ತಮಿಳುನಾಡಿನಲ್ಲಿ 2019ರ ಸೂತ್ರದಂತೆ ಸ್ಥಾನ ಹಂಚಿಕೆ ಮಾಡಿದ ಡಿಎಂಕೆ : ಕಾಂಗ್ರೆಸ್ಸಿಗೆ 9 ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ತನ್ನ ಮಿತ್ರ ಪಕ್ಷವಾದ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ಡಿಎಂಕೆ ಪಕ್ಷವು ತನ್ನ ಇಂಡಿಯಾ ಬ್ಲಾಕ್ ಮಿತ್ರವಾದ ಕಾಂಗ್ರೆಸ್ಸಿಗೆ ತಮಿಳುನಾಡಿನಲ್ಲಿ ಒಂಬತ್ತು ಸ್ಥಾನಗಳನ್ನು ಮತ್ತು ಪುದುಚೇರಿಯಲ್ಲಿ ಒಂದು ಸ್ಥಾನವನ್ನು ನೀಡಿದೆ. ಡಿಎಂಕೆಯ 2019 ರ ಸೀಟು ಹಂಚಿಕೆಯ ಸೂತ್ರದಂತೆ ಈ ಬಾರಿಯೂ … Continued

ಲೋಕಸಭೆ ಚುನಾವಣೆ : ಟೈಮ್ಸ್​ ನೌ-ಇಟಿಜಿ ಸಮೀಕ್ಷೆ ವರದಿ ಪ್ರಕಟ; ಕಾಂಗ್ರೆಸ್ಸಿಗೆ ಕಳೆದ ಚುನಾವಣೆಗಿಂತಲೂ ಕಡಿಮೆ ಸ್ಥಾನ ಎಂದ ಸಮೀಕ್ಷೆ; ಬಿಜೆಪಿಗೆ ಎಷ್ಟು ಸ್ಥಾನ..?

ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತೊಂದು ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಈಗಲೇ ದೇಶದಲ್ಲಿ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ 358-398 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಟೈಮ್ಸ್​ ನೌ ಸುದ್ದಿ ವಾಹಿನಿ- ಇಟಿಜಿ ನಡೆಸಿರುವ ಸಮೀಕ್ಷೆಯಲ್ಲಿ ಒಟ್ಟು 543 ಕ್ಷೇತ್ರಗಳಲ್ಲಿ … Continued

ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ : ಬಿಜೆಪಿ-ಆರ್‌ಎಲ್‌ಡಿ ಮೈತ್ರಿ ಅಂತಿಮ; ಉತ್ತರ ಪ್ರದೇಶದ ೨ ಲೋಕಸಭಾ ಕ್ಷೇತ್ರದಲ್ಲಿ ಆರ್‌ಎಲ್‌ಡಿ ಸ್ಪರ್ಧೆ-ಮೂಲಗಳು

ಲಕ್ನೋ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ರಾಷ್ಟ್ರೀಯ ಲೋಕದಳ (RLD) ಹೆಜ್ಜೆ ಹಾಕಲಿದೆ ಎಂದು ವರದಿಗಳು ತಿಳಿಸಿವೆ. ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಭಾಗವಾಗಲಿದ್ದು, ಭಾರತೀಯ ಜನತಾ ಪಕ್ಷವು (ಬಿಜೆಪಿ) ಆರ್‌ಎಲ್‌ಡಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. 2+1 ಸೂತ್ರವನ್ನು ಎರಡೂ ಪಕ್ಷಗಳು ಒಪ್ಪಿಕೊಂಡಿವೆ ಎಂದು ವರದಿಗಳು ತಿಳಿಸಿವೆ. 2+1 ಸೂತ್ರ   ಉಭಯ ಪಕ್ಷಗಳು … Continued

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ್ರೆ ಶೇ. 50ರಷ್ಟು ಇರುವ ಮೀಸಲಾತಿ ಮಿತಿ ತೆಗೆದುಹಾಕ್ತೇವೆ : ರಾಹುಲ್ ಗಾಂಧಿ

ರಾಂಚಿ : ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಿದರೆ, ರಾಷ್ಟ್ರವ್ಯಾಪಿ ಜಾತಿ ಗಣತಿ ಮತ್ತು ಮೀಸಲಾತಿ ಮೇಲಿನ ಶೇಕಡಾ 50 ಮಿತಿಯನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಜಾತಿ ಗಣತಿಗೆ ಬೇಡಿಕೆ ಬಂದಾಗ ಮತ್ತು … Continued

