ಹದಗೆಟ್ಟ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಆರೋಗ್ಯ ; ಆಸ್ಪತ್ರೆಗೆ ದಾಖಲು

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದರೂ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. 52 ವರ್ಷ ವಯಸ್ಸಿನ ವಿನೋದ ಕಾಂಬ್ಳಿ ಅವರು ಇತ್ತೀಚೆಗೆ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕದಲ್ಲಿ ತಮ್ಮ ಬಾಲ್ಯದ ಗೆಳೆಯ ಮತ್ತು ಭಾರತೀಯ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ … Continued

ಪಿಎಫ್ ವಂಚನೆ ಆರೋಪದ ಮೇಲೆ ಅರೆಸ್ಟ್‌ ವಾರಂಟ್ ; ಮೌನ ಮುರಿದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ

ಭವಿಷ್ಯ ನಿಧಿ (ಪಿಎಫ್) ವಂಚನೆ ಆರೋಪದ ಮೇಲೆ ಬಂಧನ ವಾರಂಟ್ ಹೊರಡಿಸಿದ ನಂತರ, ಭಾರತದ ಮಾಜಿ ಕ್ರಿಕೆಟ್‌ ಆಟಗಾರ ರಾಬಿನ್ ಉತ್ತಪ್ಪ ಈ ವಿಷಯದಲ್ಲಿ ಮೌನ ಮುರಿದಿದ್ದಾರೆ. ಅವರು ನಡೆಸುತ್ತಿರುವ ಬಟ್ಟೆ ಕಂಪನಿಯೊಂದರಲ್ಲಿ ಉದ್ಯೋಗಿಗಳ ಪಿಎಫ್ ಗೆ ಸಂಬಂಧಿಸಿದಂತೆ ವಂಚನೆ ಆರೋಪದ ಮೇಲೆ ರಾಬಿನ್‌ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಸುಮಾರು 24 ಲಕ್ಷ … Continued

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಭಾರತದ ಆರ್ ಅಶ್ವಿನ್

ನವದೆಹಲಿ: ಬುಧವಾರ ಬ್ರಿಸ್ಬೇನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಆರ್. ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ನಂತರ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಅಶ್ವಿನ್ ಈ ಘೋಷಣೆ ಮಾಡಿದರು. ಅಶ್ವಿನ್ ಅಡಿಲೇಡ್‌ನಲ್ಲಿ ಐದು ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯವನ್ನು ಆಡಿದರು … Continued

ಚಾಂಪಿಯನ್ಸ್ ಟ್ರೋಫಿ | “ಹೈಬ್ರಿಡ್ ಮಾದರಿ ಒಪ್ಪಿಕೊಳ್ಳಿ ಅಥವಾ…” : ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಅಂತಿಮ ಅವಕಾಶ ನೀಡಿದ ಐಸಿಸಿ…!

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌(ಐಸಿಸಿ) ಪಾಕಿಸ್ತಾನಕ್ಕೆ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿಯನ್ನು ನಡೆಸಲು ಗಡುವು ನೀಡಿದೆ ಎಂದು ವರದಿಯಾಗಿದೆ. ಭಾರತದ ಆಟಗಳನ್ನು ಬೇರೆಡೆ ನಡೆಸಲಾಗುವುದು ಅಥವಾ ಇದಕ್ಕೆ ಒಪ್ಪದಿದ್ದರೆ ನೀವು ಮುಂಬರುವ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ವಹಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳುವಿರಿ ಎಂದು ಐಸಿಸಿ ಎಚ್ಚರಿಸಿದೆ ಎಂದು ವರದಿ ಹೇಳಿದೆ. ಭಾರತದ ತಂಡವು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಬಿಸಿಸಿಐ … Continued

ಭಾರತದ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಅದು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದಕ್ಕೆ ಸರಿಯಬಹುದು ; ವರದಿ

ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಪ್ರಕಾರ, 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದಲೇ ಪಾಕಿಸ್ತಾನ ಹಿಂದಕ್ಕೆ ಸರಿಯಬಹುದು. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ನಂತರ ಅದರ ಆತಿಥೇಯ ಹಕ್ಕುಗಳನ್ನು ಐಸಿಸಿ ಕಸಿದುಕೊಂಡರೆ ಮುಂದಾಗುವ ಸಮಸ್ಯೆ ಬಗೆಹರಿಯುವ ವರೆಗೆ ಯಾವುದೇ ಐಸಿಸಿ ಅಥವಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಂದ್ಯಾವಳಿಗಳಲ್ಲಿ … Continued

ಅಂತಾರಾಷ್ಟ್ರೀಯ-ದೇಶೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಬ್ಯಾಟರ್‌ ಶಿಖರ್ ಧವನ್

