ಅಮೆರಿಕ, ಇರಾನ್ ಸುಸೈಡ್ ಡ್ರೋನ್ ಅಬ್ಬರದ ನಡುವೆ ಸದ್ದಿಲ್ಲದೆ ಸಜ್ಜಾಗುತ್ತಿದೆ ಭಾರತದ ಬ್ರಹ್ಮಾಸ್ತ್ರ ‘ಶೇಷನಾಗ-150 ಡ್ರೋನ್‌…

ನವದೆಹಲಿ: ಜಗತ್ತಿನಾದ್ಯಂತ ಈಗ ಡ್ರೋನ್ ಯುದ್ಧತಂತ್ರದ ಅಬ್ಬರ ಜೋರಾಗಿದೆ. ಇರಾನ್‌ನ ಅಗ್ಗದ ದರದ ‘ಶಾಹೆದ್-136’ (Shahed-136) ಸುಸೈಡ್ ಡ್ರೋನ್‌ಗಳು ಮತ್ತು ಅಮೆರಿಕದ ‘ಲ್ಯೂಕಾಸ್’ (LUCAS) ಡ್ರೋನ್‌ಗಳು ಸಾಂಪ್ರದಾಯಿಕ ಶಸ್ತ್ರಾಸ್ತ್ರಗಳಿಗಿಂತ ಕಡಿಮೆ ಖರ್ಚಿನಲ್ಲಿ ಯುದ್ಧಭೂಮಿಯಲ್ಲಿ ಭಾರಿ ಹಾನಿ ಉಂಟುಮಾಡುತ್ತಿವೆ. ಇದೇ ಮಾದರಿಯಲ್ಲಿ ಭಾರತವು ತನ್ನದೇ  ಡ್ರೋನ್‌ ಅನ್ನು ಸಿದ್ಧಪಡಿಸಿದೆ. ಬೆಂಗಳೂರು ಮೂಲದ ಡಿಫೆನ್ಸ್ ಸ್ಟಾರ್ಟ್‌ಅಪ್ ‘ನ್ಯೂಸ್ಪೇಸ್ ರಿಸರ್ಚ್ … Continued

‘ಆಪರೇಷನ್ ಸಿಂಧೂರ’ದಲ್ಲಿ ಪಾಕ್ ನಿದ್ದೆಗೆಡಿಸಿದ S-400 : ಮತ್ತೆ 5 ಸ್ಕ್ವಾಡ್ರನ್ ಖರೀದಿಗೆ ಭಾರತದ ನಿರ್ಧಾರ

ನವದೆಹಲಿ: ರಷ್ಯಾ ನಿರ್ಮಿತ S-400 ಕ್ಷಿಪಣಿ ವ್ಯವಸ್ಥೆಯ ಹೆಚ್ಚುವರಿ ಐದು ಸ್ಕ್ವಾಡ್ರನ್‌ಗಳನ್ನು ಖರೀದಿಸುವ ಮೂಲಕ ಭಾರತ ತನ್ನ ವಾಯು ರಕ್ಷಣಾ ಜಾಲವನ್ನು ಮತ್ತಷ್ಟು ಬಲಪಡಿಸಲು ಮುಂದಾಗಿದೆ. ಇತ್ತೀಚಿನ ‘ಆಪರೇಷನ್ ಸಿಂಧೂರ’ (Operation Sindoor) ಸಮಯದಲ್ಲಿ ಪಾಕಿಸ್ತಾನದ ವಾಯು ದಾಳಿಗಳನ್ನು ತಡೆಯುವಲ್ಲಿ ಈ ವ್ಯವಸ್ಥೆಯು ತೋರಿದ ಅದ್ಭುತ ಪ್ರದರ್ಶನದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ. ರಕ್ಷಣಾ ಮೂಲಗಳ … Continued

ವೀಡಿಯೊ | ಮಿಲಿಟರಿ ಇತಿಹಾಸದಲ್ಲೇ ಅತಿ ದೂರದ ಟಾರ್ಗೆಟ್‌ ಧ್ವಂಸ : 300 ಕಿಮೀ ದೂರದಲ್ಲೇ ವಿಮಾನ ಹೊಡೆದುರುಳಿಸಿದ ಭಾರತದ ಎಸ್-400…!

