ಭಾರತ ಸಂಬಂಧ ಕೊನೆಗೊಳಿಸಿದರೆ ಕೆನಡಾಕ್ಕೇ ಆರ್ಥಿಕ ಹೊಡೆತ..? : ಕೆನಡಾದಲ್ಲಿ ಪಂಜಾಬ್ ವಿದ್ಯಾರ್ಥಿಗಳ ವಾರ್ಷಿಕ ಶೈಕ್ಷಣಿಕ ಹೂಡಿಕೆಯೇ 68,000 ಕೋಟಿ ರೂ…!

ಚಂಡೀಗಢ (ಪಂಜಾಬ್) : ಭಾರತದ ವಿರುದ್ಧ ಪ್ರಧಾನಿ ಜಸ್ಟಿನ್ ಟ್ರುಡೊ ಅವರ “ಅಸಂಬದ್ಧ” ಆರೋಪದ ನಂತರ ಭಾರತ-ಕೆನಡಾ ಸಂಬಂಧಗಳು ಹಳಸಿದವು. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಆರೋಪಿಸಿದ್ದಾರೆ. ಹೆಚ್ಚುತ್ತಿರುವ ರಾಜತಾಂತ್ರಿಕ ಉದ್ವಿಗ್ನತೆಯು ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರದ ಬಗ್ಗೆ ಕಳವಳಕ್ಕೆ ಕಾರಣವಾಗಿದೆ. ಭಾರತೀಯ ವಿದ್ಯಾರ್ಥಿಗಳು ಕೆನಡಾದಿಂದ … Continued

ಜಿ20 ಸಮಯದಲ್ಲಿ ಭಾರತ ನೀಡಿದ ಅಧ್ಯಕ್ಷೀಯ ಸೂಟ್‌ನಲ್ಲಿ ಉಳಿಯಲು ನಿರಾಕರಿಸಿದ್ದ ಕೆನಡಾದ ಪ್ರಧಾನಿ ಟ್ರುಡೊ : ವರದಿ…!

ನವದೆಹಲಿ: ಭಾರತದಲ್ಲಿ G20 ಶೃಂಗಸಭೆಯ ಸಂದರ್ಭದಲ್ಲಿ ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ನವದೆಹಲಿಯ ದಿ ಲಲಿತ್ ಹೋಟೆಲ್‌ನಲ್ಲಿ ವಿಶೇಷವಾಗಿ ಸಿದ್ಧಪಡಿಸಲಾದ ಅಧ್ಯಕ್ಷೀಯ ಸೂಟ್‌ (ರೂಂ)ನಲ್ಲಿ ಉಳಿಯಲು ನಿರಾಕರಿಸಿದ್ದರು. ಇದು ಹೀಗಾಗಿ ಭಾರತೀಯ ಗುಪ್ತಚರ ಅಧಿಕಾರಿಗಳಲ್ಲಿ ಕಳವಳಕ್ಕೆ ಕಾರಣವಾಗಿತ್ತು ಎಂದು ವರದಿಯೊಂದು ತಿಳಿಸಿದೆ. ಮೂಲಗಳ ಪ್ರಕಾರ, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ನವದೆಹಲಿಯ … Continued

ಮತ್ತೊಂದು ಗೇಮ್ ಚೇಂಜರ್…: ಕಾರ್ಡ್‌ ಇಲ್ಲದೆ ಯುಪಿಐ ಬಳಸಿ ಎಟಿಎಂನಿಂದ ಹಣ ಪಡೆಯುವ ಭಾರತದ ಮೊದಲ ಯುಪಿಐ-ಎಟಿಎಂ ಅನಾವರಣ | ವೀಕ್ಷಿಸಿ

ಮೊಬೈಲ್ ಸಾಧನಗಳ ಮೂಲಕ ತಕ್ಷಣದ ಹಣ ವರ್ಗಾವಣೆಗಾಗಿ ಬಳಸಲಾಗುವ ಏಕೀಕೃತ ಪಾವತಿಗಳ ಇಂಟರ್ಫೇಸ್ (UPI), ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಪಾವತಿ ವಿಧಾನವಾಗಿದೆ. ಮುಂಬೈನಲ್ಲಿ ನಡೆಯುತ್ತಿರುವ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಮಂಗಳವಾರ, ಕಾರ್ಡ್‌ಲೆಸ್ ನಗದು ವಿತ್‌ ಡ್ರಾ ಮಾಡುವ ಯುಪಿಐ ಎಟಿಎಂ (UPI ATM) ಅನ್ನು ಮೊದಲ ಬಾರಿಗೆ ಪ್ರದರ್ಶಿಸಲಾಯಿತು. ‘ಭಾರತದ ಮೊದಲ ಯುಪಿಐ ಎಟಿಎಂ (UPI … Continued

