗಳ ಆಂತರಿಕ ಹಿತಾಸಕ್ತಿಗಳು ಭಿನ್ನವಾಗಿರುವುದರಿಂದ, ಇಂಡಿಯಾ (INDIA) ಮೈತ್ರಿಕೂಟವು ಒಗ್ಗಟ್ಟಾಗಿ ಉಳಿಯುವುದೇ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. … Continued

ಈಗ ಲೋಕಸಭೆ ಚುನಾವಣೆ ನಡೆದರೆ ಗೆಲ್ಲುವುದು ಯಾರು..? : ʼಮೂಡ್ ಆಫ್ ದಿ ನೇಷನ್ʼ ಸರ್ವೆ ಏನು ಹೇಳುತ್ತದೆ…?

2025ರಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಚುನಾವಣಾ ಪ್ರಾಬಲ್ಯವನ್ನು ಮುಂದುವರೆಸಿತು, ದೆಹಲಿ ಮತ್ತು ಬಿಹಾರದಲ್ಲಿ ಗೆಲುವು ಸಾಧಿಸಿತು.  ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಮತ್ತು ಮಹಾರಾಷ್ಟ್ರದ ಇತರ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಭಾರೀ ಗೆಲುವಿನೊಂದಿಗೆ 2026 ಪ್ರಾರಂಭವಾಯಿತು. ಇದೇವೇಳೆ ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಈಗ … Continued

ಬಿಹಾರದಲ್ಲಿ ಹೀನಾಯ ಸೋಲಿನ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ತೀವ್ರ ; ಕಾಂಗ್ರೆಸ್‌ ನಾಯಕತ್ವದ ಮುಂದೆ ದೊಡ್ಡ ಸವಾಲು…

ಬಿಹಾರದಲ್ಲಿ ಭಾರಿ ಹಿನ್ನಡೆಯನ್ನು ಅನುಭವಿಸಿದ ನಂತರ ‘ಇಂಡಿಯಾ’ (INDIA) ಮೈತ್ರಿಕೂಟವು ಅತ್ಯಂತ ಗಂಭೀರವಾದ ಆಂತರಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮೈತ್ರಿಕೂಟದ ಹಲವಾರು ಪ್ರಾದೇಶಿಕ ಅಂಗಪಕ್ಷಗಳು ಕಾಂಗ್ರೆಸ್ ನೇತೃತ್ವದ ಈ ಮೈತ್ರಿಕೂಟದ ಕಾರ್ಯತಂತ್ರ, ನಾಯಕತ್ವ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಬಹಿರಂಗವಾಗಿ ಪ್ರಶ್ನೆಗಳನ್ನು ಎತ್ತುತ್ತಿವೆ. ಇವು ಆರಂಭದಲ್ಲಿ ಅಸಮಾಧಾನದ ಸಣ್ಣ ಮಾತುಗಳಾಗಿದ್ದವು, ಆದರೆ ಬಿಹಾರದ ಚುನಾವಣೆಯಲ್ಲಿ ಮಹಾಘಟಬಂಧನದ ಹೀನಾಯ ಸೋಲಿನ … Continued

ಬಿಹಾರ ಫಲಿತಾಂಶ ; ಅಭೂತಪೂರ್ವ ಮೂರನೇ ನಾಲ್ಕರಷ್ಟು ಬಹುಮತದ ಗೆಲುವಿನತ್ತ ಎನ್‌ ಡಿಎ ; ಇಂಡಿಯಾ ಬ್ಲಾಕ್‌ ಧೂಳೀಪಟ ; ಎಕ್ಸಿಟ್‌ ಪೋಲ್‌ಗಳೂ ತಲೆಕೆಳಗು

ಪಾಟ್ನಾ /ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪುತ್ತಿದ್ದು, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA)ವು ತಾನು ನಿಗದಿಪಡಿಸಿದ್ದ ‘160 ಪಾರ್’ (160ಕ್ಕೂ ಹೆಚ್ಚು) ಗುರಿಯನ್ನು ಸಲೀಸಾಗಿ ದಾಟಿ, 243 ಸದಸ್ಯ ಬಲದ ವಿಧಾನಸಭೆಯಲ್ಲಿ ಅಭೂತಪೂರ್ವ ಮೂರನೇ ನಾಲ್ಕರಷ್ಟು ಬಹುಮತದ ಗೆಲುವಿನತ್ತ ಸಾಗುತ್ತಿದೆ.. ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನಕ್ಕೆ (ಮಹಾ ಮೈತ್ರಿಕೂಟ) ತೀವ್ರ … Continued

ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಆಯ್ಕೆ ; ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದ ನಡೆಯಿತೇ ಅಡ್ಡ ಮತದಾನ..?

ನವದೆಹಲಿ : ಮಂಗಳವಾರ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆ ಎರಡೂ ಸದನಗಳಿಂದ ಚಲಾಯಿಸಲಾದ 752 ಮಾನ್ಯ ಮತಗಳಲ್ಲಿ ಅವರು 452 ಮತಗಳನ್ನು ಪಡೆದರು. ಅವರ ಪ್ರತಿಸ್ಪರ್ಧಿಯಾದ ವಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. … Continued

ನಾಳೆ (ಸೆ.9) ಉಪರಾಷ್ಟ್ರಪತಿ ಚುನಾವಣೆ | ಮತದಾನದಲ್ಲಿ ಪಾಲ್ಗೊಳ್ಳಲ್ಲ ಎಂದು ಘೋಷಿಸಿದ ಬಿಜೆಡಿ, ಬಿಆರ್‌ ಎಸ್‌ : ಲೆಕ್ಕಾಚಾರವೇನು..?

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಮುನ್ನಾ ದಿನವಾದ ಸೋಮವಾರ (ಸೆಪ್ಟೆಂಬರ್‌ 8) ತೆಲಂಗಾಣದ ಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಾಗೂ ಒಡಿಶಾದ ಬಿಜು ಜನತಾ ದಳ (ಬಿಜೆಡಿ) ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆ ವೇಳೆ ಮತದಾನದಿಂದ ದೂರ ಉಳಿಯಲು ನಿರ್ಧರಿಸಿವೆ. ಈ ನಿರ್ಧಾರ ಎನ್‌ಡಿಎ ಅಭ್ಯರ್ಥಿಗೆ ಅನುಕೂಲಕರ ಹಾಗೂ … Continued