ನವದೆಹಲಿ: ಭಾರತೀಯ ವಾಯುಪಡೆಯು (IAF) ತನ್ನ ಅತ್ಯಾಧುನಿಕ ದೀರ್ಘ ವ್ಯಾಪ್ತಿಯ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯಾದ S-400 ಸುದರ್ಶನ ಕಾರ್ಯಾಚರಣೆಯ ರೋಚಕ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ವಾಯುಪಡೆ ಬಿಡುಗಡೆ ಮಾಡಿರುವ ಈ ವಿಡಿಯೊದಲ್ಲಿ, ರಾಡಾರ್ ವ್ಯವಸ್ಥೆಯು ಅತೀ ದೂರದಲ್ಲಿರುವ ವೈರಿ ಟಾರ್ಗೆಟ್‌ ಅನ್ನು ಪತ್ತೆಹಚ್ಚುತ್ತದೆ. ಕೂಡಲೇ ಕ್ಷಿಪಣಿಯು ಹಾರಿಹೋಗಿ ಆ ಟಾರ್ಗೆಟ್‌ ಅನ್ನು ಧ್ವಂಸಗೊಳಿಸಿದೆ. “ಸೇನಾ … Continued

ಟಿ20 ವಿಶ್ವಕಪ್‌ : ತಂಡಕ್ಕೆ ಮರಳಿದ್ದ ಮರುದಿನವೇ ರಿಂಕು ಸಿಂಗ್ ತಂದೆ ನಿಧನ

ನವದೆಹಲಿ : ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಅವರ ತಂದೆ ಖಾಂಚಂದ್ ಸಿಂಗ್ (61) ಅವರು ನಾಲ್ಕನೇ ಹಂತದ ಕ್ಯಾನ್ಸರ್‌ನಿಂದಾಗಿ ಶುಕ್ರವಾರ ಮೃತಪಟ್ಟಿದ್ದಾರೆ. ಗ್ರೇಟರ್ ನೋಯ್ಡಾದ ಯಥಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಕಳೆದ ಕೆಲವು ದಿನಗಳಿಂದ ಕ್ಷೀಣಿಸಿತ್ತು. ಪ್ರಸ್ತುತ ಟಿ20 ವಿಶ್ವಕಪ್‌ಗಾಗಿ ತಂಡದೊಂದಿಗೆ ಇರುವ ರಿಂಕು ಸಿಂಗ್, … Continued

ಟಿ20 ವಿಶ್ವಕಪ್ ; ಜಿಂಬಾಬ್ವೆ ವಿರುದ್ಧ ಭರ್ಜರಿಯಾಗಿ ಗೆದ್ದ ನಂತರ ಈಗ ಭಾರತದ ಸೆಮಿಫೈನಲ್ ಪ್ರವೇಶದ ಲೆಕ್ಕಾಚಾರ ಏನು..?

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನಿಂದ ಕಂಗೆಟ್ಟಿದ್ದ ಸೂರ್ಯಕುಮಾರ ಯಾದವ್ ನಾಯಕತ್ವದ ಭಾರತ ತಂಡವು ಜಿಂಬಾಬ್ವೆ ವಿರುದ್ಧ 72 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಫಾರ್ಮ್‌ಗೆ ಮರಳಿದೆ. ಈ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಪ್ರವೇಶಿಸುವ ಆಸೆ ಮತ್ತೆ ಚಿಗುರಿದೆ. ಜಿಂಬಾವ್ವೆ ವಿರುದ್ಧ ಮೊದಲು ಬ್ಯಾಟ್ ಮಾಡಿದ ಭಾರತದ ತಂಡವು ಅಭಿಷೇಕ ಶರ್ಮಾ (55) ಮತ್ತು ಹಾರ್ದಿಕ್ … Continued

ಬೆಂಗಳೂರು : ಕೇರಳ ಪೊಲೀಸರ ಕಾರ್ಯಾಚರಣೆ ; 1 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ

ಬೆಂಗಳೂರು : ಅಂತಾರಾಜ್ಯ ಮಾದಕವಸ್ತು ಜಾಲದ ವಿರುದ್ಧ ಕೇರಳ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಅಸ್ಸಾಂ ಮೂಲದ ಪೆಡ್ಲರ್ ಧೀರೇಶ ಕುಟುಮ್ (27) ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಮಾದಕವಸ್ತು ನಿಗ್ರಹ ದಳದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಟಿ20 ವಿಶ್ವಕಪ್‌ : ಇಂದಿನ ಪಂದ್ಯದಲ್ಲಿ ಭಾರತದ ಭವಿಷ್ಯ ನಿರ್ಧಾರ : ಸೆಮಿಫೈನಲ್ ಪ್ರವೇಶಕ್ಕೆ ಇರುವ 3 ಪ್ರಮುಖ ಹಾದಿಗಳು…