‘ಇಂಡಿಯಾ, ಅದು ಭಾರತ’ ಎಂದು ಸಂವಿಧಾನದಲ್ಲಿದೆ : ಜಿ20 ಆಮಂತ್ರಣ ಪತ್ರದ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಾಂಪ್ರದಾಯಿಕ ‘ಪ್ರೆಸಿಡೆಂಟ್‌ ಆಫ್‌ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್‌ ಆಫ್‌ ಭಾರತʼ ಎಂದು ಬಣ್ಣಿಸುವ ಜಿ20 ಶೃಂಗಸಭೆಯ ಆಮಂತ್ರಣ ಪತ್ರಗಳ ಕುರಿತು ಬುಧವಾರ ಮಾತನಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ ಅವರು, ಸಂವಿಧಾನವನ್ನು ಓದಲು ಪ್ರತಿಯೊಬ್ಬರನ್ನು ಆಹ್ವಾನಿಸುವುದಾಗಿ ಹೇಳಿದ್ದಾರೆ. ಸಂವಿಧಾನದಲ್ಲಿ ‘ಇಂಡಿಯಾ, ಅದು ಭಾರತ’ ಎಂದು ಇದೆ ಎಂದು ಅವರು … Continued

‘ನಾನು ನಿರಾಸೆಗೊಂಡಿದ್ದೇನೆ, ಆದರೆ…”: ದೆಹಲಿಯ ಜಿ20 ಶೃಂಗಸಭೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅನುಪಸ್ಥಿತಿ ಬಗ್ಗೆ ಅಮೆರಿಕ ಅಧ್ಯಕ್ಷ ಬೈಡನ್‌

ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಈ ವಾರ ಭಾರತ ಭೇಟಿಯನ್ನು ಎದುರು ನೋಡುತ್ತಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪಾಲ್ಗೊಳ್ಳದಿರುವ ಬಗ್ಗೆ ಅವರು ನಿರಾಸೆ ವ್ಯಕ್ತಪಡಿಸಿದ್ದಾರೆ. ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಬೈಡನ್‌ ಸೆಪ್ಟೆಂಬರ್ 7 ರಂದು ಭಾರತಕ್ಕೆ ಪ್ರಯಾಣಿಸಲಿದ್ದಾರೆ ಎಂದು ಶ್ವೇತಭವನವು … Continued

ವಿಪಕ್ಷಗಳ ಒಕ್ಕೂಟಕ್ಕೆ ʼಇಂಡಿಯಾʼ ಎಂದು ಹೆಸರಿಡಲು ಬಿಹಾರ ಸಿಎಂ ನಿತೀಶಕುಮಾರ ವಿರೋಧಿಸಿದ್ದು ಏಕೆ…?

ಬೆಂಗಳೂರು : ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರು ವಿರೋಧ ಪಕ್ಷಗಳ ಮೈತ್ರಿಕೂಟವನ್ನು ‘ಇಂಡಿಯಾ’ (Indian National Developmental Inclusive Alliance) ಎಂದು ಹೆಸರಿಡಲು ಉತ್ಸುಕರಾಗಿರಲಿಲ್ಲ ಎಂದು ವರದಿಗಳು ತಿಳಿಸಿವೆ. ಏಕೆಂದರೆ ಅದರಲ್ಲಿ ‘ಎನ್‌ಡಿಎ’ ಇದೆ. ಬೆಂಗಳೂರಿನಲ್ಲಿ ಸೋಮವಾರ ಸಂಜೆ ನಡೆದ ಅನೌಪಚಾರಿಕ ಸಭೆಯಲ್ಲಿ ಈ ಹೆಸರನ್ನು ಮೊದಲು ಬಳಸಲಾಯಿತು ಎಂದು ಮೂಲಗಳು ತಿಳಿಸಿವೆ. ಎಲ್ಲ ಪಕ್ಷಗಳಿಂದಲೂ … Continued