ಹಿಂದಿ ಭಾಷಿಕ ರಾಜ್ಯಗಳಲ್ಲಿ ಕಾಂಗ್ರೆಸ್‌ 40 ಸ್ಥಾನ ಗೆಲ್ಲುವುದು ಅನುಮಾನ: ಮಮತಾ ಬ್ಯಾನರ್ಜಿ

ಕೋಲ್ಕತ್ತ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ 40 ಸ್ಥಾನಗಳನ್ನು ಪಡೆಯುವ ಬಗ್ಗೆ ಅನುಮಾನವಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ಉಳಿಸಿಕೊಂಡಿರುವ ಬಾಕಿಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಂಗಾಳದ ಮೂಲಕ ಸಂಚರಿಸುವ ಭಾರತ … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಈಗ ಒಡೆದ ಮನೆ..? ಎಎಪಿ, ಟಿಎಂಸಿ ನಂತ್ರ ಈಗ ಪ್ಲಗ್‌ ಎಳೆಯಲು ನಿತೀಶಕುಮಾರ ತಯಾರಿ..?!

ನವದೆಹಲಿ /ಪಾಟ್ನಾ: ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿಮಾಡಿಕೊಳ್ಳಲು ಒಪ್ಪದೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದಲ್ಲಿ ಚುನಾವಣೆ ಮೊದಲೇ ಅಲುಗಾಟ ಶುರುವಾಗಿದೆ. ಇಂದು, ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಮಾರ್ಚ್ 30 ರಂದು ಭಾರತ ಜೋಡಿ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಟಿಎಂಸಿ ನಂತ್ರ ಈಗ ಪಂಜಾಬಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದ ಎಎಪಿ ; ಇಂಡಿಯಾ ಮೈತ್ರಿಕೂಟಕ್ಕೆ ಡಬಲ್ ಶಾಕ್‌…!

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ ಸಿಂಗ್‌ ಮಾನ್ ಅವರು ಲೋಕಸಭೆ ಚುನಾವನೆಯಲ್ಲಿ ಪಂಜಾಬಿನಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸ್ಪರ್ಧೆಯನ್ನು ಬುಧವಾರ ತಳ್ಳಿಹಾಕಿದ್ದಾರೆ. ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮಿತ್ರಪಕ್ಷಗಳಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ … Continued

ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಮುಖದ ಅಗತ್ಯವಿಲ್ಲ, ಮೈತ್ರಿಕೂಟದ ಹೆಸರಲ್ಲೇ ಮತ ಕೇಳಬೇಕು: ಶರದ್ ಪವಾರ್

ನವದೆಹಲಿ: ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ಗೆ ಪ್ರಧಾನಿ ಅಭ್ಯರ್ಥಿಯ ಅಗತ್ಯವಿಲ್ಲ, ಏಕೆಂದರೆ ನಾವು ಮೈತ್ರಿಕೂಟದ ಹೆಸರಿನಲ್ಲಿ ಹೆಸರಿನಲ್ಲಿ ಮತ ಕೇಳಬೇಕು ಎಂದು ಹಿರಿಯ ರಾಜಕಾರಣಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪವಾರ್ ಅವರು, “ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ನಾವು ಭಾವಿಸುತ್ತೇವೆ ಮತ್ತು … Continued

ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರಾಗಿ ಖರ್ಗೆ ನೇಮಕ : ಸಂಚಾಲಕನ ಹುದ್ದೆ ತಿರಸ್ಕರಿಸಿದ ನಿತೀಶಕುಮಾರ; ವರದಿ

ನವದೆಹಲಿ: ಸರಣಿ ಸಭೆಗಳು ಮತ್ತು ಚರ್ಚೆಗಳ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ನ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆಗೆ ಕಾಯಬೇಕಿದೆ ಎಂದು ಕೆಲವು ರಾಷ್ಟ್ರೀಯ ಸುದ್ದಿ ಮಧ್ಯಮಗಳು ವರದಿ ಮಾಡಿವೆ. ಸೀಟು ಹಂಚಿಕೆ ಕಾರ್ಯಸೂಚಿ, “ಭಾರತ್ ಜೋಡೊ ನ್ಯಾಯ … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ? : ಮಮತಾ ಬ್ಯಾನರ್ಜಿ ಪ್ರಸ್ತಾವನೆ, ಅದಕ್ಕೆ ಖರ್ಗೆ ಹೇಳಿದ್ದೇನೆಂದರೆ…

ನವದೆಹಲಿ: ಲೋಕಸಭೆ ಚುನಾವಣೆ ಮುಗಿಯುವವರೆಗೆ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಹೆಸರಿಸುವುದಿಲ್ಲ ಎಂದು ಸೋಮವಾರ ಪ್ರಕಟಿಸಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿಸೆಂಬರ್‌ ೧೯) ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸುವ ಮೂಲಕ 180 ಟರ್ನ್‌ ಹೊಡೆದಿದ್ದಾರೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಮಮತಾ ಬ್ಯಾನರ್ಜಿ … Continued