2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪ್ರವೇಶಿಸಲು ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಇಂದು ಗುರುವಾರ (ಫೆ.೨೬) ಅತ್ಯಂತ ನಿರ್ಣಾಯಕ ದಿನವಾಗಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಸೋಲು ಅನುಭವಿಸಿರುವುದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಗುರುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ಮತ್ತು ಭಾರತ … Continued

ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಮುನ್ನ ಭಾರತ ತಂಡ ಸೇರಿಕೊಳ್ಳಲಿರುವ ಬ್ಯಾಟರ್‌ ರಿಂಕು ಸಿಂಗ್

ಚೆನ್ನೈ: ಫೆಬ್ರವರಿ 25, ಬುಧವಾರ ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ಬ್ಯಾಟಿಂಗ್ ಕೋಚ್ ನೀಡಿದ ಮಾಹಿತಿ ಪ್ರಕಾರ, ರಿಂಕು ಸಿಂಗ್ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಮತ್ತೆ ಸೇರಿಕೊಳ್ಳಲಿದ್ದಾರೆ. ಗುರುವಾರ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಸೂಪರ್ 8 ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಕುಟುಂಬದ ತುರ್ತು ಪರಿಸ್ಥಿತಿಯ ಕಾರಣದಿಂದಾಗಿ … Continued

ಭಾರತ-ಪಾಕಿಸ್ತಾನ ಯುದ್ಧದಲ್ಲಿ ನಾನು ಮಧ್ಯ ಪ್ರವೇಶಿಸದಿದ್ರೆ ಪಾಕ್ ಪ್ರಧಾನಿ ಸಾಯುತ್ತಿದ್ದರು ಎಂದು ಟ್ರಂಪ್ ಹೇಳಿದರೆ..? ವೀಡಿಯೊ ವೈರಲ್‌

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎರಡನೇ ಅವಧಿಯ ‘ಸ್ಟೇಟ್ ಆಫ್ ದಿ ಯೂನಿಯನ್’ ಭಾಷಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ಕುರಿತು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ನನ್ನ ಮಧ್ಯಸ್ಥಿಕೆ ಇಲ್ಲದಿದ್ದರೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಸಾಯುತ್ತಿದ್ದರು ಎಂದು 3.5 ಕೋಟಿ ಜನರು ಹೇಳುತ್ತಿದ್ದಾರೆ” ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಅಮೆರಿಕದ … Continued

ಟಿ20 ವಿಶ್ವಕಪ್ : ತುರ್ತು ಕಾರಣಕ್ಕೆ ಮನೆಗೆ ತೆರಳಿದ ಬ್ಯಾಟರ್‌ ರಿಂಕು ಸಿಂಗ್‌ ; ಜಿಂಬಾವ್ವೆ ವಿರುದ್ಧ ಆಡುವುದು ಅನುಮಾನ

ನವದೆಹಲಿ : ಭಾರತ ತಂಡದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಅವರು ಕುಟುಂಬದಲ್ಲಿ ಎದುರಾಗಿರುವ ತುರ್ತು ಪರಿಸ್ಥಿತಿಯಿಂದಾಗಿ ಟಿ20 ವಿಶ್ವಕಪ್ ತಂಡವನ್ನು ಅರ್ಧದಲ್ಲೇ ಬಿಟ್ಟು ಮನೆಗೆ ಮರಳಿದ್ದಾರೆ. ಫೆಬ್ರವರಿ 23ರಂದು ತಂಡದೊಂದಿಗೆ ಚೆನ್ನೈಗೆ ಪ್ರಯಾಣಿಸಿದ್ದ ರಿಂಕು, ಮಂಗಳವಾರ ಬೆಳಿಗ್ಗೆಯೇ ಅಲ್ಲಿಂದ ಹೊರಟಿದ್ದಾರೆ. ಫೆಬ್ರವರಿ 26ರಂದು ಜಿಂಬಾಬ್ವೆ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರಿಂಕು ಸಿಂಗ್ ಕಣಕ್ಕಿಳಿಯುವುದು ಅನುಮಾನ … Continued