ಏಕದಿನ ಕ್ರಿಕೆಟ್‌ ವಿಶ್ವಕಪ್ -2023ರ ವೇಳಾಪಟ್ಟಿ ಬಿಡುಗಡೆ; ಯಾವ ಸ್ಥಳದಲ್ಲಿ ಯಾವಾಗ ನಡೆಯುತ್ತದೆ..? ಸಂಪೂರ್ಣ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಏಕದಿನ ವಿಶ್ವಕಪ್ -2023 ಭಾರತದಲ್ಲಿ ಅಕ್ಟೋಬರ್‌ನಿಂದ ನವೆಂಬರ್‌ ವರೆಗೆ ನಡೆಯಲಿದ್ದು, ಏಕದಿನ ವಿಶ್ವಕಪ್ -2023 ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಪಂದ್ಯಾವಳಿ ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆನಡೆಯಲಿದೆ. ನವೆಂಬರ್ 19ರಂದು ಅಹಮದಾಬಾದ್ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಿಗದಿಯಾಗಿದೆ. ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ಹಣಾಹಣಿ ನಡೆಯಲಿದೆ. … Continued

ಪಾದರಕ್ಷೆ ತಯಾರಿಕೆಗೂ ʼಗುಣಮಟ್ಟದ ಮಾನದಂಡʼ ಅನುಸರಿಸುವುದು ಕಡ್ಡಾಯ : ಜುಲೈ 1ರಿಂದ ನಿಯಮ ಜಾರಿಗೆ

ನವದೆಹಲಿ : ದೊಡ್ಡ ಮತ್ತು ಮಧ್ಯಮ ಪ್ರಮಾಣದ ಪಾದರಕ್ಷೆ ತಯಾರಕರು ಮತ್ತು ಎಲ್ಲಾ ಆಮದುದಾರರು 24 ಪಾದರಕ್ಷೆಗಳು ಮತ್ತು ಸಂಬಂಧಿತ ಉತ್ಪನ್ನಗಳಿಗೆ ಜುಲೈ 1 ರಿಂದ ಕಡ್ಡಾಯ ಗುಣಮಟ್ಟದ ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ. ಇದು ಕಳಪೆ ಪಟ್ಟದ ಪಾದರಕ್ಷೆಗಳ ಆಮದುಗಳನ್ನು ತಡೆಯುವ ಉದ್ದೇಶ ಹೊಂದಿದೆ. ಸಣ್ಣ ಪ್ರಮಾಣದ ಪಾದರಕ್ಷೆ ತಯಾರಕರಿಗೆ ಗಡುವು ಜನವರಿ 1, 2024 ಆಗಿದೆ, … Continued

ಆಸ್ಟ್ರೇಲಿಯಾದಲ್ಲಿ ದೇವಾಲಯ ವಿಧ್ವಂಸಕ ಕೃತ್ಯಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಭಾರತ-ಆಸ್ಟ್ರೇಲಿಯಾ ಪ್ರತಿಜ್ಞೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಲ್ಬನೀಸ್ ಸಿಡ್ನಿಯಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಯ ಸಂದರ್ಭದಲ್ಲಿ ಹಿಂದೂ ದೇವಾಲಯಗಳ ಮೇಲಿನ ಇತ್ತೀಚಿನ ದಾಳಿಗಳು ಮತ್ತು ಆಸ್ಟ್ರೇಲಿಯಾದಲ್ಲಿ ಪ್ರತ್ಯೇಕತಾವಾದಿಗಳ ಚಟುವಟಿಕೆಗಳ ಕುರಿತು ಚರ್ಚಿಸಿದರು. ಪ್ರಧಾನಿ ಮೋದಿ ಮೂರು ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ. ದ್ವಿಪಕ್ಷೀಯ ಸಭೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಂಬಂಧಕ್ಕೆ … Continued

ದೇಶದಲ್ಲಿ ಹೊಸದಾಗಿ 9,629 ಸೋಂಕು ಪತ್ತೆ, 29 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 9,629 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆ 62,293ಕ್ಕೆ ತಲುಪಿದೆ. ಕೇರಳದಲ್ಲಿ 9, ದೆಹಲಿಯಲ್ಲಿ 6, ಮಹಾರಾಷ್ಟ್ರ … Continued