ನವದೆಹಲಿ: ಭಾರತದ ಅತ್ಯುತ್ತಮ ವೈಟ್ ಬಾಲ್ ಆರಂಭಿಕ ಬ್ಯಾಟರ್‌ ಗಳಲ್ಲಿ ಒಬ್ಬರಾದ ಶಿಖರ್ ಧವನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಧವನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿಯುತ್ತಿದ್ದರೂ ಲೀಗ್ ಕ್ರಿಕೆಟ್‌ನಲ್ಲಿ – ಪ್ರಮುಖವಾಗಿ ಐಪಿಎಲ್‌ನಲ್ಲಿ ಮುಂದುವರಿಯುವ ಸುಳಿವು ನೀಡಿದ್ದಾರೆ. 2022 ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶದ ವಿರುದ್ಧದ ಏಕದಿನದ ಪಂದ್ಯದಲ್ಲಿ ಭಾರತಕ್ಕಾಗಿ ಕೊನೆಯದಾಗಿ … Continued

ಕೀನ್ಯಾ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ದೊಡ್ಡ ಗಣೇಶ ನೇಮಕ

ಕೀನ್ಯಾ ಕ್ರಿಕೆಟ್ ಮಂಡಳಿಯು ಭಾರತದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ ಅವರನ್ನು ತಮ್ಮ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಿಸಿದೆ. ಕರ್ನಾಟಕ ವೇಗಿ ಇದೀಗ ಕೀನ್ಯಾ ರಾಷ್ಟ್ರೀಯ ತಂಡದ ಪರ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ದೊಡ್ಡ ಗಣೇಶ್ ಅವರ ನೇತೃತ್ವದಲ್ಲಿ ಕೀನ್ಯಾ ತಂಡವು ಮುಂಬರುವ ಐಸಿಸಿ ಡಿವಿಷನ್ 2 ಚಾಲೆಂಜ್ ಲೀಗ್​​ನಲ್ಲಿ ಕಣಕ್ಕಿಳಿಯಲಿದೆ. … Continued

ಕ್ಯಾನ್ಸರ್ ಪೀಡಿತ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ ಗಾಯಕ್ವಾಡಗೆ ಆರ್ಥಿಕ ನೆರವು ಪ್ರಕಟಿಸಿದ ಬಿಸಿಸಿಐ

ನವದೆಹಲಿ: ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಾರತದ ತಂಡದ ಮಾಜಿ ಮುಖ್ಯ ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪ್ರಕಟಿಸಿದೆ. ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ್ವಾಡ್‌ ಅವರಿಗೆ ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಮಂಡಳಿಯ … Continued

ವೀಡಿಯೊ..| T20 ವಿಶ್ವಕಪ್ ಫೈನಲ್ ನಲ್ಲಿ ಸೂರ್ಯಕುಮಾರ ʼಮ್ಯಾಚ್ ಚೇಂಜಿಂಗ್ ಕ್ಯಾಚ್ʼ ಗಿಂತ ಕ್ಷಣದ ಮೊದಲು ರೋಹಿತ್ ಶರ್ಮಾ ಪ್ರತಿಕ್ರಿಯೆ ವೈರಲ್

ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಚರ್ಚೆಯ ವಿಷಯವಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ ಫೈನಲ್‌ನಲ್ಲಿ ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಕ್ರಿಕೆಟ್ ವಲಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ. ಹಾರ್ದಿಕ್ ಪಾಂಡ್ಯ ಎಸೆತವನ್ನು ಡೇವಿಡ್ ಮಿಲ್ಲರ್ ಲಾಂಗ್ ಆಫ್ ಕಡೆಗೆ ಎತ್ತಿ ಬಾರಿಸಿದ ನಂತರ ದಕ್ಷಿಣ ಆಫ್ರಿಕಾದ … Continued

ಟಿ 20 ವಿಶ್ವಕಪ್ 2024 ; ಆಸ್ಟ್ರೇಲಿಯಾ ಮಣಿಸಿ ಸೆಮಿಫೈನಲ್‌ ಪ್ರವೇಶಿಸಿದ ಭಾರತ

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯ): ಸೋಮವಾರ (ಜೂನ್ 24) ಗ್ರಾಸ್ ಐಲೆಟ್‌ನಲ್ಲಿ ನಡೆದ ತಮ್ಮ ಕೊನೆಯ ಸೂಪರ್ 8 ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 24 ರನ್‌ಗಳಿಂದ ಸೋಲಿಸಿದ ನಂತರ ಭಾರತವು T20 ವಿಶ್ವಕಪ್ 2024 ರ ಸೆಮಿಫೈನಲ್ ಪ್ರವೇಶಿಸಿದೆ. ಆಸ್ಟ್ರೇಲಿಯಾ ತಂಡಕ್ಕೆ 20 ಓವರ್‌ಗಳಲ್ಲಿ 181/7 ರನ್‌ ಗಳಿಸಲಷ್ಟೇ ಸಾಧ್ಯವಾಯಿತು. ಗ್ರೂಪ್ 1 ರ ಈ ವಿಜಯವು … Continued